ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಿಂಕಿ-ರಿಂಕಿ ಅವಳಿ ಟೆಕ್ಕಿಗಳನ್ನು ವರಿಸಿದ ಮನ್ಮಥನಿಗೆ ಈಗ ಜೈಲಿನ ಭೀತಿ

Twitter
Facebook
LinkedIn
WhatsApp
ಪಿಂಕಿ-ರಿಂಕಿ ಅವಳಿ ಟೆಕ್ಕಿಗಳನ್ನು ವರಿಸಿದ ಮನ್ಮಥನಿಗೆ ಈಗ ಜೈಲಿನ ಭೀತಿ

ಮುಂಬೈ: ಮಹಾರಾಷ್ಟ್ರದ (Maharashtra) ಸೊಲ್ಲಾಪುರ ಜಿಲ್ಲೆಯ ಮಲ್ಶಿರಾಸ್ ತಾಲೂಕಿನ ಅಕ್ಲುಜ್‌ನಲ್ಲಿ ಐಟಿ ಎಂಜಿನಿಯರ್ (IT Engineer) ಆಗಿರುವ ಅವಳಿ ಸಹೋದರಿಯರಿಬ್ಬರು ಒಬ್ಬನೇ ವ್ಯಕ್ತಿಯನ್ನು ಮದುವೆಯಾದರು (Marriage). ಇದೀಗ ಮದುವೆಯಾದ ಮನ್ಮಥನಿಗೆ ಜೈಲಿನ ಭೀತಿ ಎದುರಾಗಿದೆ.

ಅವಳಿ ಸಹೋದರಿಯರನ್ನ ವರಿಸಿದ್ದ ಮಲಶಿರಾಸ್ ತಾಲೂಕಿನ ನಿವಾಸಿ ಅತುಲ್ ಉತ್ತಮ್ ಔತಾಡೆ ಮದುವೆ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಪೊಲೀಸರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 

ವೀಡಿಯೋ ಆಧರಿಸಿ ತನಿಖೆ ಕೈಗೊಂಡಿದ್ದ ಪೊಲೀಸರು (Police) ಅತುಲ್ ವಿರುದ್ಧ ದ್ವಿಪತ್ನಿತ್ವದ ಆರೋಪ ಹೊರಿಸಲಾಗಿದೆ. ಇದು ಕಾನೂನುಬಾಹಿರವಾಗಿದ್ದು, 7 ವರ್ಷ ಶಿಕ್ಷೆಗೆ ಗುರಿಯಾಗಬಹುದು. ಅತುಲ್ ವಿರುದ್ಧ ಐಪಿಸಿ ಸೆಕ್ಷನ್ 494 (ಸಂಗಾತಿ ಜೀವಂತವಾಗಿರುವಾಗ ಮತ್ತೆ ಮದುವೆಯಾಗುವುದು) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಶಿರೀಶ್ ಸರ್ದೇಶಪಾಂಡೆ ತಿಳಿಸಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗ (National Women’s Commission)ಮತ್ತು ಮಹಾರಾಷ್ಟ್ರ ಮಹಿಳಾ ಸಂಘ ಸಂಸ್ಥೆಗಳು ಕೂಡ ಮೂವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿವೆ. 

ಏನಿದು ಮ್ಯಾರೇಜ್ ಸ್ಟೋರಿ?
ಹೌದು ಇತ್ತೀಚೆಗಷ್ಟೇ ಐಟಿ ಎಂಜಿನಿಯರ್‌ಗಳಾದ (IT Engineer) ಅವಳಿ ಸಹೋದರಿ ಪಿಂಕಿ ಮತ್ತು ರಿಂಕಿ ಪ್ರಸ್ತುತ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ರಿಂಕಿ ಮತ್ತು ಪಿಂಕಿ ಬಾಲ್ಯದಿಂದಲೂ ಒಟ್ಟಿಗೆ ವಾಸಿಸುತ್ತಿದ್ದರು. ಅಷ್ಟೇ ಅಲ್ಲದೇ ಇಬ್ಬರಿಗೂ ಒಬ್ಬರನೊಬ್ಬರು ಬಿಟ್ಟಿರಲು ಸಾಧ್ಯವಿರಲಿಲ್ಲ. ಇದರಿಂದಾಗಿ ಮದುವೆ ಆಗುವುದಾದರೇ ಇಬ್ಬರು ಒಂದೇ ವ್ಯಕ್ತಿಯನ್ನು ಮದುವೆಯಾಗಬೇಕು ಎಂದು ನಿರ್ಧರಿಸಿದ್ದರು.

ಮಲ್ಶಿರಾಸ್ ತಾಲೂಕಿನ ನಿವಾಸಿ ಅತುಲ್ ಉತ್ತಮ್ ಔತಾಡೆ ಎಂಬಾತ ಇವರಿಬ್ಬರಿಗೂ ಪರಿಚಯವಾಗಿದ್ದ. ಅದೇ ಸಮಯಕ್ಕೆ ಪಿಂಕಿ ಮತ್ತು ರಿಂಕಿಯ ತಂದೆಯು ಮರಣ ಹೊಂದಿದ್ದು, ತಾಯಿಯು ಆಗಾಗ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಳು. ಈ ವೇಳೆ ರಿಂಕಿ ಮತ್ತು ಪಿಂಕಿಯ ಸಹಾಯಕ್ಕೆ ಅತುಲ್ ಧಾವಿಸುತ್ತಿದ್ದ. ಇದೇ ಪರಿಚಯ ಪ್ರೀತಿಗೆ ತಿರುಗಿ ಮೂವರು ಮದುವೆ ಆಗಲು ನಿರ್ಧರಿಸಿದ್ದು, ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಅದ್ಧೂರಿಯಾಗಿ ಮದುವೆ ಆದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist