ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫೆ.23 ರಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ವಿಚಾರ ಸಂಕಿರಣ ಮತ್ತು ಅರಿವು ಯಾನ ಮಾಲಿಕೆಯ ಕೃತಿ ಬಿಡುಗಡೆ

Twitter
Facebook
LinkedIn
WhatsApp
rani abbakka 96225570

ಬಂಟ್ವಾಳ:ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದ 30 ರ ನೆನಪು ವಿಚಾರ ಸಂಕಿರಣ ಮತ್ತು ಅರಿವು ಯಾನ ಮಾಲಿಕೆಯ ಕೃತಿ ಬಿಡುಗಡೆ ಫೆ.23 ರಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ ಎಂದು ಕೇಂದ್ರದ ಅಧ್ಯಕ್ಷ ಡಾ. ತುಕಾರಾಮ್ ಪೂಜಾರಿ ತಿಳಿಸಿದ್ದಾರೆ.

ಡಾ. ಹೇಮಾವತಿ ವಿ. ಹೆಗ್ಗಡೆ ಅವರು ವಿಚಾರ ಸಂಕಿರಣದ ಉದ್ಘಾಟನೆ ಮತ್ತು ಕೃತಿಗಳ ಬಿಡುಗಡೆಗೊಳಿಸುವರು.ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಉದ್ಯಮಿ ಮೂಡಂಬೈಲು ರವಿ ಶೆಟ್ಟಿ ಅತಿಥಿಯಾಗಿ ಭಾಗವಹಿಸಲಿದ್ದು,
ಡಾ.ಪಿ.ಎನ್. ನರಸಿಂಹಮೂರ್ತಿ
ಪ್ರೊ. ಕೆ. ಶಂಕರ ಭಟ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಬಳಿಕ ಗೋಷ್ಠಿಗಳು ನಡೆಯಲಿದ್ದು,
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಚೀನ ಇತಿಹಾಸ’ ನೂರರ ನೆನಪು ಎಂಬ ವಿಷಯದ ಬಗ್ಗೆ ಉಡುಪಿ ಎಂಜಿಎಂ ಕಾಲೇಜಿನ ವಿಶ್ರಾಂತ ಇತಿಹಾಸ ಪ್ರಾಧ್ಯಾಪಕರಾದ ಡಾ. ಮಾಲತಿ ಮೂರ್ತಿ ಹಾಗೂ ಆಳುಪರು ಕರಾವಳಿ ಕರ್ನಾಟಕದ ಒಂದು ಪ್ರಾಚೀನ ಅರಸು ಮನೆತನ ಎಂಬ ವಿಷಯದ ಬಗ್ಗೆ ಇತಿಹಾಸ ಸಂಶೋಧಕರಾದ ಡಾ. ಪಿ.ಎನ್. ನರಸಿಂಹ ಮೂರ್ತಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡನೆ ಗೋಷ್ಠಿಯಲ್ಲಿ ವಿಶ್ರಾಂತ ಇತಿಹಾಸ ಪ್ರಾಧ್ಯಾಪಕರಾದ ಡಾ. ಪುಂಡಿಕ್ಕಾ ಗಣಪಯ್ಯ ಭಟ್ ಅವರ ಅಧ್ಯಕ್ಷತೆಯಲ್ಲಿ “ಸ್ಮಾರಕ ಸಂರಕ್ಷಣೆ: ಸವಾಲುಗಳು ಮತ್ತು ಸಾಧ್ಯತೆಗಳು” ವಿಷಯದ ಬಗ್ಗೆ ತಜ್ಞ ಸಂವಾದ ನಡೆಯಲಿದೆ.ಇತಿಹಾಸ ಸಂಶೋಧಕರಾದ
ಡಾ. ಪಿ.ಎನ್. ನರಸಿಂಹ ಮೂರ್ತಿ ಸರ್ವಾಧ್ಯಕ್ಷತೆ ವಹಿಸುವರು.ವಿದ್ವಾಂಸರುಗಳಾದ ಎಂ. ಕುಲದೀಪ ಚೌಟ , ನಿರೇನ್ ಜೈನ್ ,ಡಾ. ಗಣಪತಿ ಗೌಡ ಅವರು ಭಾಗವಹಿಸಲಿದ್ದಾರೆ ಎಂದು ಪ್ರೊ.ತುಕರಾಮ್ ಪೂಜಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ