ಭಾನುವಾರ, ಮೇ 12, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರೀತಿಸಿದ ಯುವಕನನ್ನೇ ಮದುವೆಯಾಗುವುದಾಗಿ ಹಠ - ತಂದೆಯಿಂದ ಪುತ್ರಿಯ ಹತ್ಯೆ

Twitter
Facebook
LinkedIn
WhatsApp
ಪ್ರೀತಿಸಿದ ಯುವಕನನ್ನೇ ಮದುವೆಯಾಗುವುದಾಗಿ ಹಠ – ತಂದೆಯಿಂದ ಪುತ್ರಿಯ ಹತ್ಯೆ

ಬೀರೂರು: ಕುಟುಂಬದ ವಿರೋಧದ ನಡುವೆಯೂ ಪ್ರೀತಿಸಿದ ಅನ್ಯಜಾತಿಯ ಯುವಕನನ್ನು ಮದುವೆಯಾಗಲು ಹಠಹಿಡಿದಿದ್ದ ಪುತ್ರಿಯನ್ನು ತಂದೆಯೇ ಕೊಲೆಮಾಡಿದ ಘಟನೆ ಬೀರೂರಿನಲ್ಲಿ ಬುಧವಾರ ರಾತ್ರಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕು ಕೆಂಚಿಗೊಂಡನಕೊಪ್ಪದ ರಾಧಾ (18) ಹತ್ಯೆಗೀಡಾದವರು. ಯುವತಿಯ ತಂದೆ ಚಂದ್ರಪ್ಪ ಕೊಲೆ ಆರೋಪಿ. ಆತ ತನ್ನ ಪುತ್ರಿ ರಾಧಾಳನ್ನು ಬುಧವಾರ 8.30 ರ ಸುಮಾರಿಗೆ ಬೀರೂರು ರೈಲ್ವೆ ಗೇಟ್ ಸಮೀಪ ವೇಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ ಆರೋಪ ಕೇಳಿಬಂದಿದೆ.
ರಾಧಾ ಅದೇ ಊರಿನ ಯುವಕನನ್ನು ಪ್ರೀತಿಸಿದ್ದು, ಆಕೆ ಮನೆಯವರಿಗೆಗೆ ಇಷ್ಟ ಇರಲಿಲ್ಲ. ಸ್ಥಳ ಬದಲಾವಣೆ ಮಾಡಿದರೆ ಯುವಕನನ್ನು ಮರೆಯಬಹುದು ಎಂದು ಚನ್ನಗಿರಿ ತಾಲ್ಲೂಕಿನ ಮಲ್ಲಿಗೆರೆಯ ಚಂದ್ರಪ್ಪ ಸೋದರಿಯ ಮನೆಯಲ್ಲಿ ಬಿಡಲಾಗಿತ್ತು. ಊರಿನಲ್ಲಿ ಹಬ್ಬವಿದ್ದ ಕಾರಣ ಮಗಳನ್ನು ಬುಧವಾರ ರಾತ್ರಿ ಬೈಕ್ ನಲ್ಲಿ ಊರಿಗೆ ಕರೆದುಕೊಂಡು ಬರುತ್ತಿದ್ದ ಚಂದ್ರಪ್ಪ ಮಗಳಿಗೆ ಬುದ್ಧಿವಾದ ಹೇಳಿದ್ದಾನೆ. ಬೀರೂರು ತಲುಪುವಷ್ಟರಲ್ಲಿ ಕತ್ತಲಾಗಿದೆ. ಬೀರೂರು ಹೊರವಲಯದ ರೈಲ್ವೆ ಗೇಟ್ ಬಳಿ ಜನರ ಸಂಚಾರವಿಲ್ಲದ್ದನ್ನು ಗಮನಿಸಿ ಚಂದ್ರಪ್ಪ ಬೈಕ್‌ ನಿಲ್ಲಿಸಿದ್ದಾರೆ. ಗೇಟ್‌ ಪಕ್ಕದ ಬಂಡಿ ಜಾಡಿನಲ್ಲಿ ಇಬ್ಬರು ಸ್ವಲ್ಪ ದೂರ ಕ್ರಮಿಸಿದ್ದಾರೆ. ಪುತ್ರಿಯ ತಲೆ ಮೇಲಿದ್ದ ಅಂಗವಸ್ತ್ರವನ್ನು ಕುತ್ತಿಗೆಗೆ ಬಿಗಿದು, ಅಲ್ಲಿಯೇ ಇದ್ದ ಗುಂಡಿಯಲ್ಲಿ ಅದುಮಿ ಹತ್ಯೆ ಮಾಡಿದ್ದಾನೆ.

ಪುತ್ರಿಯನ್ನು ಕೊಲೆ ಮಾಡಿ ಮೃತದೇಹವನ್ನು ಬಿಟ್ಟು ಮಧ್ಯರಾತ್ರಿ 2.30 ರ ವೇಳೆಗೆ ಮನೆಗೆ ತಲುಪಿದ್ದಾನೆ. ಮನೆಯವರಿಗೆ ವಿಷಯ ತಿಳಿಸಿ ಪುತ್ರಿಯನ್ನು ಕೊಲೆ ಮಾಡಿದ ತಾನೂ ಬದುಕಬಾರದು ಎಂದು ನೇಣು ಹಾಕಿಕೊಳ್ಳಲು ಯತ್ನಿಸಿದ್ದಾನೆ. ಆತನಿಗೆ ಸಮಾಧಾನ ಮಾಡಿದ ಮನೆಯವರು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಚಂದ್ರಪ್ಪನಿಂದ ಮಾಹಿತಿ ಪಡೆದ ಪೊಲೀಸರು ಆತನನ್ಜು ಬೀರೂರು ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಬೀರೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು