ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಮುಂಬೈ: ಪತ್ನಿಗೆ ಕಾರಿನಿಂದ ಡಿಕ್ಕಿ ಹೊಡೆದ ಕಾರಣ ಆರೋಪದ ಮೇರೆಗೆ ಬಾಲಿವುಡ್ ಚಿತ್ರ ನಿರ್ಮಾಪಕ ಕಮಲ್ ಕಿಶೋರ್ ಮಿಶ್ರಾ ಅವರನ್ನು ಮುಂಬೈ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಂಧೇರಿಯಲ್ಲಿರುವ ದಂಪತಿಗಳ ಅಪಾರ್ಟ್ಮೆಂಟ್ನ ಪಾರ್ಕಿಂಗ್ ಸ್ಥಳದಲ್ಲಿ ಅಕ್ಟೋಬರ್ 19 ರಂದು ಮಿಶ್ರಾ ಅವರ ಕಾರಿನಲ್ಲಿ ಇನ್ನೊಬ್ಬ ಮಹಿಳೆ ಇರುವುದನ್ನು ಪತ್ನಿ ನೋಡಿದಾಗ ಈ ಘಟನೆ ನಡೆದಿರುವುದಾಗಿ ಪೊಲೀಸರು ಹೇಳಿದ್ದಾರೆ.
ದೇಹತಿ ಡಿಸ್ಕೋದ ನಿರ್ಮಾಪಕನ ವಿರುದ್ಧ ಪತ್ನಿ ದೂರು ದಾಖಲಿಸಿದ ನಂತರ ಮಿಶ್ರಾ ಅವರನ್ನು ಗುರುವಾರ ಮನೆಯಿಂದ ಅಂಬೋಲಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು. ಶುಕ್ರವಾರ ಬೆಳ್ಳಂಬೆಳಗ್ಗೆ ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮಿಶ್ರಾ ಅವರ ಪತ್ನಿ ತನ್ನ ಪತಿಯನ್ನು ಹುಡುಕುತ್ತಾ ಹೊರಬಂದಾಗ ಪಾರ್ಕಿಂಗ್ ಪ್ರದೇಶದಲ್ಲಿ ಕಾರಿನಲ್ಲಿ ಇನ್ನೊಬ್ಬ ಮಹಿಳೆ ಆತನೊಂದಿಗೆ ಇರುವುದನ್ನು ನೋಡಿದ್ದಾಳೆ. ಕೂಡಲೇ ಆತನ ವಿರುದ್ಧ ಜಗಳಕ್ಕೆ ಪತ್ನಿ ಮುಂದಾಗುತ್ತಿದ್ದಂತೆಯೇ, ಮಿಶ್ರಾ ಅಲ್ಲಿಂದ ತಪ್ಪಿಸಿಕೊಳ್ಳಲು ಕಾರು ಚಲಾಯಿಸಿದ್ದಾರೆ. ಆಗ ಅವರ ಪತ್ನಿಗೆ ಡಿಕ್ಕಿ ಹೊಡೆದು, ಅವರ ಕಾಲುಗಳು, ಕೈ ಮತ್ತು ತಲೆಗೆ ಗಾಯಗಳಾಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪತ್ನಿ ನೀಡಿದ ದೂರಿನ ಆಧಾರದ ಮೇಲೆ, ಮಿಶ್ರಾ ವಿರುದ್ಧ ಐಪಿಸಿ ಸೆಕ್ಷನ್ 279 (ಅತಿವೇಗದ ಚಾಲನೆ) ಮತ್ತು 337 ರ ಅಡಿಯಲ್ಲಿ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?