ಪ್ರಿಯಾಂಕಾ ಬಾಲಿವುಡ್ ಬಿಡೋಕೆ ಕರಣ್ ಜೋಹಾರ್ ಕಾರಣ: ಬಾಂಬ್ ಸಿಡಿಸಿದ ಕಂಗನಾ
ಬಾಲಿವುಡ್ (Bollywood) ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ವಿದೇಶದಲ್ಲಿ ನೆಲೆಸಲು ಹಾಗೂ ಬಾಲಿವುಡ್ ನಿಂದ ದೂರವಾಗಲು ಕಾರಣ ಕರಣ್ ಜೋಹಾರ್ ಎಂದು ಹೇಳುವ ಮೂಲಕ ಬಿಟೌನ್ ನಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ ನಟಿ ಕಂಗನಾ ರಣಾವತ್ (Kangana Ranaut). ನೇರವಾಗಿ ಕಂಗನಾ ಸೋಷಿಯಲ್ ಮೀಡಿಯಾದಲ್ಲೇ ಈ ಕುರಿತು ಬರೆದುಕೊಂಡಿದ್ದಾರೆ. ಕರಣ್ ಜೋಹಾರ್ (Karan Johar) ಮೇಲೆ ಮಾಡಿರುವ ಗಂಭೀರ ಆರೋಪ ಬಾಲಿವುಡ್ ನಲ್ಲಿ ಭಾರೀ ಚರ್ಚೆಯನ್ನೇ ಹುಟ್ಟು ಹಾಕಿದೆ.
ಸಂದರ್ಶನವೊಂದರಲ್ಲಿ ಮಾತನಾಡಿದ್ದ ಪ್ರಿಯಾಂಕಾ, ‘ನಾನು ಬಾಲಿವುಡ್ ನಿಂದ ದೂರವಾಗಲು ಮತ್ತು ಅಲ್ಲಿನ ಸಿನಿಮಾಗಳನ್ನು ಒಪ್ಪಿಕೊಳ್ಳದೇ ಇರುವುದಕ್ಕೆ ಕಾರಣ ರಾಜಕೀಯ. ಎಲ್ಲೋ ಒಂದು ಕಡೆ ನನ್ನನ್ನು ತುಳಿಯುವುದಕ್ಕೆ ಶುರು ಮಾಡಿದ್ದಾರೆ ಅನಿಸಿತು. ಅವಕಾಶ ಇಲ್ಲದಂತೆ ಮಾಡಲಾಗುತ್ತಿದೆ ಎನ್ನುವ ವಿಚಾರ ಗೊತ್ತಾಯಿತು. ಹೀಗಾಗಿ ನಾನು ಹಾಲಿವುಡ್ ಚಿತ್ರಗಳನ್ನು ಒಪ್ಪಿಕೊಂಡೆ’ ಎಂದು ಹೇಳಿದ್ದಾರೆ.
ಪ್ರಿಯಾಂಕಾ ಆಡಿದ ಮಾತುಗಳು ವೈರಲ್ ಆಗುತ್ತಿದ್ದಂತೆಯೇ ಈ ಅಖಾಡಕ್ಕೆ ಕಂಗನಾ ಇಳಿದಿದ್ದು, ನೇರವಾಗಿ ಕರಣ್ ಜೋಹಾರ್ ಬಗ್ಗೆಯೇ ಆರೋಪ ಮಾಡಿದ್ದಾರೆ. ‘ಕರಣ್ ಜೋಹಾರ್ ನಿಮ್ಮನ್ನು ಬ್ಯಾನ್ ಮಾಡಿದ್ದರು. ಹಲವರು ಗುಂಪು ಕಟ್ಟಿಕೊಂಡು ಓಡಿಸಿದರು. ಈ ಕಾರಣಕ್ಕಾಗಿಯೇ ಪ್ರಿಯಾಂಕಾ ಬಾಲಿವುಡ್ ಬಿಟ್ಟರು’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ ಕಂಗನಾ ರಣಾವತ್.
ಬೆಳ್ಳಂ ಬೆಳಗ್ಗೆ ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿ ಎಂವಿಜೆ ಕಾಲೇಜು ಬಳಿ ಸರಣಿ ಅಪಘಾತವಾಗಿದೆ. ಕ್ಯಾಂಟರ್ ಚಾಲಕ ದಿಡೀರ್ ಬ್ರೇಕ್ ಹಾಕಿದ್ದು, ಬ್ರೇಕ್ ಹಾಕುತ್ತಿದ್ದಂತೆ ಹಿಂದೆ ಬರುತ್ತಿದ್ದ ಟಿಟಿ ವಾಹನ ಹಾಗೂ ಪಲ್ಸರ್ ಬೈಕ್ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟಿಟಿ ಹಾಗೂ ಬೈಕ್ ನುಜುಗುಜ್ಜಾಗಿದೆ. ಬೈಕ್ ಸವಾರರಿಗೆ ಹಾಗೂ ಕ್ಯಾಂಟರ್ ಚಾಲಕನಿಗೆ ಗಾಯಗಳಾಗಿದ್ದು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.