ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ನವದೆಹಲಿ: ಜಪಾನಿನ ಟೊಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ನಲ್ಲಿ ಮಹಿಳಾ 10 ಮೀ. ಏರ್ ರೈಫಲ್ ಶೂಟಿಂಗ್ನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಭಾರತೀಯ ಕ್ರೀಡಾಪಟು ಅವನಿ ಲೇಖರ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅವನಿ ಲೇಖರ್ ಅವರದ್ದು ಅಸಾಧಾರಣ ಪ್ರದರ್ಶನ. ಚಿನ್ನದ ಪದಕಕ್ಕೆ ಅರ್ಹರಾದ ನಿಮಗೆ ಅಭಿನಂದನೆಗಳು. ನಿಮ್ಮ ಶ್ರಮ ಮತ್ತು ಶೂಟಿಂಗ್ ಕಡೆಗಿನ ಉತ್ಸಾಹ ಅಮೋಘವಾದದ್ದು. ಭಾರತೀಯರಿಗೆ ಈ ಕ್ಷಣ ವಿಶೇಷವಾದದ್ದು. ನಿಮ್ಮ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು ಎಂದು ತಿಳಿಸಿದ್ದಾರೆ.
ಹಾಗೆಯೇ ನಿನ್ನೆ ಟೇಬಲ್ ಟೆನ್ನಿಸ್ನಲ್ಲಿ ಬೆಳ್ಳಿ ಪದಕ ಪಡೆದ ಭವಿನಾ ಪಟೇಲ್, ಹೈಜಂಪ್ನಲ್ಲಿ ಬೆಳ್ಳಿ ಗೆದ್ದ ನಿಶದ್ ಕುಮಾರ್, ಡಿಸ್ಕಸ್ ಎಸೆತದಲ್ಲಿ ಕಂಚು ಗೆದ್ದ ವಿನೋದ್ ಕುಮಾರ್, ಇಂದು ಡಿಸ್ಕಸ್ ಎಸೆತದಲ್ಲಿ ಬೆಳ್ಳಿ ಗೆದ್ದ ಯೋಗೇಶ್ ಕಥುನಿಯಾ, ಜಾವೆಲಿನ್ ಥ್ರೋದಲ್ಲಿ ಬೆಳ್ಳಿ ಗೆದ್ದ ದೇವೇಂದ್ರ, ಜಾವೆಲಿನ್ ಥ್ರೋನಲ್ಲಿ ಕಂಚು ಗೆದ್ದ ಸುಂದರ್ ಸಿಂಗ್ ಗುರ್ಜಾರ್ ಅವರಿಗೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.
ಇಂದು ಮುಂಜಾನೆ ಅವನಿ ಅವರು ಶೂಟಿಂಗ್ನಲ್ಲಿ ಚಿನ್ನದ ಪದಕ ತಮ್ಮದಾಗಿಸುವ ಮೂಲಕ ದೇಶದ ಹಿರಿಮೆಯನ್ನು ಹೆಚ್ಚಿಸಿದ್ದರು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?