ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರೇಮಿಗಳಿಬ್ಬರ ಖಾಸಗಿ ವಿಡಿಯೋ ಸೆರೆ ಹಿಡಿದು ಹಣಕ್ಕಾಗಿ ಬ್ಲ್ಯಾಕ್ ಮೇಲ್; ಇಬ್ಬರು ಆರೋಪಿಗಳ ಬಂಧನ

Twitter
Facebook
LinkedIn
WhatsApp
ಪ್ರೇಮಿಗಳಿಬ್ಬರ ಖಾಸಗಿ ವಿಡಿಯೋ ಸೆರೆ ಹಿಡಿದು ಹಣಕ್ಕಾಗಿ ಬ್ಲ್ಯಾಕ್ ಮೇಲ್; ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು, (ಜುಲೈ.17): ಪ್ರೇಮಿಗಳಿಬ್ಬರ ಖಾಸಗಿ ವಿಡಿಯೋ ಸೆರೆ ಹಿಡಿದು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ.  ಉಷಾ ಮತ್ತು ಸುರೇಶ್ ಬಾಬು ಬಂಧಿತ ಆರೋಪಿಗಳು. 

ಯಲಹಂಕ ಬಳಿಯ ಖಾಸಗಿ ಹೋಟೆಲ್‌ಗೆ ಹೋಗಿದ್ದ ಇಬ್ಬರು ಪ್ರೇಮಿಗಳು, ಒಂದೇ ರೂಮ್ ನಲ್ಲಿ ಎರಡು ಬಾರಿ ಭೇಟಿ ಆಗಿದ್ರು. ಈ ವೇಳೆ ಯಾರಿಗೂ ಗೊತ್ತಾಗದ ರೀತಿ ಆರೋಪಿಗಳು ಕ್ಯಾಮರಾ ಇಟ್ಟು ವಿಡಿಯೋ ಚಿತ್ರಿಕರಿಸಿದ್ದರು. ಆರೋಪಿಗಳಾದ ಉಷಾ ಮತ್ತು ಸುರೇಶ್ ಸಹ ಪ್ರೇಮಿಗಳು. ಅಲ್ಲದೇ ನೊಂದ ಮಹಿಳೆಯ ಹತ್ತಿರದ ಸಂಬಂಧಿ ಸಹ ಆಗಿದ್ದಾರೆ.

ಆರೋಪಿಗಳು ಯಾರಿಗೂ ಇಳಿಯದಂತೆ ರೂಮ್‌ನಲ್ಲಿ ಕ್ಯಾಮರಾ ಇಟ್ಟು ವಿಡಿಯೋ ಮಾಡಿಕೊಂಡಿದ್ದಾರೆ. ಬಳಿಕ ಕೆಲ ದಿನಗಳ ನಂತರ ನೊಂದ ಮಹಿಳೆಗೆ ವಾಟ್ಸಪ್ ಮೂಲಕ ವಿಡಿಯೋ ಕಳಿಸಿದ್ದಾರೆ. ವಿಡಿಯೋ ನೋಡಿ ಮಹಿಳೆ ಶಾಕ್ ಆಗಿದ್ದಾರೆ. ಬಳಿಕ ಅದೇ ನಂಬರ್ ನಿಂದ ಇಪತ್ತೈದು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಹಣ ಕೊಡಿ ಇಲ್ಲಾವಾದ್ರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ನೊಂದ ಮಹಿಳೆ ಹಣ ನೀಡಲು ತಡಮಾಡಿದಾಗ ಆರೋಪಿ ಉಷಾ ಹೊಸ ನಾಟಕ ಶುರು ಮಾಡಿದ್ದಾರೆ. ತನ್ನ ಮೊಬೈಲ್ ಗೂ ಯಾರೋ ನಿಮ್ಮ ವಿಡಿಯೋ ಕಳಿಸಿದ್ದಾರೆ ಎಂದು ಮತ್ತಷ್ಟು ಬೆದರಿಸಲು ಮುಂದಾಗಿದ್ದಾರೆ. ಜೊತೆಗೆ ಸಿಡಿ ಮಾಡಿ ಮನೆಯವರು ಹಾಗೂ ಕುಟುಂಬದ ಎಲ್ಲರಿಗೂ ಕಳಿಸುವುದಾಗಿ ಹೆದರಿಸಿದ್ದಾರೆ.

ಇದರಿಂದ ನೊಂದ ಮಹಿಳೆ ಈ ಬಗ್ಗೆ ಪೊಲೀಸ್‌  ಮೊರೆ ಹೋಗಿದ್ದರು. ಸದ್ಯ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ