ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುನೀತ್‌ ರಾಜ್‌ಕುಮಾರ್ ನಟಿಸಬೇಕಿದ್ದ 5 ಚಿತ್ರಗಳು ಅರ್ಧಕ್ಕೆ ಸ್ಥಗಿತ.

Twitter
Facebook
LinkedIn
WhatsApp
ಪುನೀತ್ ರಾಜ್‌ಕುಮಾರ್‌ಗೆ ಲಘು ಹೃದಯಾಘಾತ – ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್‌ವುಡ್‌ ಪವರ್‌ಸ್ಟಾರ್‌ ನಟ ಪುನೀತ್‌ ರಾಜ್‌ಕುಮಾರ್ ಅವರ ಅಕಾಲಿಕ ಸಾವಿನಿಂದಾಗಿ ಅವರು ನಟಿಸುತ್ತಿದ್ದ ಸಿನಿಮಾಗಳು ಅರ್ಧಕ್ಕೆ ಸ್ಥಗಿತಗೊಂಡಿದೆ.
ಪುನೀತ್‌ ರಾಜ್‌ಕುಮಾರ್ ನಟಿಸುತ್ತಿದ್ದ ಸಿನಿಮಾಗಳ ಬಜೆಟ್‌ ಏನಿಲ್ಲವೆಂದರೂ 10 ಕೋಟಿ ರೂಪಾಯಿ ಮೇಲಿರುತ್ತಿತ್ತು ಎನ್ನುತ್ತಾರೆ ಸಿನಿಮಾ ಪಂಡಿತರು. ಅನೌನ್ಸ್‌ ಆಗಿದ್ದ ಮೂರು ಸಿನಿಮಾ ಸೇರಿ ಒಟ್ಟು ಐದು ಸಿನಿಮಾಗಳು ಅವರ ತೆಕ್ಕೆಯಲ್ಲಿದ್ದವು.

ಚೇತನ್‌ ಕುಮಾರ್‌ ನಿರ್ದೇಶನದ ‘ಜೇಮ್ಸ್‌’ ಸಿನಿಮಾದ ಶೇ.90ರಷ್ಟು ಚಿತ್ರೀಕರಣ ಮುಗಿದಿತ್ತು. ಪವನ್‌ ಕುಮಾರ್‌ ನಿರ್ದೇಶನ ಮಾಡುತ್ತಿದ್ದ ‘ದ್ವಿತ್ವ’ ಸಿನಿಮಾದ ಶೂಟಿಂಗ್‌ ಆರಂಭವಾಗಬೇಕಿತ್ತು. ‘ಜೇಮ್ಸ್‌’ ಬಿಗ್‌ ಬಜೆಟ್‌ ಸಿನಿಮಾ. 8 ಕೋಟಿ ರೂಪಾಯಿಗೂ ಅಧಿಕ ಹಣ ಖರ್ಚಾಗಿದೆ ಎನ್ನಲಾಗಿದೆ. ‘ದ್ವಿತ್ವ’ ಸಿನಿಮಾಗಾಗಿ ಎಲ್ಲ ರೀತಿಯ ತಯಾರಿಯನ್ನು ಚಿತ್ರ ತಂಡ ಮಾಡಿಕೊಂಡಿತ್ತು. ಚಿತ್ರೀಕರಣ ಆರಂಭಕ್ಕೂ ಮುನ್ನ ಈ ರೀತಿ ಆಗಿದೆ.

ಈ ಎರಡು ಸಿನಿಮಾಗಳನ್ನು ಹೊರತುಪಡಿಸಿದರೆ ‘ಪೈಲ್ವಾನ್‌’ ನಿರ್ದೇಶಕ ಕೃಷ್ಣ ಅವರು ಒಂದು ಸಿನಿಮಾವನ್ನು ಪುನೀತ್‌ಗಾಗಿ ಅನೌನ್ಸ್‌ ಮಾಡಿದ್ದರು. ಆ ಚಿತ್ರದಲ್ಲಿ ಪುನೀತ್‌ ‘ರಾ’ ಏಜೆಂಟ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಕೃಷ್ಣ ತಿಳಿಸಿದ್ದರು. ನೇಪಾಳ, ಬಾಂಗ್ಲಾದಲ್ಲಿ ಶೂಟಿಂಗ್‌ ಪ್ಲಾನ್‌ ಮಾಡಿಕೊಂಡಿದ್ದರು. ದಿನಕರ್‌ ತೂಗುದೀಪ ನಿರ್ದೇಶನದಲ್ಲಿ ಜಯಣ್ಣ ಬ್ಯಾನರ್‌ನಲ್ಲಿ ಮತ್ತೊಂದು ಸಿನಿಮಾ ಅನೌನ್ಸ್‌ ಆಗಿತ್ತು. ಕೆಲ ದಿನಗಳ ಹಿಂದೆಯಷ್ಟೇ ‘ಪೃಥ್ವಿ’ ಖ್ಯಾತಿಯ ನಿರ್ದೇಶಕ ಜೇಕಬ್‌ ವರ್ಗೀಸ್‌ ಅವರ ಜತೆ ಸಿನಿಮಾ ಮಾಡುವುದಾಗಿ ಅವರ ಆಪ್ತ ಬಳಗದಲ್ಲಿ ಅಪ್ಪು ಹೇಳಿಕೊಂಡಿದ್ದರು.

ಇದರ ಜತೆಗೆ ತಮ್ಮ ಹೋಮ್‌ ಬ್ಯಾನರ್‌ನಲ್ಲಿ ಅವರು ‘ಫ್ಯಾಮಿಲಿ ಪ್ಯಾಕ್‌’, ‘ಮ್ಯಾನ್‌ ಆಫ್‌ ದಿ ಮ್ಯಾಚ್‌’, ‘ಒನ್‌ ಕಟ್‌ ಟು ಕಟ್‌’ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಈ ಮೂರು ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ. ಎಲ್ಲವೂ ಸೇರಿ 50 ಕೋಟಿ ರೂ. ಬಂಡವಾಳ ಪುನೀತ್‌ ಅವರ ಮೇಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು