ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುತ್ತೂರು: ಪೊಲೀಸ್ ಜೀಪ್ -ಬೈಕ್ ಢಿಕ್ಕಿ; ಪಾಣಾಜೆ ಸಿಎ ಬ್ಯಾಂಕ್ ನ ಸಿಇಒ ಸಾವು

Twitter
Facebook
LinkedIn
WhatsApp
MV5BNTk1OTUxMzIzMV5BMl5BanBnXkFtZTcwMzMxMjI0Nw@@. V1 1 10

ಪುತ್ತೂರು, ಮಾ 06 : ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪ್ಯ ಬಳಿ ಪೊಲೀಸ್ ಜೀಪಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾ.೫ ರಂದು ರಾತ್ರಿ ಸಂಭವಿಸಿದೆ.

ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ ಬಿ. (50) ಮೃತಪಟ್ಟವರಾಗಿದ್ದಾರೆ.

ಮಾಣಿ-ಮೈಸೂರು ರಸ್ತೆಯ ಆರ್ಯಾಪು ಗ್ರಾಮದ ಸಂಪ್ಯ ಎಂಬಲ್ಲಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪೊಲೀಸ್ ವಾಹನ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಪೊಲೀಸ್ ವಾಹನ ಜಿಲ್ಲೆಯ ಡಿ.ಆರ್.ಗೆ ಸೇರಿದ್ದಾಗಿದ್ದು, ಸುಳ್ಯ ಕಡೆಯಿಂದ ಪುತ್ತೂರಿಗೆ ಆಗಮಿಸುತ್ತಿದ್ದರೆ, ಲಕ್ಷ್ಮಣ್ ಅವರು ಪುತ್ತೂರಿನಿಂದ ಆರ್ಲಪದವು ಕಡೆಗೆ ಹೋಗುತ್ತಿದ್ದಾಗ ಮುಖಾಮುಖಿ ಢಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ