ನೋಯ್ಡಾ: ರಸ್ತೆ ಬದಿ ಪಾನಿಪುರಿ ತಿನ್ನುತ್ತಿದ್ದ ಮೂವರು ಸಹೋದರಿಯರ ಮೇಲೆ ಕಾರೊಂದು ಹರಿದ ಪರಿಣಾಮ ತಂಗಿ ಮೃತಪಟ್ಟರು ಅಕ್ಕಂದಿರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಕಾರು ಚಾಲಕ ಪಾನಮತ್ತನಾಗಿ ಕಾರು ಚಾಲಾಯಿಸಿದ ಪರಿಣಾಮ ಈ ಅವಘಡ ಸಂಭವಿಸಿದೆ. ನೋಯ್ಡಾದ ಸದರ್ಪುರ ಪ್ರದೇಶದಲ್ಲಿ ಸೋನಂ ಬಜಾರ್ ಎಂಬಲ್ಲಿ ಭಾನುವಾರ ಸಂಜೆ ಈ ಅವಘಡ ಸಂಭವಿಸಿದೆ.
ಪೊಲೀಸರ ಪ್ರಕಾರ ಖಜೂರ್ ಕಾಲೋನಿ (Khajur Colony) ನಿವಾಸಿ ಪುಷ್ಪಾ (Pushpa) ಎಂಬುವವರು ತಮ್ಮ ಮೂವರು ಮಕ್ಕಳಾದ ಆರು ವರ್ಷದ ರಿಯಾ (Riya) 15 ವರ್ಷದ ಅನು (Anu) ಹಾಗೂ 18 ವರ್ಷದ ಅಂಕಿತಾ (Ankita) ಜೊತೆ ಸೋಮ್ ಬಜಾರ್ಗೆ (Som Bazar) ತೆರಳುತ್ತಿದ್ದರು. ಈ ವೇಳೆ ಮಕ್ಕಳು ಪಾನಿಪುರಿ (golgappas) ತಿನ್ನಬೇಕು ಎಂದು ಆಸೆ ವ್ಯಕ್ತಪಡಿಸಿದ್ದು, ಅದರಂತೆ ಮಕ್ಕಳು ರಸ್ತೆ ಬದಿ ನಿಂತುಕೊಂಡು ಪಾನಿಪುರಿ ತಿನ್ನುತ್ತಿರುವಾಗ ಈ ಅವಘಡ ಸಂಭವಿಸಿದೆ.
ಘಟನೆಯಲ್ಲಿ ಮೂವರು ಸಹೋದರಿಯರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರು ವರ್ಷ ಮಗು ರಿಯಾ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?