ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಗಡೆಯಾಟದಲ್ಲಿ ತನ್ನನ್ನೇ ಪಣಕಿಟ್ಟು ಸೋತ ನಾರಿ: ಎತ್ತಾಕ್ಕೊಂಡೋದ ಮನೆ ಮಾಲೀಕ

Twitter
Facebook
LinkedIn
WhatsApp
ಪಗಡೆಯಾಟದಲ್ಲಿ ತನ್ನನ್ನೇ ಪಣಕಿಟ್ಟು ಸೋತ ನಾರಿ: ಎತ್ತಾಕ್ಕೊಂಡೋದ ಮನೆ ಮಾಲೀಕ

ಮಹಾಭಾರತದ ಕಾಲದಲ್ಲಿ ಪಗಡೆಯಾಟವಾಡಿದ ಧರ್ಮರಾಯ ಇಡೀ ತನ್ನ ಕುಟುಂಬ, ರಾಜ್ಯ ಹಾಗೂ ಪತ್ನಿಯನ್ನು ಪಣಕ್ಕಿಟ್ಟು ಕೊನೆಗೆ ಸೋತು ಎಲ್ಲವನ್ನು ಕಳೆದುಕೊಂಡು ಕಾಡಿಗೆ ಹೋಗಿರುವ ಪುರಾಣ ಕತೆ ನಿಮ್ಮೆಲ್ಲರಿಗೂ ಗೊತ್ತೇ ಇದೆ. ಆದರೆ ಜೂಜು, ಇಸ್ಪೀಟ್, ಅಂದರ್ ಬಾಹರ್ ಮುಂತಾದ ಅಧುನಿಕ ಹೆಸರಿನಿಂದ ಕರೆಯಲ್ಪಡುವ ಪಗಡೆಯಾಟದಲ್ಲಿ ಮಹಿಳೆಯೊಬ್ಬಳು ತನ್ನನ್ನೇ ತಾನು ಪಣಕ್ಕಿಟ್ಟು ಮನೆ ಮಾಲೀಕನೊಂದಿಗೆ ಪಗಡೆಯಾಟವಾಡಿ ಸೋತು ಹೋಗಿದ್ದಾಳೆ. ಇದರಿಂದ ಮಹಿಳೆ ಮಾಲೀಕನ ಪಾಲಾಗಿದ್ದಾಳೆ. ಈ ವಿಚಿತ್ರ ಘಟನೆ ಉತ್ತರಪ್ರದೇಶದ ಪ್ರತಾಫ್‌ಗಢದಲ್ಲಿ ನಡೆದಿದ್ದು, ಈ ಘಟನೆಯಿಂದ ಆಘಾತಗೊಂಡಿರುವ ಮಹಿಳೆ ಪತಿ ಪೊಲೀಸರಿಗೆ ದೂರು ನೀಡಿದ್ದಾನೆ.

ಹೀಗೆ ಪಗಡೆಯಾಟವಾಡಿ(Gambling) ಮಾಲೀಕನ ಪಾಲಾದ ಮಹಿಳೆಯ ಹೆಸರು ರೇಣು. ಲೂಡೋ ಗೇಮ್‌ಗೆ (Ludo Game) ಗೀಳು ಹೆಚ್ಚಿಸಿಕೊಂಡಿದ್ದ ಈ ಮಹಿಳೆ ತನ್ನ ಮನೆಯ ಮಾಲೀಕನೊಂದಿಗೆ ಸದಾ ಕಾಲ ಈ ಲೂಡೋ ಗೇಮ್ ಆಟವಾಡುತ್ತಿದ್ದಳು. ಹೀಗೆ ಆಟವಾಡುತ್ತಾ ತನ್ನಲಿದ್ದ ಹಣವನ್ನೆಲ್ಲಾ ಕಳೆದುಕೊಂಡ ಆಕೆ, ಬಳಿಕ ತನ್ನ ಮಾಲೀಕನ ಬಳಿ ತನ್ನನ್ನೇ ಪಣಕ್ಕಿಟ್ಟಿದ್ದಳು. ಹೀಗೆ ತನ್ನನ್ನೇ ಪಣಕ್ಕಿಟ್ಟ ಬಳಿಕವೂ ಆಕೆ ಸೋತಿದ್ದು, ಇದರಿಂದ ಮಾಲೀಕ ಆಕೆಯನ್ನು ಹೊತ್ತೊಯ್ದಿದ್ದಾನೆ ಎನ್ನಲಾಗಿದೆ. ಇದರಿಂದ ಮಹಿಳೆ ತನ್ನ ಗಂಡನಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾಳೆ. ವಿಚಾರ ತಿಳಿದ ಗಂಡ ಓಡಿಬಂದು ಪೊಲೀಸರಿಗೆ ದೂರು ನೀಡಿದ್ದಾನೆ.

ಇತ್ತ ಈ ಮಹಿಳೆ ರೇಣು (Renu) ಪತಿ ದೂರದ ರಾಜಸ್ತಾನದ (Rajastan) ಜೈಪುರಕ್ಕೆ (Jaipur) ಕೆಲಸಕ್ಕಾಗಿ ಹೊರಟು ಹೋಗಿದ್ದು ಅಲ್ಲೇ ವಾಸ ಮಾಡುತ್ತಿದ್ದ, ವಿಚಾರ ತಿಳಿಯುತ್ತಿದ್ದಂತೆ ಅಲ್ಲಿಗೆ ಬಂದ ರೇಣು ಪತಿ ಪ್ರತಾಪಗಢ ಪೊಲೀಸರಿಗೆ ದೂರು ನೀಡಿದ್ದಾನೆ. ಪ್ರತಾಪ್‌ಗಡದ (Pratapgarh) ದೇವಕಲಿ (Devakali) ಎಂಬಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಮಾತನಾಡಿದ ರೇಣುವಿನ ಪತಿ, ದೇವಕಲಿ ನಗರದ ಆಸುಪಾಸಿನಲ್ಲಿ ಈತ ಹಿಂದೊಮ್ಮೆ ಬಾಡಿಗೆ ಮನೆಯಲ್ಲಿ ಪತ್ನಿಯೊಂದಿಗೆ ವಾಸವಿದ್ದ. ಆದರೆ ಆರು ತಿಂಗಳ ಹಿಂದೆ ಈತ ಕೆಲಸಕ್ಕಾಗಿ ಜೈಪುರಕ್ಕೆ ವಲಸೆ ಹೋಗಿದ್ದು, ಅಲ್ಲಿ ದುಡಿಮೆ ಮಾಡುತ್ತಿದ್ದ ಆತ ದೂರದಲ್ಲಿದ್ದ ಪತ್ನಿಗಾಗಿ ಹಣ ಕಳುಹಿಸುತ್ತಿದ್ದ. ಆದರೆ ಈ ಪತ್ನಿ ಆ ಹಣವನ್ನು ಇಟ್ಟು ಜೂಜಾಡಿದ್ದಲ್ಲದೇ ತನ್ನನ್ನೇ ಪಣಕ್ಕಿಟ್ಟು ಗಂಡನಿಗೆ ಪತ್ನಿ ಇಲ್ಲದಂತೆ ಮಾಡಿದ್ದಾಳೆ. 

ಘಟನೆಯ ಬಳಿಕ ಮಹಿಳೆ ಮನೆ ಮಾಲೀಕನ ಮನೆಗೆ ಹೊರಟು ಹೋಗಿದ್ದು, ಆಕೆ ಆತನೊಂದಿಗೆ ಹೋಗದಂತೆ ಎಲ್ಲಾ ಪ್ರಯತ್ನಗಳನ್ನು ನಾನು ಮಾಡಿದೆ. ಆದರೆ ಜೂಜಿನಲ್ಲಿ ಸೋತಿರುವುದರಿಂದ ವಾಪಸ್ ಬರಲು ಆಕೆ ಸಿದ್ಧಳಿಲ್ಲ ಎಂದು ಪತಿ ಹೇಳಿದ್ದಾನೆ. ಈ ಬಗ್ಗೆ ಪೊಲೀಸರ ಪ್ರತಿಕ್ರಿಯೆ ಕೇಳಿದಾಗ, ನಾವು ಮಹಿಳೆಯ ಪತಿ ಜೊತೆ ಸಂಪರ್ಕದಲ್ಲಿದ್ದು ಕೂಡಲೇ ಈ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist