ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಲಾಹೋರ್: ಪಾಕಿಸ್ತಾನದಲ್ಲಿ ರೈಲು ಹಳಿ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಎಕ್ಸ್ಪ್ರೆಸ್ ಟ್ರೈನ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 30 ಮಂದಿ ಮೃತಪಟ್ಟಿರುವ ದುರಾದೃಷ್ಟಕರ ಘಟನೆ ನಡೆದಿದೆ. ಆದರೆ ಇನ್ನು ಅಷ್ಟೇ ಅಧಿಕೃತ ಸಂಖ್ಯೆ ಹೊರಬರಬೇಕಾಗಿದೆ.
ಲಾಹೋರ್ ಕಡೆಗೆ ಹೊರಟಿದ್ದ ಸರ್ ಸಯ್ಯದ್ ಎಕ್ಸ್ಪ್ರೆಸ್ ಟ್ರೈನ್ ಮಿಲಾತ್ ಎಕ್ಸ್ಪ್ರೆಸ್ ಟ್ರೈನ್ ನಡುವೆ ಈ ಅಪಘಾತವಾಗಿದೆ. ಘೋಟ್ಕಿ ಸಮೀಪ ರೇತಿ ಮತ್ತು ದಹಾರ್ಕಿ ರೈಲ್ವೆ ನಿಲ್ದಾಣಗಳ ಮಧ್ಯೆ ಈ ಅಪಘಾತ ಸಂಭವಿಸಿದೆ. ಮಿಲಾತ್ ಎಕ್ಸ್ಪ್ರೆಸ್ ಟ್ರೈನ್ ಕರಾಚಿಯಿಂದ ಸರಗೋಢಾ ಕಡೆಗೆ ತೆರಳುತ್ತಿತ್ತು. 50 ಮಂದಿಗೆ ಗಾಯಗಳಾಗಿವೆ.
ಮಿಲಾತ್ ಎಕ್ಸ್ಪ್ರೆಸ್ ಟ್ರೈನಿನ 13 ಬೋಗಿಗಳು ಹಳಿ ತಪ್ಪಿದ್ದು, 8 ಬೋಗಿಗಳು ನಜ್ಜುಗುಜ್ಜಾಗಿವೆ. ಅಪಘಾತಕ್ಕೆ ತುತ್ತಾದ ಟ್ರೈನ್ಗಳ ಅವಶೇಷಗಳಲ್ಲಿ ಹತ್ತಾರು ಮಂದಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯ ಕಷ್ಟಸಾಧ್ಯವಾಗಿದೆ ಎಂದು ಸ್ಥಳಕ್ಕೆ ದೌಡಾಯಿಸಿದ ಉನ್ನತಾಧಿಕಾರಿಗಳು ಹೇಳಿದ್ದಾರೆ. ಪಾಕಿಸ್ತಾನ್ ರೇಂಜರ್ಸ್ ಸಿಂಧ್ಗೆ ಸೇರಿದ ಭದ್ರತಾ ಪಡೆಗಳು ಸ್ಥಳಕ್ಕೆ ತೆರಳಿವೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?