
ಬೆಂಗಳೂರು(ಮೇ.12): ರಾಜ್ಯದ(Karnataka) ವಿವಿಧ ಭಾಗಗಳಲ್ಲಿ ಕಳೆದ ಎರಡು ವಾರಗಳಿಂದ ಸತತವಾಗಿ ಸುರಿಯುತ್ತಿರುವ ಆಲಿಕಲ್ಲು ಸಹಿತ ಮಳೆಯಿಂದ(Rain) ಟೊಮೆಟೋ ಬೆಳೆ ಹಾಳಾಗಿರುವ ಪರಿಣಾಮ ಪ್ರತಿ ಕೆ.ಜಿ. ಟೊಮೆಟೋ ಬೆಲೆ 80-95ಕ್ಕೆ ಏರಿಕೆಯಾಗಿದೆ.
ಮಳೆಯಿಂದಾಗಿ ಅನೇಕ ದಿನಗಳಿಂದ ಪ್ರತಿ ಕೆ.ಜಿಗೆ .60-70 ಇದ್ದ ಟೊಮೆಟೋ(Tomato) ಬೆಳೆ ಈಗ ಇನ್ನಷ್ಟು ಏರಿಕೆಯಾಗಿದೆ. ಇದೇ ರೀತಿ ಮಳೆ ಮುಂದುವರಿದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಬೆಲೆ 100 ದಾಟಬಹುದು ಎಂದು ಹೇಳಲಾಗಿದೆ.
ಕಳೆದ ವಾರ ಆನೇಕಲ್, ಹೊಸಕೋಟೆ ಮತ್ತಿತರ ಕೆಲವೆಡೆ ಆಲಿಕಲ್ಲು ಸಹಿತ ಬಿದ್ದ ಮಳೆಯಿಂದ ಟೊಮೆಟೋ ಬೆಳೆ ಸಾಕಷ್ಟು ಹಾನಿಯಾಗಿತ್ತು. ಹೀಗಾಗಿ ಮಾರುಕಟ್ಟೆಗೆ(Market) ಪೂರೈಕೆ ಪ್ರಮಾಣ ಕಡಿಮೆಯಾಗಿದೆ. ಈ ನಡುವೆ ಮದುವೆ, ಗೃಹ ಪ್ರವೇಶ, ಊರ ಹಬ್ಬ, ಜಾತ್ರೆ ಇತ್ಯಾದಿಗಳು ನಡೆಯುತ್ತಿರುವುದರಿಂದ ಎಲ್ಲೆಡೆ ಅನ್ನ ದಾಸೋಹಗಳು ನಡೆಯುತ್ತಿವೆ. ಹೋಟೆಲ್ಗಳು ಕೂಡ ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿವೆ. ಹೀಗಾಗಿ, ಅಡುಗೆಗೆ ಟೊಮೆಟೋ ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗುತ್ತಿದೆ. ಆದರೆ ಬೇಡಿಕೆಗೆ ತಕ್ಕಷ್ಟು ಪೂರೈಕೆ ಇಲ್ಲದಿರುವುದರಿಂದ ಬೆಲೆಗಳು ಏರಿಕೆಯಾಗಿವೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist