ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೀರಲ್ಲಿ ಮುಳುಗುತ್ತಿದ್ದ ಹೆಣ್ಣು ಮಕ್ಕಳನ್ನು ಕಾಪಾಡಿದ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ

Twitter
Facebook
LinkedIn
WhatsApp
1 3

ಶಿರಾ (ಜ.30): ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಹೆಣ್ಣು ಮಕ್ಕಳನ್ನು ಕೆಎಸ್‌ಆರ್‌ಟಿಸಿ ಡ್ರೈವರ್‌ ನೀರಿಗೆ ಜಿಗಿದು ಬಾಲಕಿಯರನ್ನು ಕಾಪಾಡಿರುವ ಘಟನೆ ತಾಲೂಕಿನ ಹಂದಿಕುಂಟೆ ಗ್ರಾಮದಲ್ಲಿ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಮಂಜುನಾಥ ಅವರು ಶಿರಾದಿಂದ ನಾಗಪ್ಪನಹಳ್ಳಿ ಗೇಟ್‌ ಮಾರ್ಗವಾಗಿ ಸಂಚರಿಸುತ್ತಿದ್ದಾಗ ಹಂದಿಕುಂಟೆ ಅಗ್ರಹಾರ ಕೆರೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ನೀರಿನಲ್ಲಿ ಮುಳುಗುತ್ತಿರುವುದನ್ನು ಗಮನಿಸಿ ತಕ್ಷಣ ಬಸ್ಸನ್ನು ರಸ್ತೆಯ ಪಕ್ಕಕ್ಕೆ ನಿಲ್ಲಿಸಿ ನೀರಿಗೆ ಜಿಗಿದು ಇಬ್ಬರು ಹೆಣ್ಣು ಮಕ್ಕಳನ್ನು ನೀರಿನಿಂದ ಹೊರಕ್ಕೆ ತಂದು ಜೀವ ಉಳಿಸಿದ್ದಾರೆ. 

ಕೆಎಸ್‌ಆರ್‌ಟಿಸಿ ಚಾಲಕ ಮಂಜುನಾಥ ಅವರ ಕಾರ್ಯಕ್ಕೆ ಶಿರಾ ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕ ವಿನೋದ್‌ ಅಮ್ಮನಗಿ ಹಾಗೂ ಶಿರಾ ತಾಲೂಕಿನ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೇ ಮಾಜಿ ಸಚಿವ ಸುರೇಶ್‌ ಕುಮಾರ್‌ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು, ಚಾಲಕನ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ರಸ್ತೆ ಸುರಕ್ಷತಾ ಸಪ್ತಾಹ: ಕೊರಟಗೆರೆ ತಾಲೂಕಿನ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ರಸ್ತೆ ಸುರಕ್ಷಿತ ಸಪ್ತಾಹ ಅಭಿಯಾನದಡಿಯಲ್ಲಿ ಶಾಲಾ ಮಕ್ಕಳಿಗೆ ರಸ್ತೆಯ ಸುರಕ್ಷತೆಯ ಬಗ್ಗೆ ಹಾಗೂ ಪರಿವಾರದ ಕಾಳಜಿ ಬಗ್ಗೆ ಹೇಗೆ ಇರಬೇಕು ಎನ್ನುವುದರ ಬಗ್ಗೆ ಕೊರಟಗೆರೆ ಪೊಲೀಸ್‌ ಠಾಣಾ ಸಬ್‌ ಇನ್‌ಸ್ಪೆಕ್ಟರ್‌ ಮಂಜುಳಾ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು. ದ್ವಿಚಕ್ರ ವಾಹನಗಳಲ್ಲಿ ಹೋಗುವಾಗ ಹೆಲ್ಮೆಟ್‌ ಕಡ್ಡಾಯವಾಗಿ ಧರಿಸಬೇಕು, ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು, ದ್ವಿಚಕ್ರ ವಾಹನಗಳಲ್ಲಿ ಮೂರು ಜನ ಪ್ರಯಾಣ ಮಾಡಬಾರದು, 

ಗುಂಪು ಗುಂಪಾಗಿ ರಸ್ತೆಗೆ ಇಳಿಯಬಾರದು, ಫೋನ್‌ನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸಬಾರದು. ಅಪಘಾತಗಳು ನಡೆದ ಸ್ಥಳಗಳಲ್ಲಿ ಫೋಟೋ ವಿಡಿಯೋ ಮಾಡುವುದನ್ನು ಬಿಟ್ಟು ಸಹಾಯ ಮಾಡಬೇಕು. ಸಹಾಯ ಮಾಡಿದವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಯಾವುದೇ ಕಾರಣಕ್ಕೂ ಕೇಸ್‌ ದಾಖಲಿಸುವುದಿಲ್ಲ. ಅಪಘಾತವಾದ ಸ್ಥಳಗಳಲ್ಲಿ ಧೈರ್ಯದಿಂದ ಸಹಾಯ ಮಾಡಿ ಸ್ಥಳೀಯರ ಸಹಾಯದಿಂದ ಗಾಯನಗಳನ್ನು ಆಸ್ಪತ್ರೆಗೆ ರವಾನಿಸಬೇಕು ಅಥವಾ ತುರ್ತು ವಾಹನ ಸೇವಾ ಕೇಂದ್ರಗಳಿಗೆ ಕರೆ ಮಾಡಿ ತಿಳಿಸಬೇಕು. ಇದೆಲ್ಲವೂ ಮನುಷ್ಯನ ಆದ್ಯ ಕರ್ತವ್ಯವಾಗಿದೆ ಎಂದು ರಸ್ತೆ ಸುರಕ್ಷತಾ ಸಪ್ತಾಹ ಅಭಿಯಾನದಲ್ಲಿ ವಿದ್ಯಾರ್ಥಿಗಳಿಗೆ ಮಂಜುಳಾ ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ