ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

2 ಲಕ್ಷ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪನೆಗೆ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

Twitter
Facebook
LinkedIn
WhatsApp
2 ಲಕ್ಷ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪನೆಗೆ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

ನವದೆಹಲಿ: ದೇಶದ ಸಹಕಾರ ಅಭಿಯಾನವನ್ನು ಇನ್ನಷ್ಟು ಬಲಪಡಿಸಲು ಮುಂದಡಿ ಇಟ್ಟಿರುವ ಕೇಂದ್ರ ಸರ್ಕಾರ, ದೇಶಾದ್ಯಂತ 2 ಲಕ್ಷ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ/ ಹೈನುಗಾರಿಕೆ ಮತ್ತು ಮೀನುಗಾರಿಕೆ ಸಹಕಾರ ಸಂಘವನ್ನು ಸ್ಥಾಪಿಸಲು ನಿರ್ಧರಿಸಿದೆ. ಈ ಮೂಲಕ ಕೃಷಿ ಸಾಲ ನೀಡಿಕೆಯನ್ನು ಇನ್ನಷ್ಟು ತಳಮಟ್ಟಕ್ಕೆ ವಿಸ್ತರಿಸುವ ಮತ್ತು ಅದನ್ನು ಇನ್ನಷ್ಟು ವ್ಯಾಪಕ ಮಾಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ (Union Cabinet meeting) ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಮುಂದಿನ 5 ವರ್ಷದಲ್ಲಿ ಸಂಘಗಳು ಸ್ಥಾಪನೆ ಆಗಲಿವೆ.

ಹಾಲಿ ದೇಶದಲ್ಲಿ 63 ಸಾವಿರ ಪ್ರಾಥಮಿಕ ಕೃಷಿ ಸಾಲ ಸಂಘಗಳು ಕಾರ್ಯನಿರ್ವಹಿಸುತ್ತಿವೆ. ಆದರೆ ಈಗಲೂ ದೇಶದ 1.6 ಪಂಚಾಯತ್‌ ವ್ಯಾಪ್ತಿಯಲ್ಲಿ ಯಾವುದೇ ಪ್ರಾಥಮಿಕ ಕೃಷಿ ಸಾಲ ಸೊಸೈಟಿಗಳು (Primary Agricultural Credit Unions) ಮತ್ತು 2 ಲಕ್ಷ ಪಂಚಾಯತ್‌ಗಳು ಯಾವುದೇ ಹೈನುಗಾರಿಕೆ ಸಹಕಾರ ಸಂಘಗಳನ್ನು ಹೊಂದಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿ ಪಂಚಾಯತ್‌ಗೆ ಒಂದರಂತೆ ಪ್ರಾಥಮಿಕ ಕೃಷಿ ಸಾಲ ಸಂಘ/ ಹೈನುಗಾರಿಕೆ ಸಂಘ (Dairy Co-operative Societies.) ಸ್ಥಾಪಿಸುವ ಗುರಿಯನ್ನು ಸರ್ಕಾರ ಹಾಕಿಕೊಂಡಿದೆ. ಜೊತೆಗೆ, ದೊಡ್ಡ ಮಟ್ಟದ ನೀರಾವರಿ ಸೌಲಭ್ಯ ಇದ್ದು ಕಾರ್ಯ ಎನ್ನಿಸುವ ಪಂಚಾಯತ್‌ ವ್ಯಾಪ್ತಿಯಲ್ಲಿ ಹಾಗೂ ಕರಾವಳಿ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಕಾರ್ಯ ಸಾಧು ಎನ್ನಿಸುವ ಸ್ಥಳಗಳಲ್ಲಿ ಕನಿಷ್ಠ ಒಂದಾದರೂ ಮೀನುಗಾರಿಕೆ ಸಹಕಾರ ಸಂಘ ಸ್ಥಾಪನೆಯ ಗುರಿಯನ್ನು ಸರ್ಕಾರ ರೂಪಿಸಿದೆ.

5 ವರ್ಷದಲ್ಲಿ ಸ್ಥಾಪನೆ:

ಸಂಪುಟ ಸಭೆ ಬಳಿಕ ಮಾತನಾಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ (, Union Information and Broadcasting Minister) ಅನುರಾಗ್‌ ಠಾಕೂರ್‌ (Anurag Thakur), ‘ಮುಂದಿನ 5 ವರ್ಷಗಳಲ್ಲಿ 2 ಲಕ್ಷ ಪ್ರಾಥಮಿಕ ಕೃಷಿ ಸಾಲ ಸಂಘ/ಹೈನುಗಾರಿಕೆ/ಮೀನುಗಾರಿಕೆ ಸಂಘ ಸ್ಥಾಪಿಸುವ ಗುರಿ ಹಾಕಿಕೊಳ್ಳಲಾಗಿದೆ. ಕೇಂದ್ರ ಮತ್ತು ರಾಜ್ಯಗಳ ಸರ್ಕಾರಗಳ ವ್ಯಾಪ್ತಿಯಲ್ಲಿ ಬರುವ ವಿವಿಧ ಇಲಾಖೆಗಳ ಯೋಜನೆಯನ್ನು ಒಂದುಗೂಡಿಸಿ ಈ ಯೋಜನೆ ಜಾರಿಗೊಳಿಸಲಾಗುವುದು. ಇದರಡಿ ಹೊಸ ಸಹಕಾರ ಸಂಘ ಸ್ಥಾಪನೆ ಜೊತೆಗೆ ಅವುಗಳನ್ನು ಆಧುನಿಕ ಮೂಲಸೌಕರ್ಯಗಳ (modern infrastructure) ಮೂಲಕ ಉನ್ನತೀಕರಿಸಲಾಗುವುದು’ ಎಂದು ತಿಳಿಸಿದರು.

ರೈತರಿಗೆ ಸುಲಭ ಸಾಲ:

ಈ ಸಂಘಗಳ ಸ್ಥಾಪನೆಯಿಂದ ರೈತರಿಗೆ ಅಗತ್ಯ ಸಾಲ ಸೌಲಭ್ಯ ಲಭ್ಯವಾಗುವ ಜೊತೆಗೆ ಅವರ ಅದಾಯ ಹೆಚ್ಚಳಕ್ಕೆ ನೆರವಾಗಲಿದೆ. ಅಲ್ಲದೆ ಗ್ರಾಮೀಣ ಭಾಗದಲ್ಲಿ ಹೊಸ ಉದ್ಯೋಗ ಸೃಷ್ಟಿಗೂ ಕಾರಣವಾಗಲಿದೆ ಎಂದು ಠಾಕೂರ್‌ ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist