ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

 ನಿರ್ಮಾ ಹುಡುಗಿಗೆ ವಿರೂಪಾಕ್ಷಪ್ಪ, ಈಶ್ವರಪ್ಪ ಮುಖ ಅಂಟಿಸಿ ಅಮಿತ್‌ ಶಾಗೆ ಸ್ವಾಗತ!

Twitter
Facebook
LinkedIn
WhatsApp
inbound2397521067237022798 1

ಹೈದರಾಬಾದ್‌ (ಮಾರ್ಚ್‌ 13, 2023): ವಾಷಿಂಗ್ ಪೌಡರ್‌ ನಿರ್ಮಾ ಜಾಹೀರಾತಿನಲ್ಲಿ ಬರುವ ಹುಡುಗಿ ಹಾಗೂ ಆ ಜಾಹೀರಾತು ನಿಮಗೆಲ್ಲ ಗೊತ್ತಿರಲೇಬೇಕಲ್ವ.. ಬಹುತೇಕರು, ಈ ಜಾಹೀರಾತನ್ನು ಇನ್ನೂ ಮರೆತಿರುವುದಿಲ್ಲ. ಈಗ್ಯಾಕೆ ಆ ಜಾಹೀರಾತಿನ ವಿಚಾರ ಅಂತೀರಾ.. ತೆಲಂಗಾಣಕ್ಕೆ ಭಾನುವಾರ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಮುಜುಗರ ಉಂಟುಮಾಡಬೇಕೆಂದು ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರ ಬಿಆರ್‌ಎಸ್‌ ಪಕ್ಷ ಕರ್ನಾಟಕದ ಬಿಜೆಪಿ ನಾಯಕ ಕೆ.ಎಸ್‌.ಈಶ್ವರಪ್ಪ ಹಾಗೂ ಇತ್ತೀಚೆಗೆ ಲಂಚ ಪ್ರಕರಣದಲ್ಲಿ ಸಿಕ್ಕಿಬಿದ್ದ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಮುಖ ಬಳಸಿ ಫ್ಲೆಕ್ಸ್‌ ಅಳವಡಿಕೆ ಮಾಡಿದೆ.

ಪ್ರಸಿದ್ಧ ವಾಷಿಂಗ್‌ ಪೌಡರ್‌ ನಿರ್ಮಾ (Washing Powder Nirma) ಜಾಹೀರಾತಿನ (Advertisement) ಹುಡುಗಿಯ ಮುಖದ ಜಾಗದಲ್ಲಿ ಬಿಜೆಪಿಯ (BJP) ಕೆಲ ಪಕ್ಷಾಂತರಿ ಹಾಗೂ ಭ್ರಷ್ಟಾಚಾರ ಆರೋಪಿ ನಾಯಕರಾದ ಹಿಮಂತ ಬಿಸ್ವಾ ಶರ್ಮಾ (Himanta Biswa Sarma), ಜ್ಯೋತಿರಾದಿತ್ಯ ಸಿಂಧಿಯಾ, ನಾರಾಯಣ ರಾಣೆ, ಮಾಡಾಳು ವಿರೂಪಾಕ್ಷಪ್ಪ (Madal Virupakshappa), ಈಶ್ವರಪ್ಪ (Eshwarappa), ಸುವೇಂದು ಅಧಿಕಾರಿ, ಸುಜನಾ ಚೌಧರಿ ಮುಂತಾದವರ ಮುಖಗಳನ್ನು ಅಳವಡಿಸಿ ಬಿಆರ್‌ಎಸ್‌ ಪಕ್ಷ ಫ್ಲೆಕ್ಸ್‌ ಹಾಕಿದೆ. ಈ ಕುರಿತು ಟ್ವೀಟ್‌ ಮಾಡಿರುವ ಬಿಆರ್‌ಎಸ್‌ ನಾಯಕರೊಬ್ಬರು, ‘ವಾಷಿಂಗ್‌ ಪೌಡರ್‌ ನಿರ್ಮಾ! ದಿಸ್‌ ಈಸ್‌ ಕಾಲ್ಡ್‌ ಕರ್ಮಾ ಅಮಿತ್ ಶಾ (Amit Shah) ಜೀ.. ವೆಲ್ಕಮ್‌ ಟು ಹೈದರಾಬಾದ್‌ (Hyderabad)’ ಎಂದು ಬರೆದಿದ್ದಾರೆ.

ದೆಹಲಿಯ ಮದ್ಯ ಹಗರಣದಲ್ಲಿ (Delhi Liquor Scam) ಬಿಆರ್‌ಎಸ್‌ (BRS) ಶಾಸಕಿ  ಹಾಗೂ ಸಿಎಂ ಕೆಸಿಆರ್‌ (KCR) ಅವರ ಪುತ್ರಿ ಕವಿತಾ (Kavitha) ಅವರನ್ನು ವಿಚಾರಣೆಗೆ ಒಳಪಡಿಸುತ್ತಿರುವುದಕ್ಕೆ ಪಕ್ಷ ಅಮಿತ್‌ ಶಾ ಎದುರು ಹೀಗೆ ಪ್ರತಿಭಟನೆ ವ್ಯಕ್ತಪಡಿಸಿದೆ. ಇದೇ ಮೊದಲ ಬಾರಿ ದೆಹಲಿಯಿಂದ ಹೊರಗೆ ಕೇಂದ್ರೀಯ ಔದ್ಯೋಗಿಕ ಭದ್ರತಾ ಪಡೆಗಳ (ಸಿಐಎಸ್‌ಎಫ್‌) 54ನೇ ಸಂಸ್ಥಾಪನಾ ದಿನವನ್ನು ಭಾನುವಾರ ಹೈದರಾಬಾದ್‌ನಲ್ಲಿ ಆಯೋಜಿಸಲಾಗಿತ್ತು. ಅದಕ್ಕೆ ಅಮಿತ್‌ ಶಾ ಆಗಮಿಸಿದ್ದರು. ಅವರನ್ನು ಸ್ವಾಗತಿಸಲು ತಿರುಚಿದ ಫ್ಲೆಕ್ಸ್‌ ಅಳವಡಿಸಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ