ಸಿಂಧುದುರ್ಗ(ಮಹಾರಾಷ್ಟ್ರ) : 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಅಲ್ಲದೇ, ನಾಲ್ವರು ಪ್ರವಾಸಿಗರ ಸ್ಥಿತಿ ಚಿಂತಾಜನಕವಾಗಿದ್ದು, ಮಾಲ್ವಾನ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇಲ್ಲಿನ ಮಾಲ್ವಾನ್ ತರ್ಕರ್ಲಿ ಬೀಚ್ನಲ್ಲಿ ಪ್ರವಾಸಿಗರು ಸ್ಕೂಬಾ ಡೈವಿಂಗ್ಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ದೋಣಿ ಮುಳುಗುತ್ತಿದ್ದನ್ನು ಕಂಡ ಸ್ಥಳೀಯರು ತಕ್ಷಣವೇ ಧಾವಿಸಿ 20 ಪ್ರವಾಸಿಗರ ಪೈಕಿ 18 ಪ್ರವಾಸಿಗರನ್ನು ರಕ್ಷಿಸಲಾಗಿದೆ. ಇದರಲ್ಲಿ 14 ಪ್ರವಾಸಿಗರು ಸುರಕ್ಷಿತವಾಗಿದ್ದಾರೆ. ಭಾರಿ ಗಾಳಿಯಿಂದಾಗಿ ದೋಣಿ ನೀರಿನಲ್ಲಿ ಮುಳುಗಿದೆ ಎಂದು ತಿಳಿದು ಬಂದಿದೆ.ಮಹಾರಾಷ್ಟ್ರದಲ್ಲಿ ಸಿಂಧುದುರ್ಗ ಜಿಲ್ಲೆಯಲ್ಲಿ ದೋಣಿ ಮುಳುಗಡೆ
ಈ ಬಗ್ಗೆ ಮಾಹಿತಿ ಪಡೆದ ಮಾಲ್ವಾನ್ ಪೊಲೀಸರು ಸ್ಥಳಕ್ಕೆ ಬಂದು ಪರಿಹಾರ ಕಾರ್ಯ ಕೈಗೊಂಡಿದ್ದಾರೆ. ಕರಾವಳಿ ಪ್ರದೇಶಗಳಲ್ಲಿ ಕೆಟ್ಟ ವಾತಾವರಣ ಮತ್ತು ಗಾಳಿಯಿಂದಾಗಿ ಪ್ರಸ್ತುತ ಸ್ಕೂಬಾ ಡೈವಿಂಗ್ ನಿಷೇಧಿಸಲಾಗಿದೆ. ಆದರೂ, ಸ್ಕೂಬಾ ಡೈವಿಂಗ್ಗಾಗಿ ಸಮುದ್ರಕ್ಕೆ ಪ್ರವಾಸಿಗರನ್ನು ಕರೆದೊಯ್ದ ದೋಣಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?