ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪೋಕ್ಸೊ ಪ್ರಕರಣ ಒಂದೇ ದಿನದಲ್ಲಿ ವಿಚಾರಣೆ, ಜೀವಾವಧಿ ಸಜೆ ಪ್ರಕಟ

Twitter
Facebook
LinkedIn
WhatsApp
ಭ್ರಷ್ಟಾಚಾರ ಆರೋಪ: ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಅರೆಸ್ಟ್​

ಬಿಹಾರದ ಅರಾರಿಯಾ ಜಿಲ್ಲೆಯ ಪೋಕ್ಸೊ ವಿಶೇಷ ನ್ಯಾಯಾಲಯ ಒಂದೇ ದಿನದಲ್ಲಿ ಪ್ರಕರಣದ ವಿಚಾರಣೆ ನಡೆಸಿ ಅಪರಾಧಿಗೆ ಸಜೆಯನ್ನೂ ವಿಧಿಸಿ ತ್ವರಿತವಾಗಿ ನ್ಯಾಯದಾನ ಮಾಡಿದ ರಾಷ್ಟ್ರೀಯ ದಾಖಲೆ ಮಾಡಿದೆ.

ಪಾಟ್ನಾ: ನ್ಯಾಯದಾನ ವಿಳಂಬವು ನ್ಯಾಯದ ನಿರಾಕರಣೆ ಎಂದು ಕಾನೂನಿನ ಪರಿಭಾಷೆಯಲ್ಲಿ ಹೇಳಲಾಗುತ್ತದೆ. ಆದರೆ, ಬಿಹಾರದ ಅರಾರಿಯಾ ಜಿಲ್ಲೆಯ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೊ) ಅಡಿಯ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯವು ಒಂದೇ ದಿನದಲ್ಲಿ ಸಾಕ್ಷ್ಯಗಳ ಹೇಳಿಕೆ ದಾಖಲು ಮಾಡಿಕೊಂಡು, ವಾದ, ಪ್ರತಿವಾದ ಆಲಿಸಿ, ಸಾಕ್ಷ್ಯಗಳ ಪಾಟೀಸವಾಲು ನಡೆಸಿ ಅಪರಾಧಿಗೆ ಜೀವಾವಧಿ ಸಜೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಿದೆ. ಅತ್ಯಾಚಾರ ಸಂತ್ರಸ್ತರ ಪರಿಹಾರ ನಿಧಿಯಿಂದ ಸಂತ್ರಸ್ತ ಬಾಲಕಿಗೆ 7 ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ಆದೇಶಿಸಿದೆ.
ಈ ರೀತಿ ಒಂದೇ ದಿನದಲ್ಲಿ ಪ್ರಕರಣದ ಎಲ್ಲ ವಿಚಾರಣೆಯನ್ನು ಮುಗಿಸಿ ತೀರ್ಪು ನೀಡಿದ ಬಹುಶಃ ದೇಶದಲ್ಲಿ ಮೊದಲ ಪ್ರಕರಣ ಇದಾಗಿದೆ. 2018ರ ಆಗಸ್ಟ್​ 8ರಂದು ಮಧ್ಯಪ್ರದೇಶದ ಡಾಟಿಯಾದ ಕೋರ್ಟ್​ ಮೂರು ದಿನ ವಿಚಾರಣೆ ನಡೆಸಿ ತೀರ್ಪು ನೀಡಿತ್ತು.

ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಶಿಕಾಂತ ರೈ ಕಳೆದ ಅಕ್ಟೋಬರ್​ 4ರಂದು ಈ ಪ್ರಕರಣದ ವಿಚಾರಣೆ ನಡೆಸಿ ಅವತ್ತೆ ತೀರ್ಪು ನೀಡಿದ್ದಾರೆ. ಆದರೆ ಇದು ಈಗ ಬೆಳಕಿಗೆ ಬಂದಿದೆ.
ಪ್ರಕರಣದ ತನಿಖಾಧಿಕಾರಿಯೂ ಸಂಶಯಕ್ಕೆ ಆಸ್ಪದ ಇಲ್ಲದಂತೆ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ. ಸ್ಥಳದ ಮಹಾಜರು, ಸಂತ್ರಸ್ತೆಯ ಪರೀಕ್ಷೆ, ಹೇಳಿಕೆ ಪಡೆಯುವುದರಿಂದ ಹಿಡಿದು ಸಾಕ್ಷ್ಯ ಸಂಗ್ರಹವನ್ನು ಸಮಪರ್ಕವಾಗಿ ದಾಖಲಿಸಿದ್ದಾರೆ. ಆರೋಪಿಯ ಪರ ವಕೀಲರು ಘಟನೆ ನಡೆದ ಸ್ಥಳದ ಬಗ್ಗೆ ಯಾವುದೇ ತಕರಾರು ಎತ್ತಲಿಲ್ಲ’ ಎಂದು ರೈ ತಮ್ಮ 20 ಪುಟಗಳ ತೀಪಿರ್ನಲ್ಲಿ ಉಲ್ಲೇಖಿಸಿದ್ದಾರೆ.
ಈ ಪ್ರಕರಣವು ಕಳೆದ ಜುಲೈ 22ರಂದು ನಡೆದಿತ್ತು. 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಜುಲೈ 23ರಂದು ಎಫ್‌ಐಆರ್​ ದಾಖಲಾಗಿ ಸೆಪ್ಟೆಂಬರ್​ 24ರಂದು ಆರೋಪಿಯ ವಿರುದ್ಧ ಆರೋಪ ನಿಗದಿ ಮಾಡಲಾಯಿತು. ಈ ಪ್ರಕರಣದ ತನಿಖೆಯನ್ನು ಅರಾರಿಯಾ ಮಹಿಳಾ ಠಾಣೆಯ ಅಧಿಕಾರಿ ರೀಟಾ ಕುಮಾರಿ ನಡೆಸಿದ್ದರು ಎಂದು ಸರ್ಕಾರಿ ವಕೀಲೆ ಶ್ಯಾಮಲಾ ಯಾದವ್​ ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು