ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿಂಬೆ ಹಣ್ಣಿನ ಕೃಷಿಯಿಂದ ಪಡೆಯಿರಿ ಹೆಚ್ಚಿನ ಲಾಭ

Twitter
Facebook
LinkedIn
WhatsApp
types of lemons 2

ನಿಂಬೆ ಹಣ್ಣು ಬಹು ಉಪಯೋಗಿ ಹಣ್ಣಾಗಿದ್ದು ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆಯಿದೆ ಈ ತೋಟಗಾರಿಕಾ ಬೆಳೆಯಾದ ನಿಂಬೆಹಣ್ಣನ್ನು ಇಳುವರಿಯೊಂದಿಗೆ ಉತ್ತಮ ಆದಾಯ ಗಳಿಸಬಹದು. ಹೊಸದಾಗಿ ನಿಂಬೆ ಕೃಷಿ ಆರಂಭಿಸುವವರು ಗಿಡ ನಾಟಿಗೆ ಬೀಜದಿಂದ ತಯಾರಿಸಿದ ಗಿಡಗಳನ್ನು ಆಯ್ದುಕೊಳ್ಳುವುದು ಒಳ್ಳೆಯದು. ಮೇ ತಿಂಗಳ ಮೊದಲ ವಾರದಲ್ಲಿ ಗಿಡ ನಾಟಿ ಮಾಡಿದರೆ ಮಳೆ ನೀರಿನ ಬಲದಿಂದ ಉತ್ತಮವಾಗಿ ಬೆಳೆದು ನಿಲ್ಲುತ್ತದೆ. ಬೇಸಿಗೆಯಲ್ಲಿ ಗಿಡ ನೆಟ್ಟರೆ ಬೆಳೆಯುವ ಗಿಡಗಳಿಗೆ ನೀರು ಸಾಲದೆ ವಾತಾವರಣದ ಬಿಸಿಲಿಗೆ ಗಿಡ ಹೊಂದಿಕೊಳ್ಳದೆ ಬೆಳವಣಿಗೆ ಕುಂಠಿತಗೊಳ್ಳುತ್ತದೆ. ಇಳುವರಿಯಲ್ಲಿ ವ್ಯತ್ಯಯವಾಗುತ್ತದೆ. ಗಿಡಗಳ ಆಯಸ್ಸು ಕ್ಷಿಣಿಸುತ್ತದೆ. ಗಿಡ ಹಚ್ಚಿದ ನಂತರ ಬುಡವನ್ನು ಬಿಡಿಸಿಕೊಡಬೇಕು. ಒಣಗಿದ ಗೆಲ್ಲುಗಳನ್ನು ತೆಗೆದುಬಿಡಬೇಕು. ಗಿಡಗಳಿಂದ ಇಳುವರಿ ಪಡೆಯಲುಮೂರು ವರ್ಷ ಕಾಯಬೇಕು. ಈ ಸಂದರ್ಭ ಆ ಭೂಮಿಯಲ್ಲಿ ಉತ್ಪಾದನೆ ಪಡೆಯಲು ಅಂತರ ಬೇಸಾಯವಾಗಿ ಪಪ್ಪಾಯ, ನುಗ್ಗೆ ಕೃಷಿ ಮಾಡಿದರೆ ಉತ್ತಮ

ನಿಂಬೆ ಹಣ್ಣಿನ ಕೃಷಿಯಿಂದ ಪಡೆಯಿರಿ ಹೆಚ್ಚಿನ ಲಾಭ

ಲಿಂಬೆಯನ್ನು ಇತರ ಬಹುವಾರ್ಷಿಕ ಬೆಳೆಗಳಲ್ಲಿ ಅಂತರ ಬೆಳೆಯಾಗಿ ಬೆಳೆಯಬಹುದಾಗಿದೆ . ತೆಂಗಿನ ತೋಟದಲ್ಲಿ ಲಿಂಬೆಯನ್ನು ಅಂತರ ಬೆಳೆಯಾಗಿ ಅಳವಡಿಸಬಹುದಾಗಿದೆ . ಎರಡು ತೆಂಗಿನ ಸಾಲುಗಳ ಮಧ್ಯೆ ಬಿಸಿಲು ಸಾಕಷ್ಟು ಬೀಳುವಲ್ಲಿ ಲಿಂಬೆಗಿಡಗಳನ್ನು ಬೆಳೆಸಬಹುದಾಗಿದೆ . ಇದೇ ರೀತಿ ಲಿಂಬೆಯನ್ನು ಕಾಫಿ ಮತ್ತು ಸಪೋಟ ತೋಟಗಳಲ್ಲಿ ಅಂತರ ಬೆಳೆಯಾಗಿ ಬೆಳೆಸಬಹುದಾಗಿದೆ .

ಚೆನ್ನಾಗಿ ನೀರು ಬಸಿದು ಹೋಗುವಂತಹ 2-3 ಮೀ . ( 8-10 ಅಡಿ ) ಆಳವಿರುವ ಗೋಡು ಮಣ್ಣು ಪ್ರದೇಶಗಳನ್ನು ಈ ಬೆಳೆಗಳಿಗೆ ಆಯ್ಕೆ ಮಾಡಬೇಕು . ಲಿಂಬೆಗೆ ತೇವಾಂಶಯುಕ್ತ ಉಷ್ಣ ಹವಾಗುಣ ಸೂಕ್ತ . ಕಡಿಮೆ ತಾಪಮಾನ ಮತ್ತು ಬಿರುಗಾಳಿ ಬೀಸುವ ಪ್ರದೇಶಗಳು ಸೂಕ್ತವಲ್ಲ . ಒಣಹವೆಯಲ್ಲಿ ಇದು ಚೆನ್ನಾಗಿ ಬರುತ್ತದೆ . ಜೂನ್ – ಆಗಸ್ಟ್ ತಿಂಗಳುಗಳು ನಾಟಿಗೆ ಸಕಾಲ. ಸಸಿ ಬೆಳೆಸಲು ಬೇಕಾಗುವ ಬಿತ್ತನೆ ಬೀಜ ಪಡೆಯಲು ದೊಡ್ಡದಾದ ರಸಭರಿತ ತೆಳು ಸಿಪ್ಪೆಯ ಹಣ್ಣುಗಳನ್ನು ಆಯ್ಕೆ ಮಾಡಬೇಕು .ಸಾವಯುವ ಗೊಬ್ಬರವನ್ನು ಒಂದು ಸಸಿಗೆ ಪ್ರಾರಂಭದಲ್ಲಿ 5 ಕೆಜಿ ಕೊಡಬೇಕು ನಂತರ ವರ್ಷದಲ್ಲಿ ಜ್ಯಾಸ್ತಿ ಮಾಡಿಕೊಳ್ಳುತ್ತ ಹೋಗಬೇಕು. ಅಂದರೆ ವರ್ಷ ವರ್ಷ ೫ ಕೆಜಿ ಹೆಚ್ಚು ಮಾಡಿಕೊಳ್ಳುತ್ತಾ ಹೋಗಬೇಕು,

ನಿಂಬೆ ಗಿಡಗಳು ನಾಟಿ ಮಾಡಿದ ಮೂರು ವರ್ಷಕ್ಕೆ ಇಳುವರಿ ನೀಡಲು ಆರಂಭಿಸುತ್ತದೆ. ಸುಲಭ ನಿರ್ವಹಣೆಯಿಂದ ಉತ್ತಮ ಇಳುವರಿ ಪಡೆಯಬಹುದು. ಗಿಡಗಳಿಗೆ ಡ್ರಿಪ್‌ ಮೂಲಕ ನೀರು ಹಾಯಿಸಿಬೇಕು. ಗಿಡದ ಬುಡದಿಂದ ಮೂರು ಅಡಿ ಸುತ್ತಳತೆಯಲ್ಲಿ ಹನಿಹನಿಯಾಗಿ ನೀರು ಬೀಳುವಂತೆ ಮಾಡಬೇಕು. ಹನಿ ನೀರುಣ್ಣುವನಿಂಬೆ ಗಿಡಗಳು ಭರ್ತಿ ಫಸಲನ್ನು ಹೊತ್ತು ನಿಲ್ಲುತ್ತವೆ.

ಒಂದು ತಿಂಗಳಲ್ಲಿ 70ರಿಂದ 400 ರೂ.ಗೆ ನಿಂಬೆ ಹಣ್ಣಾಗಿದೆ. ತರಕಾರಿ ಮಾರಾಟಗಾರರು 1 ನಿಂಬೆ ಹಣ್ಣನ್ನು 10 ರೂ.ಗೆ ನೀಡುತ್ತಿದ್ದಾರೆ.ವಿವಿಧ ರಾಜ್ಯಗಳಲ್ಲಿ ರೈತರು ವಿವಿಧ ತಳಿಯ ನಿಂಬೆಯನ್ನು ಬೆಳೆಯುತ್ತಾರೆ. ನಿಂಬೆ ಗಿಡವನ್ನು ಒಮ್ಮೆ ನೆಟ್ಟರೆ 10 ವರ್ಷಗಳವರೆಗೆ ಇಳುವರಿ ಪಡೆಯಬಹುದು . ನಿಂಬೆ ಗಿಡವು ಸುಮಾರು 3 ವರ್ಷಗಳ ನಂತರ ಚೆನ್ನಾಗಿ ಬೆಳೆಯುತ್ತದೆ. ಇದರ ಸಸ್ಯಗಳು ವರ್ಷವಿಡೀ ಇಳುವರಿಯನ್ನು ನೀಡುತ್ತವೆ.

lemon-demand
  • ಮುಖದ ಮೇಲೆ ಉಂಟಾಗುವ ಮೊಡವೆಗಳನ್ನು ಹೋಗಲಾಡಿಸಲು ನಿಂಬೆ ಹಣ್ಣು ಸಹಾಯ ಮಾಡುತ್ತದೆ. ನಿಂಬೆ ಹಣ್ಣಿಗೆ ಒಂದು ಹನಿ ಜೇನುತುಪ್ಪ ಬೆರೆಸಿ, ಮುಖಕ್ಕೆ ಹಚ್ಚಿ 15 ನಿಮಿಷಗಳ ನಂತರ ತೊಳೆದರೆ, ಮುಖದ ಮೇಲಿನ ಕಪ್ಪು ಕಲೆಗಳು ಮಾಯವಾಗಿ, ಚರ್ಮ ಕಾಂತಿಯುತವಾಗುತ್ತದೆ. ಡೆಡ್ ಸ್ಕಿನ್ ತೆಗೆಯಲು ನಿಂಬೆ ಹಣ್ಣು ಉತ್ತಮ ಔಷಧ.
  • ಪ್ರತಿ ದಿನ ರಾತ್ರಿ ಮಲಗುವ ಮೊದಲು ಒಂದು ಲೋಟ ನೀರಿಗೆ ಒಂದು ಚಮಚದಷ್ಟು ನಿಂಬೆ ರಸ ಸೇರಿಸಿ ಸೇವಿಸಿದರೆ ನಿಶ್ಶಕ್ತಿ ಕಡಿಮೆಯಾಗುತ್ತದೆ.
  • ನಿಂಬೆರಸದೊಂದಿಗೆ ಉಪ್ಪು ಮತ್ತು ಅಡುಗೆ ಸೋಡಾವನ್ನು ಸೇರಿಸಿ ಹಲ್ಲುಜ್ಜುವುದರಿಂದ ದಂತ ಸಮಸ್ಯೆ ನಿಯಂತ್ರಣವಾಗುತ್ತದೆ. ಈ ನೀರಿನಲ್ಲಿ ಬಾಯಿಮುಕ್ಕಳಿಸುವುದರಿಂದ ವಸಡುಗಳು ಶಕ್ತಿಯುತವಾಗುತ್ತವೆ.
  • ನಿಂಬೆ ಹಣ್ಣು, ಹಾಲಿನ ಕೆನೆ, ಜೇನುತುಪ್ಪವನ್ನು ಮಿಶ್ರಣ ಮಾಡಿ, ಅದಕ್ಕೆ ಸ್ವಲ್ಪ ಅರಿಶಿಣ ಸೇರಿಸಿ ಮುಖಕ್ಕೆ ಹಚ್ಚಿಕೊಂಡರೆ ಮುಖದ ಕಾಂತಿ ಹೆಚ್ಚಿಸುತ್ತದೆ.
  • ನಿಂಬೆರಸವನ್ನು ತಲೆಗೂದಲಿಗೆ ಹಚ್ಚಿ ತಲೆ ಸ್ನಾನ ಮಾಡುವುದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ.
  • ನಿಂಬೆ ಹಣ್ಣಿಗೆ ಹೋಲಿಸಿದರೆ ನಿಂಬೆಹಣ್ಣಿನ ಸಿಪ್ಪೆಯಲ್ಲಿ ಸುಮಾರು ಐದರಿಂದ ಹತ್ತು ಪಟ್ಟು ಹೆಚ್ಚು ವಿಟಮಿನ್ ಅಂಶಗಳು ಸಿಗುತ್ತವೆ. ನಿಂಬೆಹಣ್ಣು ಕೇವಲ ನಿಮ್ಮ ಆರೋಗ್ಯವನ್ನು ವೃದ್ಧಿಸುವುದು ಮಾತ್ರವಲ್ಲದೆ ಬಹಳಷ್ಟು ಸೋಂಕುಗಳಿಂದ ನಿಮಗೆ ರಕ್ಷಣೆ ನೀಡುತ್ತದೆ.
  • ಲೆಮನ್ ಟೀ ಸೇವಿಸುವುದರಿಂದ ನೆಗಡಿ ಶಮನವಾಗುತ್ತದೆ.
  • ನಿಂಬೆ ಹಣ್ಣಿನಲ್ಲಿ ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಂತಹ ಲಕ್ಷಣಗಳು ಸಿಗುತ್ತವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ