ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರತಿಭಟನೆ ನಡುವೆ ಮಾಲ್ಡೀವ್ಸ್‌ಗೆ ಪರಾರಿಯಾದ ಶ್ರೀಲಂಕಾ ಅಧ್ಯಕ್ಷ ಗೊಟಬಯ!

Twitter
Facebook
LinkedIn
WhatsApp
ಪ್ರತಿಭಟನೆ ನಡುವೆ ಮಾಲ್ಡೀವ್ಸ್‌ಗೆ ಪರಾರಿಯಾದ ಶ್ರೀಲಂಕಾ ಅಧ್ಯಕ್ಷ ಗೊಟಬಯ!

ಕೊಲೊಂಬೊ(ಜು.13): ಶ್ರೀಲಂಕಾದ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಆರ್ಥಿಕ ಬಿಕ್ಕಟ್ಟಿನ ನಡುವೆ ತಲೆದೋರಿರುವ ರಾಜಕೀಯ ಬಿಕ್ಕಟ್ಟು ಮತ್ತೊಂದು ತಿರುವು ಪಡೆದುಕೊಳ್ಳುತ್ತಿದೆ. ಲಂಕಾ ಜನರು ಸರ್ಕಾರದ ವಿರುದ್ಧ ದಂಗೆ ಎದ್ದಿದ್ದಾರೆ. ಪ್ರಧಾನಿ, ಅಧ್ಯಕ್ಷರ ಮನೆಗೆ ನುಗ್ಗಿ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದಾರೆ. ಭಾರಿ ಪ್ರತಿಭಟನೆ ನಡುವೆ ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಲ್ಡೀವ್ಸ್‌ಗೆ ಪರಾರಿಯಾಗಿದ್ದಾರೆ.  ಕಳೆದ ಒಂದು ವಾರದಿಂದ ವಿದೇಶಕ್ಕೆ ಪಲಾಯನ ಮಾಡಲು ಸತತ ಪ್ರಯತ್ನ ಮಾಡುತ್ತಿದ್ದ ಗೊಟಬಯಗೆ ಶ್ರೀಲಂಕಾ ಇಮಿಗ್ರೇಷನ್ ಅಧಿಕಾರಿಗಳು ಅನುಮತಿ ನೀಡಿರಲಿಲ್ಲ. ಆದರೆ ಗೊಟಬಯ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬಳಿಕ ಅಧಿಕಾರಿಗಳು ಗೊಟಬಯ ಪ್ರಯಾಣಕ್ಕೆ ಅನುಮತಿ ನೀಡಿದ್ದಾರೆ. ದುಬೈ ಪ್ರಯಾಣಕ್ಕೆ ಯತ್ನಿಸಿದ್ದ ಗೊಟಬಯ ಕೊನೆಗೆ ಮಾಲ್ಡೀವ್ಸ್‌ಗೆ ಹಾರಿದ್ದಾರೆ. ಕುಟುಂಬ ಸಮೇತ ಇದೀಗ ಮಾಲ್ಡೀವ್ಸ್‌ನಲ್ಲಿದ್ದಾರೆ ಎಂದು ಶ್ರೀಲಂಕಾ ಸರ್ಕಾರದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಿನ್ನೆ(ಜು.12) ರಾಜೀನಾಮೆ ಪತ್ರಕ್ಕೆ ರಹಸ್ಯ ಸ್ಥಳದಲ್ಲೇ ಸಹಿ ಹಾಕಿದ ಗೊಟಬಯ ರಾಜಪಕ್ಸ, ಸರ್ಕಾರದ ಹಿರಿಯ ಅಧಿಕಾರಿಗೆ ರವಾನಿಸಿದ್ದರು. ಹಿರಿಯ ಅಧಿಕಾರಿ ಈಗಾಗಲೇ ಸ್ಪೀಕರ್‌ಗೆ ರಾಜೀನಾಮೆ ಪತ್ರ ನೀಡಿದ್ದು, ಇಂದು ಗೊಟಬಯ ರಾಜೀನಾಮೆ ಘೋಷಣೆ ಮಾಡಲಿದ್ದಾರೆ.

ಗೊಟಬಯ ಹಾಗೂ ಅವರ ಪತ್ನಿ, ಜೊತೆಗೆ ಗೊಟಬಯ ಸಹೋದರ, ಮಾಜಿ ಹಣಕಾಸು ಸಚಿವ ಬಸಿಲ್ ಪಾಜಪಕ್ಸ ಸೇರಿದಂತೆ ಕುಟುಂಬ ವಿದೇಶಕ್ಕೆ ಪಲಾಯನ ಮಾಡಿದೆ. ಮಿಲಿಟರಿ ವಿಮಾನ ಮೂಲಕ ಮಾಲ್ಡೀವ್ಸ್‌ನ ಮಾಲೆಗೆ ತೆರಳಿದ್ದಾರೆ. ಸ್ಥಳೀಯ ಕಾಲಮಾನದ ಪ್ರಕಾರ ಬೆಳಗಿನ ಜಾವ 3 ಗಂಟೆಗೆ ಮಾಲೆ ತಲುಪಿದ್ದಾರೆ. ರಾಜಪಕ್ಸ್ ಕುಟುಂಬದ ಜೊತೆಗೆ ಬಾಡಿಗಾರ್ಡ್ ಕೂಡ ಮಾಲ್ಡೀವ್ಸ್ ಪ್ರಯಾಣ ಮಾಡಿದ್ದಾರೆ ಎಂದು ಇಮಿಗ್ರೇಷನ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶ್ರೀಲಂಕಾ ಮಿಲಿಟರಿ ಏರ್‌ಕ್ರಾಫ್ಟ್ ಏಂಟನೋವಾ 32 ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ.

ಕೊಲೊಂಬೊ ವಿಮಾನ ನಿಲ್ದಾಣದ ಪಕ್ಕದಲ್ಲಿರುವ ಮಿಲಿಟರಿ ಏರ್‌ಬೇಸ್ ಮೂಲಕ ಗೊಟಬಯ ರಾಜಪಕ್ಸ ಪರಾರಿಯಾಗಿದ್ದಾರೆ. ಇಂದು ರಾಜೀನಾಮೆ ಪತ್ರ ಘೋಷಣೆ ಮಾಡಲಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ ಬೆನ್ನಲ್ಲೇ ಗೊಟಬಯ ರಾಜಪಕ್ಸ ಬಂಧನ ಭೀತಿ ಎದುರಿಸುತ್ತಿದ್ದರು. ಇದನ್ನು ತಪ್ಪಿಸಲು ಗೊಟಬಯ ವಿದೇಶಕ್ಕೆ ಪರಾರಿಯಾಗಿದ್ದಾರೆ. ಲಂಕಾದಲ್ಲಿ ಕಳೆದ ವಾರ ಜನರು ದಂಗೆ ಎದ್ದ ಬೆನ್ನಲ್ಲೇ ರಹಸ್ಯ ಸ್ಥಳಕ್ಕೆ ಸ್ಥಳಾಂತರವಾಗಿದ್ದ ಗೊಟಬಯ ರಾಜಪಕ್ಸ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿದ್ದರು. ವಿದೇಶಕ್ಕೆ ಪರಾರಿಯಾಗಿ ಅಲ್ಲಿಂದಲೇ ತಮ್ಮ ಅಧಿಕಾರ ಚಲಾಯಿಸಲು ಯತ್ನಿಸಿದ್ದರು. ಆದರೆ ಇದು ಸಾಧ್ಯವಾಗದ ಕಾರಣ ಜುಲೈ 13ಕ್ಕೆ ರಾಜೀನಾಮೆ ಘೋಷಿಸುವುದಾಗಿ ಹೇಳಿದ್ದರು. ಆದರೆ ರಾಜೀನಾಮೆ ಪತ್ರಕ್ಕೆ  ಹಾಕಿದ ಬಳಿಕವಷ್ಟೇ ಅಧಿಕಾರಿಗಳು ಗೊಟಬಯ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ.

ದುಬೈ ಪ್ರಯಾಣಕ್ಕಿರುವ ವಿಐಪಿ ಕೌಂಟರ್ ಮುಚ್ಚಿದ ಶ್ರೀಲಂಕಾ ವಿಮಾನ ನಿಲ್ದಾಣ ಅಧಿಕಾರಿಗಳು, ದುಬೈ ಪ್ರಯಾಣ ಮಾಡುವ ಎಲ್ಲರೂ ಸಾರ್ವಜನಿಕ ಕೌಂಟರ್ ಮೂಲಕ ತೆರಳಬೇಕು ಎಂದು ಸೂಚಿಸಲಾಗಿತ್ತು. ಸಾರ್ವಜನಿಕ ಕೌಂಟರ್ ಮೂಲಕ ತೆರಳಿದರೆ ದಂಗೆ ಎದ್ದ ಸಾರ್ವಜನಿಕರು ಪ್ರಯಾಣಕ್ಕೆ ಅವಕಾಶ ಮಾಡಿಕೊಡುವುದಿಲ್ಲ. ಇಷ್ಟೇ ಅಲ್ಲ ನಾಗರೀಕರ ದಂಗೆ ನಡುವೆ ದಾಳಿಯಾಗುವ ಸಾಧ್ಯತೆಯನ್ನು ಅರಿತ ಗೊಟಬಯ, ದುಬೈ ಬದಲು ಮಾಲ್ಡೀವ್ಸ್‌ಗೆ ಪ್ರಯಾಣ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ