ಭಾನುವಾರ, ಏಪ್ರಿಲ್ 28, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫೆ.14 ಗೋವುಗಳನ್ನು ಅಪ್ಪಿಕೊಳ್ಳುವ ದಿನ ರದ್ದು

Twitter
Facebook
LinkedIn
WhatsApp
ಫೆ.14 ಗೋವುಗಳನ್ನು ಅಪ್ಪಿಕೊಳ್ಳುವ ದಿನ ರದ್ದು

ನವದೆಹಲಿ: ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ (Animal Welfare Board) ಫೆಬ್ರವರಿ 14ರಂದು ಪ್ರೇಮಿಗಳ ದಿನವನ್ನು (Valentine’s Day) ಆಚರಿಸುವ ಬದಲು ಗೋವುಗಳನ್ನು ಅಪ್ಪಿಕೊಳ್ಳುವ ದಿನವನ್ನಾಗಿ (Cow Hug Day) ಆಚರಿಸಲು ಕರೆ ನೀಡಿತ್ತು. ಆದರೆ ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಈ ನಿರ್ಧಾರವನ್ನು ಮಂಡಳಿ ಹಿಂಪಡೆದಿದೆ.

ಫೆಬ್ರವರಿ 14ರಂದು ವಿಶ್ವದೆಲ್ಲೆಡೆ ಪ್ರೇಮಿಗಳ ದಿನವನ್ನಾಗಿ ಆಚರಿಸಲಾಗುತ್ತದೆ. ಆದರೆ ಈ ದಿನವನ್ನು ಭಾರತದಲ್ಲಿ ಹಸುಗಳನ್ನು ಅಪ್ಪಿಕೊಳ್ಳುವ ದಿನವನ್ನಾಗಿ ಆಚರಿಸಲು ಪ್ರಾಣಿ ಕಲ್ಯಾಣ ಮಂಡಳಿ ಕೆಲ ದಿನಗಳ ಹಿಂದೆ ಕರೆ ನೀಡಿತ್ತು. ಹಸುಗಳನ್ನು ಅಪ್ಪಿಕೊಳ್ಳುವುದರಿಂದ ಹಲವು ಪ್ರಯೋಜನಗಳಿವೆ, ಆದ್ದರಿಂದ ಪ್ರೇಮಿಗಳ ದಿನದಂದು ಹಸುಗಳನ್ನು ಅಪ್ಪಿಕೊಳ್ಳುವ ದಿನವನ್ನಾಗಿ ಆಚರಿಸಲು ತಿಳಿಸಿತ್ತು.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡ ಉದ್ಧವ್ ಠಾಕ್ರೆ ಅವರ ಶಿವಸೇನೆ ಬಣ ಬಿಲಿಯನೇರ್ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರು ಪ್ರಧಾನಿಗೆ ಪವಿತ್ರ ಹಸು ಎಂದು ಹೇಳಿ ಕಿಡಿಕಾರಿತ್ತು

ಪಶ್ಚಿಮ ಬಂಗಾಳದ ರಾಜ್ಯಸಭಾ ಸದಸ್ಯ ಟಿಎಂಸಿಯ ಸಂತನು ಸೇನ್, ಮುಖ್ಯವಾಹಿನಿಯ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸಲು ಹಸುವನ್ನಪ್ಪಿಕೊಳ್ಳುವ ದಿನಕ್ಕೆ ಕರೆ ನೀಡಲಾಗಿದೆ. ಇದು ಹುಸಿ ಹಿಂದುತ್ವ ಹಾಗೂ ಹುಸಿ ದೇಶಭಕ್ತಿಯಾಗಿದೆ ಎಂದು ಛೇಡಿಸಿದ್ದರು.

ನಾನು ರೈತ ಸಮುದಾಯದಿಂದ ಬಂದವನು, ಕೇವಲ ಒಂದು ದಿನವಲ್ಲ, ನಾನು ಪ್ರತಿ ದಿನ ನನ್ನ ಹಸುವನ್ನು ಅಪ್ಪಿಕೊಳ್ಳುತ್ತೇನೆ. ಇದು ನಿರುದ್ಯೋಗ ಮತ್ತು ಹಣದುಬ್ಬರದಂತಹ ಸಮಸ್ಯೆಗಳ ಬಗೆಗಿನ ಗಮನವನ್ನು ಬೇರೆಡೆಗೆ ತಿರುಗಿಸಲು ಮಾಡಿರುವ ಷಡ್ಯಂತ್ರವಾಗಿದೆ ಎಂದು ಕಾಂಗ್ರೆಸ್‌ನ ರಜನಿ ಪಾಟೀಲ್ ಕಿಡಿಕಾರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ