ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿವೃತ್ತ ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಸೆಕ್ಯುರಿಟಿ ಕೆಲಸ! ಬಾರಿ ವಿವಾದಕ್ಕೀಡಾದ ಬಿಜೆಪಿ ನಾಯಕನ ವಿವಾದಾತ್ಮಕ ಹೇಳಿಕೆ

Twitter
Facebook
LinkedIn
WhatsApp
ನಿವೃತ್ತ ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಸೆಕ್ಯುರಿಟಿ ಕೆಲಸ! ಬಾರಿ ವಿವಾದಕ್ಕೀಡಾದ ಬಿಜೆಪಿ ನಾಯಕನ ವಿವಾದಾತ್ಮಕ ಹೇಳಿಕೆ

ಹೊಸದಿಲ್ಲಿ: ಅಗ್ನಿಪಥ್ ಯೋಜನೆಯಡಿ ಸೇನೆಗೆ ನೇಮಕಗೊಂಡು ನಾಲ್ಕು ವರ್ಷದ ಬಳಿಕ ನಿವೃತ್ತಿಯಾದಾಗ ನಮ್ಮ ಗತಿಯೇನು? ಎಂದು ಸೇನಾ ಆಕಾಂಕ್ಷಿಗಳು ಪ್ರಶ್ನಿಸುತ್ತಿದ್ದಾರೆ. ಅವರಿಗೆ ರಕ್ಷಣಾ ಇಲಾಖೆ, ಪೊಲೀಸ್ ಹಾಗೂ ಇತರೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಮತ್ತಿತರ ಸವಲತ್ತಿನ ಪಟ್ಟಿಯನ್ನು ಸರ್ಕಾರ ನೀಡುತ್ತಿದೆ. ಆದರೆ ಬಿಜೆಪಿಯ ಕೆಲವು ನಾಯಕರ ಹೇಳಿಕೆಗಳು ವಿವಾದದ ಬೆಂಕಿಗೆ ತುಪ್ಪ ಸುರಿಯುತ್ತಿವೆ.ಅಗ್ನಿಪಥ್ ಯೋಜನೆಯಡಿ ನೇಮಕಗೊಂಡು ನಿವೃತ್ತರಾದ ಅಗ್ನಿವೀರರಿಗೆ ಸಿಗುವ ಉದ್ಯೋಗಗಳ ಬಗ್ಗೆ ಬಿಜೆಪಿ ನಾಯಕರಾದ ಜಿ ಕಿಶನ್ ರೆಡ್ಡಿ ಮತ್ತು ಕೈಲಾಶ್ ವಿಜಯವರ್ಗೀಯ ನೀಡಿರುವ ಹೇಳಿಕೆಗಳು ವಿವಾದದ ಕಿಡಿ ಹೊತ್ತಿಸಿದೆ.ಗ್ನಿಪಥ್ ಯೋಜನೆ ಗೊಂದಲ ಹಾಗೂ ಸೇನಾ ಆಕಾಂಕ್ಷಿ ಯುವಕರ ಆತಂಕಗಳಿಗೆ ಸಾಂತ್ವನ ಹೇಳುವ ಬದಲು, ಆಡಳಿತಾರೂಢ ಬಿಜೆಪಿ ನಾಯಕರು ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಿಪಕ್ಷಗಳು ಕಿಡಿಕಾರಿವೆ.ಅಗ್ನಿಪಥ್ ಯೋಜನೆಯಡಿ ನಾಲ್ಕು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗುವ ಅಗ್ನಿವೀರರನ್ನು ಬಿಜೆಪಿ ಕಚೇರಿಗಳಲ್ಲಿ ಸೆಕ್ಯುರಿಟಿಗಳನ್ನಾಗಿ ನೇಮಕ ಮಾಡಲಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಹೇಳಿದ್ದಾರೆ.

ಕೈಲಾಶ್ ವಿಜಯವರ್ಗೀಯ ಅವರು ಸುದ್ದಿಗಾರರ ಜತೆ ಮಾತನಾಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಕ್ಷದ ಕಚೇರಿಯಲ್ಲಿ ಸೆಕ್ಯುರಿಟಿ ಇರಿಸಿಕೊಳ್ಳಲು ಬಯಸಿದರೆ, ಅಗ್ನಿವೀರರಿಗೆ ಆದ್ಯತೆ ನೀಡುವುದಾಗಿ ಅವರು ಹೇಳಿದ್ದಾರೆ. “ಅಗ್ನಿವೀರರು ಸೇನಾ ತರಬೇತಿ ಪಡೆದು, ನಾಲ್ಕು ವರ್ಷಗಳ ನಂತರ ಸೇವೆಯಿಂದ ಹೊರಬಂದರೆ, ಅವರಿಗೆ 11 ಲಕ್ಷ ರೂಪಾಯಿ ಸಿಗಲಿದೆ ಮತ್ತು ಅಗ್ನಿವೀರ್ ಎಂಬ ಬ್ಯಾಡ್ಜ್ ಧರಿಸಲಿದ್ದಾರೆ. ಬಿಜೆಪಿ ಕಚೇರಿಗೆ ನಾನು ಭದ್ರತಾ ಸಿಬ್ಬಂದಿಯನ್ನು ನೇಮಿಸಲು ಬಯಸಿದರೆ, ನಾನು ಅಗ್ನಿವೀರರಿಗೆ ಆದ್ಯತೆ ನೀಡುತ್ತೇನೆ” ಎಂದಿದ್ದಾರೆ.”ದೇಶದ ಯುವಕರು ದೈಹಿಕ ಪರೀಕ್ಷೆ ಪಾಸಾಗಲು ಹಗಲು ರಾತ್ರಿ ಶ್ರಮಿಸುವುದು ಅವರು ಸೇನೆಯನ್ನು ಸೇರಿಕೊಂಡು ಇಡೀ ಜೀವನವನ್ನು ದೇಶ ಸೇವೆಗೆ ಮುಡಿಪಾಗಿಡುವ ಸಲುವಾಗಿಯೇ ವಿನಾ, ಅವರು ಬಿಜೆಪಿ ಕಚೇರಿಯಲ್ಲಿ ಕಾವಲುಗಾರರಾಗಿ ಸೇರಲು ಬಯಸುತ್ತಾರೆ ಎಂದಲ್ಲ” ಎಂದು ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ.

“ಅಗ್ನಿಪತ್ ಯೋಜನೆ ಕುರಿತಾದ ಎಲ್ಲ ಅನುಮಾನಗಳನ್ನು ಬಿಜೆಪಿಯ ಕೈಲಾಶ್ ವಿಜಯವರ್ಗೀಯ ನಿವಾರಿಸಿದ್ದಾರೆ” ಎಂದು ಕಾಂಗ್ರೆಸ್ ಹೇಳಿದೆ.ಅಗ್ನಿಪಥ್ ಯೋಜನೆಯಡಿ ನೇಮಕಗೊಳ್ಳುವ ಯುವಕರಿಗೆ ಚಾಲಕರು, ಎಲೆಕ್ಟ್ರಿಷಿಯನ್, ವಾಷರ್‌ಮೆನ್, ಕ್ಷೌರಿಕರು ಮತ್ತು ಇತರೆ ವೃತ್ತಿಪರರ ಕೌಶಲಗಳ ತರಬೇತಿ ನೀಡಲಾಗುತ್ತದೆ ಎಂದು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಹೇಳಿದ್ದಾರೆ. ಅವರ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ