ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆಯನ್ನು ಪ್ರೋತ್ಸಾಹಿಸುವಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನ್ಯಾಯಾಂಗವನ್ನು ಒತ್ತಾಯಿಸಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್ಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ‘‘ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಪ್ರೋತ್ಸಾಹಿಸಬೇಕು. ಇದು ದೇಶದ ಸಾಮಾನ್ಯ ನಾಗರಿಕರಿಗೆ ನ್ಯಾಯ ವ್ಯವಸ್ಥೆಯಲ್ಲಿ ವಿಶ್ವಾಸವನ್ನು ಹೆಚ್ಚಿಸುತ್ತದೆ’’ ಎಂದು ಪ್ರಧಾನಿ ಹೇಳಿದ್ದಾರೆ. ‘‘ನಮ್ಮ ದೇಶದಲ್ಲಿ ನ್ಯಾಯಾಂಗವು ಸಂವಿಧಾನದ ರಕ್ಷಣೆಯ ಪಾತ್ರ ವಹಿಸಿದರೆ, ಶಾಸಕಾಂಗವು ನಾಗರಿಕರ ಆಶಯಗಳನ್ನು ಪ್ರತಿನಿಧಿಸುತ್ತದೆ. ಸಂವಿಧಾನದ ಈ ಎರಡು ವಿಭಾಗಗಳ ಸಮತೋಲನವು ದೇಶದಲ್ಲಿ ಪರಿಣಾಮಕಾರಿ ಮತ್ತು ಸಮಯ ಬದ್ಧವಾದ ನ್ಯಾಯಾಂಗ ವ್ಯವಸ್ಥೆಗೆ ಮಾರ್ಗಸೂಚಿ ಸಿದ್ಧಪಡಿಸುತ್ತದೆ ಎಂದು ನಾನು ನಂಬುತ್ತೇನೆ’’ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ನುಡಿದಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಮತ್ತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,
ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?