ಅಮರಾವತಿ: ಪತ್ನಿ ಮಾಡುವ ಅಡುಗೆ ರುಚಿಯಾಗಿರುವುದಿಲ್ಲ, ಸರಿಯಾಗಿ ಅಡುಗೆ ಮಾಡಿ ಹಾಕುತ್ತಿಲ್ಲ ಎಂದು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ಆಂಧ್ರಪ್ರದೇಶದ ಅಮರಾವತಿಯ ಗುಡೂರು ಮಂಡಲದ ಪಿಂಡಿವಾನಿಪಾಲೆಂ ಗ್ರಾಮದಲ್ಲಿ ವರದಿಯಾಗಿದೆ.
ವೃತ್ತಿಯಿಂದ ಪೈಂಟರ್ ಆಗಿದ್ದ ತಿರುಮಲ ರಾವ್ ಮೃತ ದುರ್ದೈವಿ. ತಿರುಮಲ ರಾವ್ ಮದ್ಯವ್ಯಸನಿಯಾಗಿದ್ದು, ನಿರ್ಮಲಾ ಜ್ಯೋತಿ ಎನ್ನುವವರೊಂದಿಗೆ ಮದುವೆಯಾಗಿ ಒಂದು ವರ್ಷ ಕಳೆದಿತ್ತು. ಈ ದಂಪತಿಗೆ ಒಬ್ಬಳು ಪುತ್ರಿ ಇದ್ದಾಳೆ. ಕುಡಿತದ ಕಾರಣಕ್ಕೆ ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು.
ಕುಡಿದು ಬಂದ ತಿರುಮಲ ರಾವ್ ಅಡುಗೆ ರುಚಿಯಿಲ್ಲ ಎಂದು ಜಗಳವಾಡಿ, ಆದೇ ಊರಿನಲ್ಲಿದ್ದ ಸ್ನೇಹಿತ ಗೋಪಿ ಎನ್ನುವವರ ಮನೆಗೆ ತೆರಳಿದ್ದು, ಅಲ್ಲಿ ಕೀಟನಾಶಕ ಸೇವಿಸಿದ್ದಾನೆ ಎಂದು ಹೇಳಲಾಗಿದೆ. ಪ್ರಜ್ಞೆ ತಪ್ಪಿ ಬಿದ್ದಿದ್ದ ಆತನನ್ನು ಮಚಲಿಪಟ್ಟಣಂ ಸರ್ಕಾರಿ ಜನರಲ್ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಮೃತನ ಪತ್ನಿ ನಿರ್ಮಲಾ ದೂರಿನ ಮೇರೆಗೆ ಅನುಮಾನಾಸ್ಪದ ಸಾವು ಎಂದು ಕೇಸು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ
ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?