ಸೋಮವಾರ, ಏಪ್ರಿಲ್ 29, 2024
ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ಅನುಮಾನಾಸ್ಪದ ರೀತಿಯಲ್ಲಿ ಸಾವು

Twitter
Facebook
LinkedIn
WhatsApp
ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ಬೆಂಗಳೂರು ಗ್ರಾಮಾಂತರ: ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಸಂಬಂಧಿಕರು ನೀರವ ಮೌನಕ್ಕೆ ಜಾರಿದ್ದಾರೆ. ಗಂಡನ ಜೊತೆ ನೂರು ಕಾಲ ಬಾಳಬೇಕು ಎಂದು ಸಾಕಷ್ಟು ಕನಸುಗಳನ್ನ ಹೊತ್ತು ಪ್ರೀತಿಸಿದವನ ಜೊತೆ ಬಂದಿದ್ದ ಸುಂದರಿ, ಮದುವೆಯಾಗಿ ಮೂರು ವರ್ಷ ಕಳೆಯುವಷ್ಟರಲ್ಲೆ ದುರಂತ ಅಂತ್ಯ ಕಂಡಿದ್ದಾಳೆ. ಇಷ್ಟಪಟ್ಟವನ‌ ಜೊತೆ ಚೆನ್ನಾಗಿ ಬದುಕಿ ಬಾಳುತ್ತಾಳೆ ಅಂದುಕೊಂಡಿದ್ದ ಮಗಳು ಅಡ್ಡಲಾಗಿ ಮಲಗಿರೂದನ್ನ ಕಂಡು ತಲೆ ಮೇಲೆ ಬಂಡೆ ಬಿದ್ದಂತೆ ಹೆತ್ತವರು ನೀರವ ಮೌನಕ್ಕೆ ಶರಣಾಗಿದ್ದಾರೆ.

ಇಲ್ಲಿ ಈ ರೀತಿ ಚಕ್ಕ ವಯಸ್ಸಿಗೆ ಸಾವಿನ ಮನೆ‌ ಸೇರಿರುವ ಈಕೆಯ ಹೆಸರು ಮೇಘನಾ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುಂಟೆ ಗ್ರಾಮದ‌ ನಿವಾಸಿ. ಒಬ್ಬಳೆ ಮಗಳಾಗಿದ್ದ ಕಾರಣ ಮನೆಯವರು ಮುದ್ದಾಗಿ‌ ಸಾಕಿದ್ದು ಬಿಇ ವಿದ್ಯಾಭ್ಯಾಸವನ್ನು ಮಾಡಿಸಿದ್ರು. ಆದ್ರೆ ಕಾಲೇಜಿಗೆ ಹೋಗುವ ವೇಳೆ ಪಕ್ಕದ‌ ಊರಿನ ನಾಗೇಶ್ ಎನ್ನುವ ಯುವಕನ ‌ಜೊತೆ ಈಕೆಗೆ ಪ್ರೆಮಾಂಕುರವಾಗಿದೆ. ಈ ವಿಚಾರ ಮನೆಯವರೆಗೂ ತಿಳಿದಿದೆ. ಹೀಗಾಗಿ ಮನೆಯವರು ಯುವತಿಗೆ ಬೇರೆ ಮದುವೆ ಮಾಡಲು ಮುಂದಾಗ್ತಿದ್ದಂತೆ ಇಬ್ಬರು ಮನೆ ಬಿಟ್ಟು ಹೋಗಿ ಮದುವೆಯಾಗಿ ಬಂದಿದ್ದರು.

ಮೊದಲಿಗೆ ವಿರೋಧ ವ್ಯಕ್ತಪಡಿಸಿದ್ದ ಮೇಘನಾ ಕುಟುಂಬಸ್ಥರು ನಂತರ ಒಂದೇ ಜಾತಿಯವರಾಗಿದ್ದ ಕಾರಣ ಒಂದಾಗಿದ್ದು ಇಬ್ಬರು ಸುಖವಾಗಿ ಬಾಳಲಿ ಎಂದು ಚಿನ್ನಾಭರಣಗಳನ್ನ ನೀಡಿದ್ದು, ಇಬ್ಬರು ಅನ್ನೊನ್ಯತೆಗೆ ಒಂದು ಮಗು ಸಹ ಆಗಿದೆ. ಆದರೆ ಮದುವೆಯಾಗಿ ಎರಡು ವರ್ಷ ಕಳೆಯುವಷ್ಡರಲ್ಲೆ ಇಬ್ಬರ ನಡುವೆ ಕಲಹ ಶುರುವಾಗಿದ್ದು ಕಳೆದ ರಾತ್ರಿ ಮನೆಯಲ್ಲಿ ಗಂಡ ಹೆಂಡತಿ ನಡುವೆ ಜಗಳ ನಡೆದಿದೆ. ಈ ವೇಳೆ ಜಗಳ ಮಾಡಿಕೊಂಡು ಕೋಣೆ ಒಳಗಡೆ‌ ಹೋದ ಮೇಘನಾ ಬೆಳಾಗಗುವಷ್ಡರಲ್ಲಿ ಹೆಣವಾಗಿ ಪತ್ತೆಯಾಗಿದ್ದು ಗಂಡನ ಮನೆಯವರೆ ಮೇಘನಾಳನ್ನ ಏನೋ ಮಾಡಿದ್ದಾರೆ ಎಂದು ಮೇಘನಾ ಕುಟುಂಬಸ್ಥರು ಆರೋಪಿಸಿದ್ದಾರೆ.

ಮದುವೆಯಾಗಿ ಮಗುವಾದ ನಂತರ ಮೇಘನಾ ಮತ್ತು ಗಂಡನ ನಡುವೆ ಕಲಹ ಶುರುವಾಗಿದ್ದು ಹಲವು ಭಾರಿ ಮನೆಯವರಿಗೆ ಮದುವೆ ವಿಚಾರದಲ್ಲಿ ನಿಮ್ಮ ಮಾತು ಕೇಳಬೇಕಿತ್ತು ಎಂದು ಹೇಳಿದ್ದಳಂತೆ. ಜತೆಗೆ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪಿದ್ದು, ಊರಿನವರು ಬೆಳಗ್ಗೆ ತರಾ ತುರಿಯಲ್ಲಿ ಮಣ್ಣು ಮಾಡಲು ನೋಡಿದ್ದಾರೆ. ಈ ವೇಳೆ ಪೊಲೀಸರು ಎಂಟ್ರಿಕೊಟ್ಟು ಮೃತದೇವನ್ನ ಶವಾಗಾರಕ್ಕೆ‌ ರವಾನಿಸಿ ಪರೀಕ್ಷೆ ಮಾಡಿಸಿದ್ದಾರೆ. ಇನ್ನು ಈ ಬಗ್ಗೆ ಗಂಡ ನಾಗೇಶನನ್ನ ಕೇಳಿದ್ರೆ ನಾವಿಬ್ಬರು ಪ್ರೀತಿಸಿ ಮದುವೆಯಾಗಿದ್ದು ಇಬ್ಬರು ಚೆನ್ನಾಗೆ ಸಂಸಾರ ಮಾಡ್ತಿದ್ವಿ. ರಾತ್ರಿ ಊಟ ಬಡಿಸುವ ವಿಚಾರಕ್ಕೆ ಸಣ್ಣ ಗಲಾಟೆಯಾಗಿ ನಾನು ಬೈದ್ದಿದ್ದ ಕಾರಣ ಆಕೆ‌ ಕೊಠಡಿ ಒಳಗಡೆ‌‌ ಹೋಗಿ ಬಾಗಿಲು ಹಾಕಿಕೊಂಡಿದ್ದಳು. ಹೀಗಾಗಿ ಮಧ್ಯರಾತ್ರಿ ಮಗು ಅಳುತ್ತಿದೆ ಎಂದು ಕೊಠಡಿ ಒಳಗೆ ಹೋಗಿ ನೋಡಿದಾಗ ಆಕೆ ನೇಣು ಹಾಕಿಕೊಂಡಿದ್ದಾಳು ಎಂದಿದ್ದಾನೆ.

ಒಟ್ಟಾರೆ ಗಂಡ ಹೆಂಡತಿ ಜಗಳ ಉಂಡು ಮಲಗುವವರೆಗೂ ಅನ್ನೂ ಮಾತಿದ್ರು ಉಂಡು ಮಲಗಿದ ಮೇಲೆ‌ ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ನೇಣಿಗೆ ಶರಣಾಗಿರುವುದು ನಿಜಕ್ಕೂ ದುರಂತ. ಇನ್ನು ಈ ಬಗ್ಗೆ ಹೊಸಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದು ಸಂಪೂರ್ಣ ತನಿಖೆ ನಂತರ ಮೇಘನಾಳದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಅನ್ನೂದು ಬೆಳಕಿಗೆ ಬರಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ