ಗುರುವಾರ, ಮೇ 2, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಸಂಗ ಬಂದರೆ ರಾಜ್ಯದಲ್ಲೂ ಯೋಗಿ ಮಾಡೆಲ್ ಜಾರಿ : ಸಿಎಂ

Twitter
Facebook
LinkedIn
WhatsApp
ಪ್ರಸಂಗ ಬಂದರೆ ರಾಜ್ಯದಲ್ಲೂ ಯೋಗಿ ಮಾಡೆಲ್ ಜಾರಿ : ಸಿಎಂ

ಬೆಂಗಳೂರು: ಬೆಳ್ಳಾರೆಯ ಪ್ರವೀಣ್ ಕೊಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಹಂತಕರ ಪತ್ತೆಗೆ ಐದು ತಂಡ ರಚನೆ ಮಾಡಲಾಗಿದ್ದು, ಕೇರಳಕ್ಕೂ ಹೋಗಿ ಕಾರ್ಯಾಚರಣೆ ಮಾಡಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜಿ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಎಲ್ಲರೂ ಸಂಯಮದಿಂದ ವರ್ತಿಸಬೇಕು ಅಂತ ಮನವಿ ಮಾಡಿಕೊಳ್ಳುತ್ತೇನೆ. ಸಂಘಟಿತ ಅಪರಾಧಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

PFI ಬ್ಯಾನ್ ಕುರಿತು ಕೇಂದ್ರ ಗೃಹ ಇಲಾಖೆ ಜೊತೆ ಚರ್ಚೆ: ಪ್ರಹ್ಲಾದ್ ಜೋಶಿ

ಈ ಸಂದರ್ಭದಲ್ಲಿ ಮಾಧ್ಯಮಗಳು ಯೋಗಿ ಮಾದರಿಯಲ್ಲಿ ಮತಾಂಧರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಾ ಎಂಬ ಪ್ರಶ್ನೆಗೆ, ಉತ್ತರ ಪ್ರದೇಶ ಪರಿಸ್ಥಿತಿ ಬೇರೆ ಕರ್ನಾಟಕ ಪರಿಸ್ಥಿತಿ ಬೇರೆ. ನಾವು ಕೇವಲ ಮಾತನಾಡುವುದಿಲ್ಲ. ಕ್ರಮ ಜರುಗಿಸಿ ತೋರಿಸುತ್ತೇವೆ. ಯುಪಿಗೆ ಯೋಗಿ ಸೂಕ್ತ ಸಿಎಂ. ಕರ್ನಾಟಕದಲ್ಲಿ ಎಲ್ಲವನ್ನೂ ಪ್ರಯೋಗ ಮಾಡುತ್ತಿದ್ದು, ಪ್ರಸಂಗ ಬಂದರೆ ರಾಜ್ಯದಲ್ಲೂ ಯೋಗಿ ಮಾಡೆಲ್ ಜಾರಿ ಮಾಡುತ್ತೇವೆ ಎಂದು ಸಿಎಂ ಹೇಳಿದರು.

ಕೆಲವು ಶಕ್ತಿಗಳು ಅಹಿತಕರ ಘಟನೆ ಸೃಷ್ಟಿ ಮಾಡಲು ಕಾಯುತ್ತಿರುತ್ತವೆ. ಉದಾಹರಣೆಗೆ ಹಿಜಬ್ ಸಮಸ್ಯೆ ಸೃಷ್ಟಿಸಿದರು. ಹಿಜಬ್‌ ಸಮಸ್ಯೆಯನ್ನು ನಿಯಂತ್ರಣ ಮಾಡಿದ್ದೇವೆ. ಕೋರ್ಟ್ ಕೂಡಾ ಆದೇಶ ನೀಡಿದೆ. ಆಜಾನ್ ವಿಚಾರದಲ್ಲೂ ಸುಪ್ರೀಂಕೋರ್ಟ್ ಆದೇಶಗಳ ಪಾಲನೆ ಮೂಲಕ ನಿಯಂತ್ರಣ ಮಾಡಲಾಗಿದೆ. ಇಂಥವನ್ನೂ ನಿಭಾಯಿಸಿ ರಾಜ್ಯದ ಅಭಿವೃದ್ಧಿಯತ್ತಲೂ ಗಮನ ಕೊಟ್ಟಿದ್ದೇವೆ ಎಂದರು.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ-ಕೇರಳ ಗಡಿಯಲ್ಲಿ ಇಬ್ಬರ ಬಂಧನ!

ಪಿಎಫ್‌ಐನಂತಹ ಸಂಘಟನೆಗಳು ಬ್ಯಾನ್‌ ಆಗುತ್ತಾ ಎಂಬ ಪ್ರಶ್ನೆಗೆ, ರಾಜ್ಯ ಸರ್ಕಾರಗಳು ಈ ಸಂಘಟನೆಗಳನ್ನು ಬ್ಯಾನ್ ಮಾಡುವ ಪ್ರಯತ್ನ ಮಾಡಿವೆ. ಆದರೆ ಕೋರ್ಟಿನಲ್ಲಿ ಹಿನ್ನಡೆಯಾಗಿದೆ. ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಬೇಕು. ಆದಷ್ಟು ಬೇಗ ಕೇಂದ್ರದಿಂದ ಆ ನಿರ್ಧಾರ ಪ್ರಕಟವಾಗುವ ನಿರೀಕ್ಷೆ ಇದೆ ಎಂದರು.

ಕಡತಗಳ ವಿಲೇವಾರಿ ವಿಳಂಬ ಆರೋಪ ಸುಳ್ಳು. ಅಭಿವೃದ್ಧಿ ಕುರಿತ ಎಲ್ಲ ಫೈಲ್ ಗಳೂ ವಿಲೇವಾರಿ ಆಗಿವೆ. ವರ್ಗಾವಣೆ ಕುರಿತ ಫೈಲ್‌ಗಳ ವಿಲೇವಾರಿ ಬಾಕಿಯಿದೆ ಎಂದು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ