ಶುಕ್ರವಾರ, ಮಾರ್ಚ್ 29, 2024
ಬೆಳ್ತಂಗಡಿ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಓರ್ವ ಸಾವು - ಇಬ್ಬರು ಗಂಭೀರ.!-ಬಿಜೆಪಿ-ಜೆಡಿಎಸ್ ಮೈತ್ರಿ ತಾತ್ಕಾಲಿಕವಲ್ಲ, ಮುಂದೆಯೂ ಇರಲಿದೆ; ಕುಮಾರಸ್ವಾಮಿ-ನೀತಿ ಸಂಹಿತೆ ಉಲ್ಲಂಘನೆ ಆರೋಪ ; ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಮನ್ಸ್ ಜಾರಿ..!-ಬಿಜೆಪಿ ಭದ್ರಕೋಟೆ ಬೆಂಗಳೂರು ದಕ್ಷಿಣಕ್ಕೆ ಪವನ್ ಕಲ್ಯಾಣ್ ಸ್ಟಾರ್ ಪ್ರಚಾರಕ.?-ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪತಿಯ ಕಿರುಕುಳ ದ ಕಾರಣದಿಂದ ತಿರುವನಂತಪುರದಲ್ಲಿ 24 ವರ್ಷದ ಯುವ ವೈದ್ಯೆ ಆತ್ಮಹತ್ಯೆಗೆ ಶರಣು.

Twitter
Facebook
LinkedIn
WhatsApp
ಪತಿಯ ಕಿರುಕುಳ ದ ಕಾರಣದಿಂದ ತಿರುವನಂತಪುರದಲ್ಲಿ 24 ವರ್ಷದ ಯುವ ವೈದ್ಯೆ ಆತ್ಮಹತ್ಯೆಗೆ ಶರಣು.

ತಿರುವನಂತಪುರಂ: ಕೇರಳದ ಕೊಲ್ಲಂ ಜಿಲ್ಲೆಯ ಸಾಸ್ತಂಕೋಟಾ ಬಳಿಯ ಸಾಸ್ತಮ್ನಾಡದಲ್ಲಿ ವರ್ಷದ ಹಿಂದಷ್ಟೇ ವಿವಾಹವಾಗಿದ್ದ 24 ವರ್ಷದ ಯುವ ವೈದ್ಯೆ ಪತಿಯ ಮನೆಯಲ್ಲೇ ಸಾವನ್ನಪ್ಪಿದ್ದು, ಇದಕ್ಕೂ ಮುನ್ನ ತನಗೆ ನೀಡಿದ ಕಿರುಕುಳದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾಳೆ.

ಸಾವನ್ನಪ್ಪಿದ 24 ವರ್ಷದ ಯುವ ವೈದ್ಯೆಯನ್ನು ವಿಸ್ಮಯ.ವಿ.ನೈಯರ್ ಎಂದು ಗುರುತಿಸಲಾಗಿದೆ. ಬ್ಯಾಚುಲರ್ ಆಫ್ ಆಯುರ್ವೇದಿಕ್ ಮೆಡಿಸಿನ್ ಆ್ಯಂಡ್ ಸರ್ಜರಿ ವಿದ್ಯಾರ್ಥಿನಿಯಾಗಿದ್ದ ವಿಸ್ಮಯ 2020ರ ಮೇ ತಿಂಗಳಲ್ಲಿ ಮೋಟಾರು ವಾಹನ ಇಲಾಖೆಯ ಅಧಿಕಾರಿ ಎಸ್.ಕಿರಣ್‍ಕುಮಾರ್ ಜೊತೆ ವಿವಾಹವಾಗಿದ್ದರು. ಮನೆಯವರು ಅದ್ಧೂರಿಯಾಗಿ ವಿವಾಹ ಮಾಡಿಕೊಟ್ಟಿದ್ದರು. ದಂಪತಿ ಕೇರಳದ ಕೊಲ್ಲಂನಲ್ಲಿ ವಾಸವಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ನಡೆಯುವುದಕ್ಕೂ 2 ದಿನ ಮುಂಚೆ ತನ್ನ ಸೋದರ ಸಂಬಂಧಿಗೆ ಈ ಕುರಿತು ತಿಳಿಸಿದ್ದು, ವರದಕ್ಷಿಣೆ ಸಂಬಂಧ ಪತಿ ಕಿರುಕುಳ ನೀಡುತ್ತಿದ್ದು, ಹಲವು ಬಾರಿ ಹೊಡೆದಿದ್ದಾನೆ ಎಂದು ವಿವರಿಸಿದ್ದಾಳೆ.

ಸೋಮವಾರ ಬೆಳಗ್ಗೆ ಗಂಡನ ಮನೆಯಲ್ಲಿ ವಿಸ್ಮಯ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ದೇಹದ ಮೇಲೆ ಗಾಯದ ಗುರುತುಗಳಿವೆ. ಸಾವಿಗೂ ಮುನ್ನನ ವಿಸ್ಮಯ ತನ್ನ ಸೋದರ ಸಂಬಂಧಿ ಜೊತೆ ನೋವನ್ನು ತೋಡಿಕೊಂಡಿದ್ದು, ಪತಿಯ ಚಿತ್ರ ಹಿಂಸೆಯನ್ನು ಸಹಿಸಲಾಗುತ್ತಿಲ್ಲ, ವರದಕ್ಷಿಣೆ ಬೇಕೆಂದು ನಿತ್ಯ ಹಿಂಸೆ ನಿಡುತ್ತಿದ್ದಾನೆ ಎಂದು ತಿಳಿಸಿದ್ದಾಳೆ. ಈ ಕುರಿತು ಭಾನುವಾರ ರಾತ್ರಿ ಸಹ ಸೋದರಸಂಬಂಧಿ ಜೊತೆ ಸಾಮಾಜಿಕ ಜಾಲತಾಣಗಳ ಮೂಲಕ ಫೋಟೋಗಳನ್ನು ಹಂಚಿಕೊಂಡಿದ್ದು, ಕಿರುಕುಳ ಸಹಿಸಲಾಗುತ್ತಿಲ್ಲ. ಬಹುಶಃ ಇದೇ ಕೊನೆಯ ಮೆಸೇಜ್ ಆಗಬಹುದು ಎಂದು ಹೇಳಿಕೊಂಡಿದ್ದಳು. ಮರುದಿನ ಬೆಳಗ್ಗೆ ವಿಸ್ಮಯ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಸಕಲೇಶಪುರದಲ್ಲಿ ಪತಿ ಕಳೆದುಕೊಂಡ ಬೇಸರಕ್ಕೆ ಮಹಿಳೆ ಮಗುವಿನೊಂದಿಗೆ ಆತ್ಮಹತ್ಯೆ.

ವಿಸ್ಮಯ ತಂದೆ ತ್ರಿವಿಕ್ರಮನ್ ನೈಯರ್ ಈ ಕುರಿತು ಮಾಹಿತಿ ನೀಡಿದ್ದು, ಈ ಹಿಂದೆ ಸಹ ಆತನ ಹಲ್ಲೆ ಮಾಡಿದ್ದ, ಒಮ್ಮೆ ಅವಳೊಂದಿಗೆ ನಾನು ಮನೆಗೆ ತೆರಳಿದಾಗ ಪಾರ್ಟಿ ಮಾಡಿ, ಎಲ್ಲರೂ ಕುಡಿದಿದ್ದರು. ನಾವು ಮನೆಗೆ ಪ್ರವೇಶಿಸುತ್ತಿದ್ದಂತೆ ಆತ ವಿಸ್ಮಯಳನ್ನು ಹೊಡೆಯಲು ಆರಂಭಿಸಿದ. ಈ ಕುರಿತು ನನ್ನ ಮಗ ಪ್ರಶ್ನಿಸಲು ಹೋದಾಗ ಅವನನ್ನೂ ಹೊಡೆದಿದ್ದ. ಆಗಲೂ ಈ ಕುರಿತು ನಾವು ಪ್ಯಾಟ್ರೋಲ್ ಪೊಲೀಸರಿಗೆ ತಿಳಿಸಿದ್ದೆವು. ಪೊಲೀಸರು ಆತನನ್ನು ಠಾಣೆಗೆ ಕರೆದೊಯ್ದಿದ್ದೆವು. ಸರ್ಕಲ್ ಇನ್‍ಸ್ಪೆಕ್ಟರ್ ಕಿರಣ್ ಕುಟುಂಬಸ್ಥರನ್ನು ಕರೆದು ಸಂಧಾನ ನಡೆಸಿದ್ದರು. ಬಳಿಕ ನನ್ನ ಮಗ ಇದೊಂದು ಬಾರಿ ಬಿಟ್ಟುಬಿಡಿ ಎಂದು ಪೊಲೀಸರ ಬಳಿ ಮನವಿ ಮಾಡಿದ್ದ. ಬಳಿಕ ನನ್ನ ಮಗಳು ನಮ್ಮ ಮನೆಯಲ್ಲೇ ಇದ್ದಳು. ಆದರೆ ಎರಡು ತಿಂಗಳ ಹಿಂದೆ ಅವಳು ಬಿಎಎಂಎಸ್ ಪರೀಕ್ಷೆ ಬರೆಯಲು ಕಾಲೇಜಿಗೆ ಹೋಗುವಾಗ ಕಿರಣ್ ಅವಳನ್ನು ಮನೆಗೆ ಕರೆದೊಯ್ದಿದ್ದ. ಬಳಿಕ ಅವಳು ನಮ್ಮ ಮನೆಗೆ ಬಂದಿರಲಿಲ್ಲ ಎಂದು ವಿವರಿಸಿದ್ದಾರೆ.
ಈ ಘಟನೆ ನಡೆದ ಬಳಿಕ ವಿಸ್ಮಯ ತನ್ನ ತಾಯಿಗೆ ಮಾತ್ರ ಕರೆ ಮಾಡುತ್ತಿದ್ದಳು. ತಂದೆ, ಸಹೋದರನಿಗೆ ಕರೆ ಮಾಡುತ್ತಿರಲಿಲ್ಲ. ಇದೆಲ್ಲ ನನಗೆ ಈಗ ತಿಳಿದಿದೆ. ಕಿರಣ್ ಹಲ್ಲೆ ಮಾಡಿರುವುದನ್ನು ಅವಳು ತನ್ನ ತಾಯಿಯ ಬಳಿ ಹೇಳಿಕೊಂಡಿದ್ದಳು. ಅಲ್ಲದೆ ಎರಡು ದಿನಗಳ ಹಿಂದೆ ನನ್ನ ಸೋದರ ಸಂಬಂಧಿಗೂ ಮೆಸೇಜ್ ಮಾಡಿ, ಕಿರಣ್ ಕೆಲಸಕ್ಕೆ ಹೋದಾಗ ನನ್ನನ್ನು ಮನೆಯಿಂದ ಕರೆದುಕೊಂಡು ಹೋಗು ಎಂದು ತಿಳಿಸಿದ್ದಳು ಎಂದು ವಿವರಿಸಿದ್ದಾರೆ.

ಮರುದಿನ ಬೆಳಗ್ಗೆ ವಿಸ್ಮಯ ದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಗಳ ಸಾವಿಗೆ ಆಕೆಯ ಪತಿಯೇ ಕಾರಣ, ಮದುವೆ ಸಮಯದಲ್ಲಿ ಒಂದು ಎಕರೆ ಭೂಮಿ, ಒಂದು ಕಾರನ್ನು ನೀಡಲಾಗಿದೆ. ಆದರೂ ಅಳಿಯನ ಹಣದಾಹ ಕಡಿಮೆಯಾಗಿರಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ; ಓರ್ವ ಸಾವು - ಇಬ್ಬರು ಗಂಭೀರ.!

ಬೆಳ್ತಂಗಡಿ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಓರ್ವ ಸಾವು – ಇಬ್ಬರು ಗಂಭೀರ.!

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ; ಓರ್ವ ಸಾವು – ಇಬ್ಬರು ಗಂಭೀರ.! Twitter Facebook LinkedIn WhatsApp ಬೆಳ್ತಂಗಡಿ: ಚಾಲಕನ  ನಿಯಂತ್ರಣ ತಪ್ಪಿದ ಕಾರೊಂದು ತಡೆಗೋಡೆಗೆ ಢಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು