ಬೆಳಗಾವಿ(ಜೂ.05): ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಜಾ ಮಾಡಿಲ್ಲ. ಆ ಸಮಿತಿಯ ಅವಧಿಪೂರ್ಣಗೊಂಡ ಹಿನ್ನೆಲೆ ವಿಸರ್ಜನೆ ಮಾಡಲಾಗಿದೆ. ಪಠ್ಯದಲ್ಲಿ ಏನೇ ಗೊಂದಲ ಇದ್ದರೂ ಸರಿಪಡಿಸುವ ಕೆಲಸ ನಮ್ಮ ಸರ್ಕಾರ ಮಾಡುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈ ಸಂಬಂಧ ಮುಖ್ಯಮಂತ್ರಿಗಳು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಆ ಸಮಿತಿಯ ಅವಧಿ ಮುಗಿದಿದ್ದು, ವರದಿಯನ್ನು ಸಲ್ಲಿಸಿದೆ. ಹೀಗಾಗಿ ಆ ಸಮಿತಿ ವಜಾ ಮಾಡಿಲ್ಲ ಹೊರತು ವಿಸರ್ಜನೆ ಮಾಡಲಾಗಿದೆ. ಈಗ ಕೊಟ್ಟಿರುವ ಪಠ್ಯ ಪುಸ್ತಕದಲ್ಲಿ ಏನಾದರೂ ಹಾಗೂ ಯಾರದಾದರು ಅಭ್ಯಂತರ, ಸಮಸ್ಯೆ ಇದ್ದರೆ, ಭಾವನೆಗಳಿಗೆ ಧಕ್ಕೆ ಆಗುತ್ತಿದ್ದರೆ ಅವುಗಳನ್ನು ಗಮನದಲ್ಲಿ ಇಟ್ಟುಕೊಂಡು, ಸಲಹೆ ಸೂಚನೆ ಇದ್ದರೂ ಅದನ್ನು ಗಮನಕ್ಕೆ ತೆಗೆದುಕೊಳ್ಳುತ್ತೇವೆ. ಸರ್ಕಾರ ಜನಪರ ಆಗಿರಬೇಕಾಗುತ್ತದೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೂಕ್ತವಾದ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಯಾರೇ ಕಾನೂನು ಉಲ್ಲಂಘನೆ, ಭಾವನೆಗಳಿಗೆ ಪ್ರಚೋದನಕಾರಿಯಾದ ಯಾವುದೇ ಕ್ರಿಯೆ ಇದ್ದರೂ ಸಂಬಂಧಪಟ್ಟಂತ ಪೊಲೀಸ್ ಇಲಾಖೆ, ಸೈಬರ್ ಕ್ರೈಂಗೆ ಕೇಸ್ ದಾಖಲಿಸಲು ಸರ್ಕಾರ ಸೂಚಿಸಿದೆ. ಸಮಾಜದಲ್ಲಿ ಯಾವುದೇ ರೀತಿ ಒಡಕು ಮೂಡಿಸುವುದು ನಮ್ಮ ಸರ್ಕಾರದ ಉದ್ದೇಶ ಇಲ್ಲ. ಎಲ್ಲ ವರ್ಗದ ಎಲ್ಲ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇವೆ. ಯಾವುದೇ ಗೊಂದಲ, ಸಮಸ್ಯೆ ಇಲ್ಲ, ಏನೇ ಗೊಂದಲ ಇದ್ದರೂ ಅದಕ್ಕೆ ಸ್ಪಂದಿಸುತ್ತೇವೆ. ಈಗ ಬಂದಿರುವ ಪ್ರಸ್ತಾವನೆಗಳನ್ನು ಗಮನಿಸಿ ಇಲಾಖೆಯಿಂದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಇದು ಒಬ್ಬ ವ್ಯಕ್ತಿಯ ಪ್ರಶ್ನೆ ಬರೋದಿಲ್ಲ. ವಿಚಾರಾಧಾರಿತವಾಗಿ ಆಗುತ್ತದೆ. ಅದರಲ್ಲಿ ನಾಲ್ಕಾರು ಸದಸ್ಯರಿದ್ದಾರೆ. ಪಠ್ಯ ಪುಸ್ತಕದಲ್ಲಿ ಏನೆಲ್ಲಾ ಅಳವಡಿಸಬೇಕು, ಜೋಡಿಸುವ ಕೆಲಸ ಆಗಿದೆ. ಯಾವುದೇ ಅಭ್ಯಂತರ ಇದ್ದರೆ ಇದನ್ನು ಗಮನಿಸಿ ಸೂಕ್ತ ಕ್ರಮ ಕೈಗೊಳ್ಳುವ ಕೆಲಸ ಆಗುತ್ತದೆ ಎಂದರು.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?