ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಜಕಾರ್ತಾ: ಇಂಡೋನೇಷ್ಯಾದಲ್ಲಿ ಇಂಡೋನೇಷ್ಯಾದ ಪೂರ್ವ ಜಾವಾದಲ್ಲಿ ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳು ಕ್ರೀಡಾಂಗಣಕ್ಕೆ ನುಗ್ಗಿ ದಾಂದಲೆ ನಡೆಸಿದ್ದರಿಂದ ಆರಂಭವಾದ ಹಿಂಸಾಚಾರದಲ್ಲಿ 127 ಜನರು ಮೃತಪಟ್ಟಿದ್ದಾರೆ. ಪೊಲೀಸರು ಮತ್ತು ಫುಟ್ಬಾಲ್ ಅಭಿಮಾನಿಗಳ ನಡುವೆ ಆರಂಭವಾದ ವಾಗ್ವಾದವು ಹಿಂಸಾಚಾರಕ್ಕೆ ತಿರುಗಿತು. ಈ ವೇಳೆ ಇಬ್ಬರು ಪೊಲೀಸರೂ ಸೇರಿದಂತೆ 127 ಜನರು ಸಾವನ್ನಪ್ಪಿದ್ದಾರೆ. ಕ್ರೀಡಾಂಗಣದಲ್ಲಿಯೇ ಇಬ್ಬರು ಪೊಲೀಸರು ಹಾಗೂ 36 ಅಭಿಮಾನಿಗಳು ಮೃತಪಟ್ಟರೆ, ಉಳಿದವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಪೂರ್ವ ಜಾವಾ ಪೊಲೀಸ್ ಮುಖ್ಯಸ್ಥ ನಿಕೊ ಅಫಿಂಟಾ ಮಾಹಿತಿ ನೀಡಿದ್ದಾರೆ. 180ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅರೆಮಾ ಎಫ್ಸಿ ಮತ್ತು ಪೆರ್ಸೆಬಯಾ ಸುರಬಯ ಫುಟ್ಬಾಲ್ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಸೋತ ತಂಡದ ಬೆಂಬಲಿಗರು ಏಕಾಏಕಿ ಕ್ರೀಡಾಂಗಣಕ್ಕೆ ನುಗ್ಗಿದರು. ಮೈದಾನಕ್ಕೆ ನುಗ್ಗಿದ ಅಭಿಮಾನಿಗಳನ್ನು ಹಿಮ್ಮೆಟ್ಟಿಸಲು ಪೊಲೀಸರು ಅಶ್ರುವಾಯು ಶೆಲ್ ಸಿಡಿಸಿದರು. ಇದರಿಂದ ಕಾಲ್ತುಳಿತ ಉಟಾಯಿತು. ಹಲವರು ಉಸಿರುಗಟ್ಟಿ ಮೃತಪಟ್ಟರು. ಸ್ಥಳೀಯ ಸುದ್ದಿಮಾಧ್ಯಮಗಳು ಪ್ರಸಾರ ಮಾಡಿರುವ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೊ ತುಣುಕುಗಳಲ್ಲಿ ಮಲಾಂಗ್ನಲ್ಲಿ ಜನರು ಮೈದಾನದತ್ತ ಓಡುವುದು ಮತ್ತು ಶವಗಳನ್ನು ಸುತ್ತಿಟ್ಟಿರುವ ಬ್ಯಾಗ್ಗಳ ದೃಶ್ಯಗಳು ಇವೆ.
ಪ್ರಕರಣದ ಬಗ್ಗೆ ತನಿಖೆ ಆರಂಭಿಸಲಾಗಿದೆ. ಇಂಡೋನೇಷ್ಯಾದ ಜನಪ್ರಿಯ ಫುಟ್ಬಾಲ್ ಕ್ಲಬ್ ಆಗಿರುವ ‘ಬಿಆರ್ಐ ಲಿಗಾ-1’ ಘಟನೆಯ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದೆ. ಪಂದ್ಯದಲ್ಲಿ ಬಿಆರ್ಐ ಲಿಗಾ-1 ತಂಡವು ಪೆರ್ಸೆಬಾಯಾ ತಂಡದ ವಿರುದ್ಧ 3-2 ಅಂತರದಲ್ಲಿ ಸೋಲನುಭವಿಸಿತ್ತು. ಇಂಡೋನೇಷ್ಯಾದ ಫುಟ್ಬಾಲ್ ಒಕ್ಕೂಟವು ಸಹ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?