ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ

Twitter
Facebook
LinkedIn
WhatsApp
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ

ಹಾಸನದ ಜೆಡಿಎಸ್‌ ಮುಖಂಡ, ಸಂಸದ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ತನಿಖೆಯ ಹಾದಿಯಲ್ಲಿ SIT ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ವೆಸ್ಟಿಗೇಷನ್‌ ಮುಂದುವರಿಸಿದೆ. ಈ ನಡುವೆ ಎಚ್‌.ಡಿ ರೇವಣ್ಣ ರನ್ನು ಈಗಾಗಲೇ ಎಸ್ಐಟಿ ವಶಕ್ಕೆ ಪಡೆದಿದೆ.

ಇದೆಲ್ಲದರ ನಡುವೆ ಪ್ರಜ್ವಲ್‌ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಒಂದಷ್ಟು ಮಹಿಳೆಯರು ದೂರು ನೀಡುವ ಪ್ರಕ್ರಿಯೆಯೂ ಮುಂದುವರಿದೆ. ಅದರಂತೆ ಶುಕ್ರವಾರ, ಬಂದೂಕು ಬೆದರಿಕೆಯಡಿ ಅತ್ಯಾಚಾರ ಎಸಗಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಸದ್ಯಸೆಯೊಬ್ಬರು ದೂರು ನೀಡಿದ್ದಾರೆ. ಈ ಎಲ್ಲ ಘಟನಾವಳಿಗಳ ಬೆನ್ನಲ್ಲೆ ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಸಹ ಮೊದಲ ಸಲ ಈ ಕೇಸ್‌ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

“ನಮ್ಮ ಅಜ್ಜಿ ತಾತ ಸಾಕಷ್ಟು ನೋವಲ್ಲಿದ್ದಾರೆ. ಈಗಾಗಲೇ SIT ರಚನೆಯಾಗಿದೆ. ತನಿಖೆ ಆರಂಭವಾಗ್ತಿದೆ. ನನಗೆ ದುಃಖ ತಂದುಕೊಟ್ಟ ವಿಚಾರ ಏನೆಂದರೆ, ಆ ದೃಶ್ಯಾವಳಿಗಳನ್ನು ನೋಡುವ ಧೈರ್ಯ ನಾನು ಮಾಡಲಿಲ್ಲ. ನನ್ನ ಕೆಲವೊಂದಿಷ್ಟು ಸುತ್ತಮುತ್ತಲಿನ  ಆಪ್ತ ವರ್ಗ ಫೋನ್‌ ಮಾಡಿ ಹೇಳಿದಾಗ, ಮನಸ್ಸಿಗೆ ಬೇಜಾರಾಯ್ತು”

“ಸಹಜವಾಗಿ, ಈ ರೀತಿಯ ಡಿಸ್ಟರ್ಬಿಂಗ್‌ ವಿಡಿಯೋಗಳು ಇದ್ದ ಸಂದರ್ಭದಲ್ಲಿ ಕನಿಷ್ಠ ಪಕ್ಷ ಬ್ಲರ್‌ ಆದ್ರೂ ಮಾಡಬೇಕಿತ್ತು.  ಇವತ್ತು ಆ ಹೆಣ್ಣು ಮಕ್ಕಳ ವಿಡಿಯೋಗಳನ್ನು ಸೋಷಿಯಲ್‌ ಮೀಡಿಯಾಗಳಲ್ಲಿ ಶೇರ್‌ ಮಾಡುತ್ತಿದ್ದಾರೆ. ಓಪನ್‌ ಆಗಿಯೇ ಅವರ ಮುಖ ಕಾಣುವ ರೀತಿಯಲ್ಲಿ ರಾಜ್ಯದ ಜನತೆಗೆ ತೋರಿಸಿದ್ದಾರೆ. ಈ ಬಗ್ಗೆಯೂ ಹೆಚ್ಚಿನ ತನಿಖೆ ಆಗಬೇಕು ಎಂಬುದು ವೈಯಕ್ತಿಕ ಅಭಿಪ್ರಾಯ” ಎಂದಿದ್ದಾರೆ.

 

ದೇವೇಗೌಡ ಅವರನ್ನು, ಕುಮಾರಣ್ಣ ಅವರನ್ನು ಈ ಪ್ರಕರಣದಲ್ಲಿ ಎಳೆದು ತರುವುದು ಸಮಂಜಸ ಅಲ್ಲ.‌ ಈಗಾಗಲೇ ಆರೋಪಿ ಸ್ಥಾನದಲ್ಲಿ ಪ್ರಜ್ವಲ್‌ ಇದ್ದಾರೆ. ಅಂತಿಮವಾಗಿ ಕಾನೂನಿಗಿಂತ ಯಾರೂ ದೊಡ್ಡವರಿಲ್ಲ. ತಪ್ಪು ಮಾಡಿದವರು ತಲೆ ಬಾಗಲೇಬೇಕು. ತಪ್ಪಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ತನಿಖಾವರದಿ ನಮ್ಮ ಮುಂದೆ ಪ್ರಕಟವಾಗುತ್ತೋ ಆಗ ಮುಂದಿನದನ್ನು ಮಾತನಾಡೋಣ” ಎಂದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ