ನೇಪಿಯರ್(ನ.22): ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ಮೂರನೇ ಹಾಗೂ ಕೊನೆಯ ಟಿ20 ಪಂದ್ಯವು ಟೈನಲ್ಲಿ ಅಂತ್ಯವಾಗಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು 1-0 ಅಂತರದಲ್ಲಿ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ನ್ಯೂಜಿಲೆಂಡ್ ನೀಡಿದ್ದ 161 ರನ್ಗಳ ಸವಾಲಿನ ಗುರಿ ಬೆನ್ನತ್ತಿದ ಟೀಂ ಇಂಡಿಯಾ, 9 ಓವರ್ ಅಂತ್ಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 75 ರನ್ ಗಳಿಸಿದ್ದಾಗ ಪಂದ್ಯಕ್ಕೆ ಮಳೆರಾಯ ಅಡ್ಡಿಪಡಿಸಿದ. ಹೀಗಾಗಿ ಡೆಕ್ವರ್ಥ್ ಲೂಯಿಸ್ ನಿಯಮದನ್ವಯ ಪಂದ್ಯವನ್ನು ಟೈ ಎಂದು ಘೋಷಿಸಲಾಯಿತು.
ಇಲ್ಲಿನ ಮೆಕ್ಲ್ಯಾನ್ ಪಾರ್ಕ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ಮೂರನೆ ಟಿ20 ಪಂದ್ಯ ಆರಂಭಕ್ಕೂ ಮುನ್ನವೇ ಮಳೆರಾಯ ಕೊಂಚ ಅಡ್ಡಿಪಡಿಸಿದ್ದ. ಹೀಗಾಗಿ ಟಾಸ್ ಕೂಡಾ ಕೆಲಕಾಲ ತಡವಾಗಿ ನಡೆಯಿತು. ಇನ್ನು ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡವು ಮೊಹಮ್ಮದ್ ಸಿರಾಜ್ ಹಾಗೂ ಆರ್ಶದೀಪ್ ಸಿಂಗ್ ಮಾರಕ ದಾಳಿಗೆ ತತ್ತರಿಸಿ 19.4 ಓವರ್ಗಳಲ್ಲಿ 160 ರನ್ ಬಾರಿಸಿ ಸರ್ವಪತನ ಕಂಡಿತು. ನ್ಯೂಜಿಲೆಂಡ್ ತಂಡದ ಪರ ಆರಂಭಿಕ ಬ್ಯಾಟರ್ ಡೆವೊನ್ ಕಾನ್ವೇ 59 ರನ್ ಬಾರಿಸಿದರೆ, ಮಧ್ಯಮ ಕ್ರಮಾಂಕದಲ್ಲಿ ಗ್ಲೆನ್ ಫಿಲಿಫ್ಸ್ 54 ರನ್ ಬಾರಿಸಿ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು.
ಭಾರತದ ಪರ ಇಶಾನ್ ಕಿಶನ್ 10, ರಿಷಬ್ ಪಂತ್ 11, ಸೂರ್ಯಕುಮಾರ್ ಯಾದವ್ 13, ಹಾರ್ದಿಕ್ ಪಾಂಡ್ಯ ಅಜೇಯ 30 ಹಾಗೂ ದೀಪಕ್ ಹೂಡಾ ಅಜೇಯ 9 ರನ್ ಗಳಿಸಿದ್ದಾರೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?