ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪತಿಯನ್ನು ಹೆದರಿಸಲು ಸೀಮೆಎಣ್ಣೆ ಸುರಿದುಕೊಂಡ ಗರ್ಭಿಣಿ ಗಂಭೀರ-ಮಗು ಹೊಟ್ಟೆಯಲ್ಲೇ ಸಾವು

Twitter
Facebook
LinkedIn
WhatsApp
DB 06012023 arunima

ಕೊಚ್ಚಿ, ಜ 05 : ಪತಿಯನ್ನು ಹೆಸರಿಸುವುದಕ್ಕಾಗಿ ಗರ್ಭಿಣಿಯೊಬ್ಬಳು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ಕೊಚ್ಚಿಯಲ್ಲಿ ನಡೆದಿದೆ. ಇನ್ನು ಮಗು ಹೊಟ್ಟೆಯಲ್ಲೇ ಪ್ರಾಣ ಕಳೆದುಕೊಂಡಿದ್ದು, ಹೊರತೆಗೆಯಲು ಕಳೆದ ಮೂರು ದಿನಗಳಿಂದ ಪ್ರಯತ್ನ ನಡೆಯುತ್ತಿದೆ.

ಅರುಣಿಮಾ (27) ಆತ್ಮಹತ್ಯೆಗೆ ಯತ್ನಿಸಿದ ಗರ್ಭಿಣಿ. ಯೋಧನಾಗಿರುವ ಪತಿ ಅಜಯ್ ಪ್ರಕಾಶ್ ಅವರು ಘಟನೆ ನಡೆದ ದಿನದಂದು ಮನೆಯಲ್ಲಿದ್ದರು. ಸೇನೆಯಿಂದ ರಜೆಯಲ್ಲಿ ಊರಿಗೆ ಬಂದಿದ್ದ ವೇಳೆ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಪತಿಗೆ ಬೆದರಿಕೆ ಹಾಕುವುದಕ್ಕಾಗಿ ಆಕೆ ಈ ಕೃತ್ಯ ಎಸಗಿದ್ದಾಳೆ ಎಂದು ತಿಳಿದು ಬಂದಿದೆ.

ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಆಕೆಯನ್ನು ಆಸ್ಪತ್ರೆಗೆ ಸೇರಿಸುವ ವೇಳೆ ಗ್ಯಾಸ್ ಸ್ಪೋಟದಿಂದ ಘಟನೆ ನಡೆದಿದೆ ಎಂದು ಪತಿ ಹೇಳಿದ್ದರು. ಆದರೆ ಬಳಿಕ ಆಕೆಯ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದ್ದು, ಆಕೆಯನ್ನು ಪರಸ್ಸಾಲಾದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸೇರಿಸಲಾಯಿತು. ಇದೀಗ ಆಕೆಯ ಸ್ಥಿತಿ ಗಂಭೀರವಾಗಿದ್ದು, ಮಗು ಹೊಟ್ಟೆಯೊಳಗೆ ಮೃತಪಟ್ಟಿದೆ. ಮೃತ ಮಗುವನ್ನು ಹೊರ ತೆಗೆಯಲು ಕಳೆದ ಮೂರು ದಿನಗಳಿಂದ ಆಸ್ಪತ್ರೆ ವೈದ್ಯರು ಪ್ರಯತ್ನದಲ್ಲಿ ತೊಡಗಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ