ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಾನಿಪುರಿ ತಿನ್ನುತ್ತಿದ್ದ ಮೂವರು ಅಕ್ಕತಂಗಿಯರ ಮೇಲೆ ಹರಿದ ಕಾರು: ತಂಗಿ ಸಾವು

Twitter
Facebook
LinkedIn
WhatsApp
ಪಾನಿಪುರಿ ತಿನ್ನುತ್ತಿದ್ದ ಅಕ್ಕತಂಗಿಯರ ಮೇಲೆ ಹರಿದ ಕಾರು: ತಂಗಿ ಸಾವು

ನೋಯ್ಡಾ: ರಸ್ತೆ ಬದಿ ಪಾನಿಪುರಿ ತಿನ್ನುತ್ತಿದ್ದ ಮೂವರು ಸಹೋದರಿಯರ ಮೇಲೆ ಕಾರೊಂದು ಹರಿದ ಪರಿಣಾಮ ತಂಗಿ ಮೃತಪಟ್ಟರು ಅಕ್ಕಂದಿರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಕಾರು ಚಾಲಕ ಪಾನಮತ್ತನಾಗಿ ಕಾರು ಚಾಲಾಯಿಸಿದ ಪರಿಣಾಮ ಈ ಅವಘಡ ಸಂಭವಿಸಿದೆ. ನೋಯ್ಡಾದ ಸದರ್‌ಪುರ ಪ್ರದೇಶದಲ್ಲಿ ಸೋನಂ ಬಜಾರ್ ಎಂಬಲ್ಲಿ ಭಾನುವಾರ ಸಂಜೆ ಈ ಅವಘಡ ಸಂಭವಿಸಿದೆ.

ಪೊಲೀಸರ ಪ್ರಕಾರ ಖಜೂರ್ ಕಾಲೋನಿ (Khajur Colony) ನಿವಾಸಿ ಪುಷ್ಪಾ (Pushpa) ಎಂಬುವವರು ತಮ್ಮ ಮೂವರು ಮಕ್ಕಳಾದ ಆರು ವರ್ಷದ ರಿಯಾ (Riya) 15 ವರ್ಷದ ಅನು (Anu) ಹಾಗೂ 18 ವರ್ಷದ ಅಂಕಿತಾ (Ankita) ಜೊತೆ ಸೋಮ್ ಬಜಾರ್‌ಗೆ (Som Bazar) ತೆರಳುತ್ತಿದ್ದರು. ಈ ವೇಳೆ ಮಕ್ಕಳು ಪಾನಿಪುರಿ (golgappas) ತಿನ್ನಬೇಕು ಎಂದು ಆಸೆ ವ್ಯಕ್ತಪಡಿಸಿದ್ದು, ಅದರಂತೆ ಮಕ್ಕಳು ರಸ್ತೆ ಬದಿ ನಿಂತುಕೊಂಡು ಪಾನಿಪುರಿ ತಿನ್ನುತ್ತಿರುವಾಗ ಈ ಅವಘಡ ಸಂಭವಿಸಿದೆ.

ಘಟನೆಯಲ್ಲಿ ಮೂವರು ಸಹೋದರಿಯರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರು ವರ್ಷ ಮಗು ರಿಯಾ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ