ಶುಕ್ರವಾರ, ಮಾರ್ಚ್ 29, 2024
ಬಿಜೆಪಿ-ಜೆಡಿಎಸ್ ಮೈತ್ರಿ ತಾತ್ಕಾಲಿಕವಲ್ಲ, ಮುಂದೆಯೂ ಇರಲಿದೆ; ಕುಮಾರಸ್ವಾಮಿ-ನೀತಿ ಸಂಹಿತೆ ಉಲ್ಲಂಘನೆ ಆರೋಪ ; ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಮನ್ಸ್ ಜಾರಿ..!-ಬಿಜೆಪಿ ಭದ್ರಕೋಟೆ ಬೆಂಗಳೂರು ದಕ್ಷಿಣಕ್ಕೆ ಪವನ್ ಕಲ್ಯಾಣ್ ಸ್ಟಾರ್ ಪ್ರಚಾರಕ.?-ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಿಂಕಿ-ರಿಂಕಿ ಅವಳಿ ಟೆಕ್ಕಿಗಳನ್ನು ವರಿಸಿದ ಮನ್ಮಥನಿಗೆ ಈಗ ಜೈಲಿನ ಭೀತಿ

Twitter
Facebook
LinkedIn
WhatsApp
ಪಿಂಕಿ-ರಿಂಕಿ ಅವಳಿ ಟೆಕ್ಕಿಗಳನ್ನು ವರಿಸಿದ ಮನ್ಮಥನಿಗೆ ಈಗ ಜೈಲಿನ ಭೀತಿ

ಮುಂಬೈ: ಮಹಾರಾಷ್ಟ್ರದ (Maharashtra) ಸೊಲ್ಲಾಪುರ ಜಿಲ್ಲೆಯ ಮಲ್ಶಿರಾಸ್ ತಾಲೂಕಿನ ಅಕ್ಲುಜ್‌ನಲ್ಲಿ ಐಟಿ ಎಂಜಿನಿಯರ್ (IT Engineer) ಆಗಿರುವ ಅವಳಿ ಸಹೋದರಿಯರಿಬ್ಬರು ಒಬ್ಬನೇ ವ್ಯಕ್ತಿಯನ್ನು ಮದುವೆಯಾದರು (Marriage). ಇದೀಗ ಮದುವೆಯಾದ ಮನ್ಮಥನಿಗೆ ಜೈಲಿನ ಭೀತಿ ಎದುರಾಗಿದೆ.

ಅವಳಿ ಸಹೋದರಿಯರನ್ನ ವರಿಸಿದ್ದ ಮಲಶಿರಾಸ್ ತಾಲೂಕಿನ ನಿವಾಸಿ ಅತುಲ್ ಉತ್ತಮ್ ಔತಾಡೆ ಮದುವೆ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಪೊಲೀಸರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 

ವೀಡಿಯೋ ಆಧರಿಸಿ ತನಿಖೆ ಕೈಗೊಂಡಿದ್ದ ಪೊಲೀಸರು (Police) ಅತುಲ್ ವಿರುದ್ಧ ದ್ವಿಪತ್ನಿತ್ವದ ಆರೋಪ ಹೊರಿಸಲಾಗಿದೆ. ಇದು ಕಾನೂನುಬಾಹಿರವಾಗಿದ್ದು, 7 ವರ್ಷ ಶಿಕ್ಷೆಗೆ ಗುರಿಯಾಗಬಹುದು. ಅತುಲ್ ವಿರುದ್ಧ ಐಪಿಸಿ ಸೆಕ್ಷನ್ 494 (ಸಂಗಾತಿ ಜೀವಂತವಾಗಿರುವಾಗ ಮತ್ತೆ ಮದುವೆಯಾಗುವುದು) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಶಿರೀಶ್ ಸರ್ದೇಶಪಾಂಡೆ ತಿಳಿಸಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗ (National Women’s Commission)ಮತ್ತು ಮಹಾರಾಷ್ಟ್ರ ಮಹಿಳಾ ಸಂಘ ಸಂಸ್ಥೆಗಳು ಕೂಡ ಮೂವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿವೆ. 

ಏನಿದು ಮ್ಯಾರೇಜ್ ಸ್ಟೋರಿ?
ಹೌದು ಇತ್ತೀಚೆಗಷ್ಟೇ ಐಟಿ ಎಂಜಿನಿಯರ್‌ಗಳಾದ (IT Engineer) ಅವಳಿ ಸಹೋದರಿ ಪಿಂಕಿ ಮತ್ತು ರಿಂಕಿ ಪ್ರಸ್ತುತ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ರಿಂಕಿ ಮತ್ತು ಪಿಂಕಿ ಬಾಲ್ಯದಿಂದಲೂ ಒಟ್ಟಿಗೆ ವಾಸಿಸುತ್ತಿದ್ದರು. ಅಷ್ಟೇ ಅಲ್ಲದೇ ಇಬ್ಬರಿಗೂ ಒಬ್ಬರನೊಬ್ಬರು ಬಿಟ್ಟಿರಲು ಸಾಧ್ಯವಿರಲಿಲ್ಲ. ಇದರಿಂದಾಗಿ ಮದುವೆ ಆಗುವುದಾದರೇ ಇಬ್ಬರು ಒಂದೇ ವ್ಯಕ್ತಿಯನ್ನು ಮದುವೆಯಾಗಬೇಕು ಎಂದು ನಿರ್ಧರಿಸಿದ್ದರು.

ಮಲ್ಶಿರಾಸ್ ತಾಲೂಕಿನ ನಿವಾಸಿ ಅತುಲ್ ಉತ್ತಮ್ ಔತಾಡೆ ಎಂಬಾತ ಇವರಿಬ್ಬರಿಗೂ ಪರಿಚಯವಾಗಿದ್ದ. ಅದೇ ಸಮಯಕ್ಕೆ ಪಿಂಕಿ ಮತ್ತು ರಿಂಕಿಯ ತಂದೆಯು ಮರಣ ಹೊಂದಿದ್ದು, ತಾಯಿಯು ಆಗಾಗ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಳು. ಈ ವೇಳೆ ರಿಂಕಿ ಮತ್ತು ಪಿಂಕಿಯ ಸಹಾಯಕ್ಕೆ ಅತುಲ್ ಧಾವಿಸುತ್ತಿದ್ದ. ಇದೇ ಪರಿಚಯ ಪ್ರೀತಿಗೆ ತಿರುಗಿ ಮೂವರು ಮದುವೆ ಆಗಲು ನಿರ್ಧರಿಸಿದ್ದು, ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಅದ್ಧೂರಿಯಾಗಿ ಮದುವೆ ಆದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ