ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪರೋಟಾ ತಿಂದು ಫುಡ್ ಅಲರ್ಜಿ, ಕೇರಳದ ವಿದ್ಯಾರ್ಥಿನಿ ಸಾವು

Twitter
Facebook
LinkedIn
WhatsApp
ಪರೋಟಾ ತಿಂದು ಫುಡ್ ಅಲರ್ಜಿ, ಕೇರಳದ ವಿದ್ಯಾರ್ಥಿನಿ ಸಾವು

ಇಡುಕ್ಕಿ: ಎಲ್ಲರಿಗೂ ಎಲ್ಲಾ ರೀತಿಯ ಆಹಾರ ಆಗಿ ಬರೋದಿಲ್ಲ. ಒಬ್ಬೊಬ್ಬರ ದೇಹ ಪ್ರಕಾರಕ್ಕೆ ತಕ್ಕಂತೆ ಆಹಾರವನ್ನು ಆರಿಸಿಕೊಳ್ಳಬೇಕಾಗುತ್ತದೆ. ಕೆಲವೊಬ್ಬರು ನಿರ್ಧಿಷ್ಟ ಆಹಾರ ಸೇವಿಸಿದ್ರೆ ಅಲರ್ಜಿಯನ್ನು ಅನುಭವಿಸುತ್ತಾರೆ. ಹಾಗೆಯೇ ಬಹುಕಾಲದಿಂದ ತಿನ್ನದಿದ್ದ ಆಹಾರವೊಂದನ್ನು ದಿಢೀರ್ ತಿಂದ ಕಾರಣ ಯುವತಿಯೊಬ್ಬಳಿಗೆ ಫುಡ್ ಅಲರ್ಜಿ ಉಂಟಾಗಿ ಆಕೆ ಸಾವನ್ನಪ್ಪಿದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ತೋಡಪುಳದಲ್ಲಿ ನಡೆದಿದೆ. 

ಪರೋಟ ತಿಂದ ಬಳಿಕ ಫುಡ್​ ಅಲರ್ಜಿಯಿಂದಾಗಿ ಪಿಯು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ತೋಡಪುಳ ಸಮೀಪದ ವಾಜತೊಪ್ಪುವಿನ ನಿವಾಸಿ ನಯನಮರಿಯಾ (16) ಮೃತ ವಿದ್ಯಾರ್ಥಿನಿ. ವಾಜತೊಪ್ಪುವಿನ ಸೆಂಟ್​ ಜಾರ್ಜ್​ ಹೈಯರ್​ ಸೆಕೆಂಡರಿ ಸ್ಕೂಲ್​ನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು.

ಮೈದಾ ಮತ್ತು ಗೋಧಿಯಿಂದ ಮಾಡಿದ ಆಹಾರ (Food)ಗಳನ್ನು ಸೇವಿಸಿದಾಗಲೆಲ್ಲ ನಯನಾಗೆ ಅಲರ್ಜಿ ಬರುತ್ತಿತ್ತಂತೆ. ಹೀಗಾಗಿ ತುಂಬಾ ಸಮಯಗಳಿಂದ ಇಂಥಾ ಆಹಾರವನ್ನು ಸೇವಿಸುತ್ತಿರಲ್ಲಿಲ್ಲ. 

ಆದರೆ ತುಂಬಾ ದಿನಗಳ ಬಳಿಕ ಇತ್ತೀಚೆಗಷ್ಟೇ ಮತ್ತೆ ಮೈದಾ ಅಥವಾ ಗೋಧಿಯಿಂದ ಮಾಡಿದ ಆಹಾರವನ್ನು ಸೇವಿಸಿದ್ದಳು ಮತ್ತು ಆಕೆಗೆ ಏನೂ ಆಗಿರಲಿಲ್ಲ. ಹೀಗಾಗಿ ಏನೂ ಆಗಲಿಲ್ಲ ಎಂಬ ನಂಬಿಕೆಯಿಂದಲೇ ಇತ್ತೀಚೆಗೆ ನಯನಾ ಮೈದಾದಿಂದ ಮಾಡಿ ಪರೋಟವನ್ನು ತಿಂದಿದ್ದಳು. ಆದರೆ ಪರೋಟ ತಿಂದ ಬಳಿಕ ಈಕೆಗೆ ಅಲರ್ಜಿ ಕಾಣಿಸಿಕೊಂಡಿತ್ತು. ತಕ್ಷಣ ಇಡುಕ್ಕಿ ಮೆಡಿಕಲ್​ ಕಾಲೇಜಿಗೆ ದಾಖಲಿಸಲಾಯಿತು. ವೆಂಟಿಲೇಟರ್​ನಲ್ಲಿ ಇಟ್ಟು ಚಿಕಿತ್ಸೆ (Treatment) ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ನಿನ್ನೆ (ಫೆ. 10) ಮಧ್ಯಾಹ್ನ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದುಬಂದಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ