ಭಾನುವಾರ, ಏಪ್ರಿಲ್ 28, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಡುಬಿದ್ರಿ: ಗಂಡನಿಂದ ಮಾನಸಿಕ, ದೈಹಿಕ ಹಿಂಸೆ - ಗೃಹಿಣಿ ಆತ್ಮಹತ್ಯೆ

Twitter
Facebook
LinkedIn
WhatsApp
death16360330961653722657

ಪಡುಬಿದ್ರಿ, ಫೆ 24 : ಪತಿಯ ಮಾನಸಿಕ ಹಾಗೂ ದೈಹಿಕ ಹಿಂಸೆಯ ಕಾರಣದಿಂದ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಡುಬಿದ್ರಿ ನಡೆದಿದೆ.

ಮಮತಾ (42) ಅಡುಗೆ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ಮೀನು ಹಾಗೂ ಮೀನಿನ ಹೊಟೇಲ್‌ ವ್ಯವಹಾರ ಮಾಡಿಕೊಳ್ಳುತ್ತಿದ್ದ ಬೋಳಾರದ ಮಮತಾ ಅವರನ್ನು 2011ರಲ್ಲಿ ಪಡುಬಿದ್ರಿ ಬೀಡು ನಿವಾಸಿ ಚೇತನ್‌ ಮದುವೆಯಾಗಿದ್ದು, ಚೇತನ್‌ ಆಗಾಗ್ಗೆ ಪತ್ನಿಗೆ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ಮಮತಾ ಮಂಗಳೂರಿನಲ್ಲಿರುವ ಅಣ್ಣ ಗಿರೀಶ್‌ ಸುವರ್ಣ ಅವರಿಗೆ ಮೊಬೈಲ್‌ ಕರೆ ಮಾಡಿ ತಿಳಿಸಿದ್ದರು. ತಾನು ಹಣ ಕದ್ದಿರುವುದಾಗಿ ಆಪಾದನೆ ಹೊರಿಸಿ ತನಗೆ ಪತಿ ಚೇತನ್‌ ನೀಡಿದ್ದಾಗಿ ಆಕೆ ದೂರಿಕೊಂಡಿದ್ದಳು. ಆಕೆಯನ್ನು ತಾನು ಸಮಾಧಾನಪಡಿಸಿದ್ದೆ ಎಂದು ಗಿರೀಶ್‌ ಪೊಲೀಸರಿಗೆ ನೀಡಿದ ದೂರಿನ‌ಲ್ಲಿ ತಿಳಿಸಿದ್ದಾರೆ.

ಇನ್ನು ಮಮತಾ ತನ್ನ ತಾಯಿ, ಅಣ್ಣ ಹಾಗೂ ಅಕ್ಕ ಭಾರತಿಗೂ ಗಂಡನ ಮನೆಯಲ್ಲಿ ತಾನು ಅನುಭವಿಸುತ್ತಿದ್ದ ಹಿಂಸೆಯ ಬಗ್ಗೆ ದೂರವಾಣಿ ಮೂಲಕ ತಿಳಿಸುತ್ತಿದ್ದಳು.

ಚಿತ್ರಹಿಂಸೆಯಿಂದಲೇ ತನ್ನ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ವಿರುದ್ಧ ಕ್ರಮ ಜರಗಿಸುವಂತೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪಡುಬಿದ್ರಿ ಪೊಲೀಸರು ಸಂಶಯಾಸ್ಪದ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ