ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಾನ್ ಮಸಾಲ ಕಂಪನಿಗೆ ನೋಟಿಸ್​ ನೀಡಿದ ಅಮಿತಾಬ್ ಬಚ್ಚನ್

Twitter
Facebook
LinkedIn
WhatsApp
ಫರಂಗಿಪೇಟೆ ಸಮೀಪ ಅಪಘಾತ. ವಿಟ್ಲದ ಯುವಕ ಪ್ರಜ್ವಲ್ ಮೃತ್ಯು.

ಬಾಲಿವುಡ್ ಬಿಗ್​ಬಿ ಅಮಿತಾಬ್ ಬಚ್ಚನ್ ಅವರು ಪಾನ್ ಮಸಾಲ ಕಂಪನಿಯೊಂದಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಒಪ್ಪಂದ ಮುಕ್ತಾಯದ ಹೊರತಾಗಿಯೂ ‘ಕಮಲಾ ಪಸಂದ್’ ಕಂಪನಿಯು ಅಮಿತಾಬ್ ಅವರನ್ನೊಳಗೊಂಡ ಜಾಹೀರಾತುಗಳನ್ನು ಟಿವಿಯಲ್ಲಿ ಪ್ರಸಾರ ಮಾಡುತ್ತಿತ್ತು. ಇದನ್ನು ಪ್ರಶ್ನಿಸಿ ಬಿಗ್ ಬಿ​ ಪಾನ್ ಮಸಾಲ ಬ್ರ್ಯಾಂಡ್‌ಗೆ ನೋಟಿಸ್ ಕಳುಹಿಸಿದ್ದಾರೆ.
ಅಮಿತಾಬ್ ಬಚ್ಚನ್ ಅವರು ಈ ಹಿಂದೆ ತಂಬಾಕು ಕಂಪನಿ ‘ಕಮಲಾ ಪಸಂದ್’ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಯುವಕರು ತಂಬಾಕಿಗೆ ವ್ಯಸನಿಯಾಗುವುದನ್ನು ತಡೆಯಲು ಪಾನ್ ಮಸಾಲ ಬ್ರಾಂಡ್ ಗೆ ಪ್ರಚಾರ ನೀಡುವುದನ್ನು ನಿಲ್ಲಿಸುವಂತೆ ರಾಷ್ಟ್ರೀಯ ತಂಬಾಕು ವಿರೋಧಿ ಸಂಘಟನೆಯೊಂದು ವಿನಂತಿಸಿದ ಬಳಿಕ ಅವರು ಅಕ್ಟೋಬರ್‌ನಲ್ಲಿ ಈ ಜಾಹೀರಾತಿನಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರು.

ಪಾನ್ ಮಸಾಲ ಬ್ರ್ಯಾಂಡ್ ನ ಉತ್ಪನ್ನದ ಪ್ರಚಾರ ಮಾಡಿದಕ್ಕಾಗಿ ಬಚ್ಚನ್ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗೆ ಒಳಗಾಗಿದ್ದರು. ಆದರೆ ಒಪ್ಪಂದ ಮುಗಿದರೂ ಕಮಲಾ ಪಸಂದ್ ಕಂಪನಿಯು ಅಮಿತಾಬ್ ಅವರ ಜಾಹೀರಾತುಗಳನ್ನು ಟಿವಿಯಲ್ಲಿ ಪ್ರಸಾರ ಮಾಡುವುದನ್ನು ಮುಂದುವರೆಸಿತ್ತು. ಈ ಕಾರಣಕ್ಕೆ ಬಿಗ್ ಬಿ​ ಪಾನ್ ಮಸಾಲ ಬ್ರ್ಯಾಂಡ್‌ಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ‘ಕಮಲಾ ಪಸಂದ್ ಕಂಪನಿಗೆ ಅಮಿತಾಬ್​ ಬಚ್ಚನ್​ ನೋಟಿಸ್ ಕಳುಹಿಸಿದ್ದಾರೆ. ಬಚ್ಚನ್ ಅವರು ಇರುವ ಟಿವಿ ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಸೂಚಿಸಲಾಗಿದೆ.

‘ಪಾನ್ ಮಸಾಲ ಸೇವನೆಯಿಂದ ಬಾಯಿಯ ಕ್ಯಾನ್ಸರ್​ಗೆ ಕಾರಣವಾಗಬಹುದು ಎಂದು ಇತ್ತೀಚಿನ ಹಲವು ಸಂಶೋಧನೆಗಳು ತಿಳಿಸಿವೆ. ಇದನ್ನು ಇಂಟರ್​​​ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆನ್ ಕ್ಯಾನ್ಸರ್ ಮತ್ತು ವಿಶ್ವ ಆರೋಗ್ಯ ಸಂಸ್ಥೆ ವರದಿಗಳು ಸಹ ಒಪ್ಪಿವೆ. ಆದ್ದರಿಂದ ಅಮಿತಾಬ್ ತಮ್ಮ ನಿರ್ಧಾರದ ಕುರಿತು ಆಲೋಚಿಸಬೇಕು. ಬಾಲಿವುಡ್ ನಟರಾದ ಶಾರುಖ್ ಖಾನ್​, ಅಜಯ್ ದೇವಗನ್, ರಣವೀರ್ ಸಿಂಗ್, ಹೃತಿಕ್ ರೋಷನ್ ಮೊದಲಾದವರು ಪಾನ್ ಮಸಾಲ ಜಾಹಿರಾತಿನಲ್ಲಿ ಕಾಣಿಸಿಕೊಂಡಿರುವುದು ವಿದ್ಯಾರ್ಥಿಗಳಲ್ಲಿ ತಂಬಾಕು ಬಳಕೆ ಹೆಚ್ಚಲು ಕಾರಣವಾಗಿದೆ. ಇದು ಆತಂಕಕಾರಿ ವಿಷಯ. ನಟರಾಗಿ ಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕೇ ಹೊರತು ಈ ರೀತಿ ತಪ್ಪು ಸಂದೇಶವನ್ನಲ್ಲ. ಈ ಕುರಿತು ನನಗೆ ಬೇಸರವಿದೆ’ ಎಂದು ರಾಷ್ಟ್ರೀಯ ತಂಬಾಕು ವಿರೋಧಿ ಸಂಘಟನೆ ಅಧ್ಯಕ್ಷ ಡಾ.ಶೇಖರ್ ಸಲ್ಕರ್ ಅಮಿತಾಬ್ ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು