ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫೋಟೋ ಸ್ಟುಡಿಯೋ ಮಾಲೀಕನ ಹತ್ಯೆಗೈದು ದುಷ್ಕರ್ಮಿಗಳು ಪರಾರಿ..!

Twitter
Facebook
LinkedIn
WhatsApp
WhatsApp Image 2023 01 15 at 9.55.10 AM

ಚಿತ್ರದುರ್ಗ(ಜ.15):  ಆತ ಜೀವನೋಪಾಯಕ್ಕಾಗಿ ಫೋಟೋ ಸ್ಟುಡಿಯೋ ಇಟ್ಟುಕೊಂಡು ಕೆಲಸ ಮಾಡ್ತಿದ್ದ ವ್ಯಕ್ತಿ. ತಡರಾತ್ರಿ ಮನೆಗೆ ನುಗ್ಗಿರೋ‌ ದುಷ್ಕರ್ಮಿಗಳು ಏಕಾಏಕಿ ಮಚ್ಚಿನಿಂದ ಮನಸೋ ಇಚ್ಚೆ ಹಲ್ಲೆ ನಡೆಸಿ ಕೊಚ್ಚಿ ಕೊಲೆಗೈದು ಪರಾರಿ ಆಗಿರುವ ಘಟನೆ ನಡೆದಿದೆ. ಈ ಕೊಲೆಯಿಂದಾಗಿ ಇಡೀ ಆ ಗ್ರಾಮವೇ ಬೆಚ್ಚಿ ಬಿದ್ದಿದ್ದು ಕೊಲೆಗೆ ನಿಖರವಾದ ಕಾರಣ ಏನು ಎಂಬುದೇ ಪ್ರಶ್ನೆಯಾಗಿದೆ? ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಮಂಚದ ಮೇಲೆ ರಕ್ತದ ಮಡುವಿನಲ್ಲಿ ಹೆಣವಾಗಿ ಬಿದ್ದಿರೋ ಮೃತ ವ್ಯಕ್ತಿ ಬಸವರಾಜನ್ (33). ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾ ಗ್ರಾಮದ ನಿವಾಸಿ. ಹೊಟ್ಟೆ ಪಾಡಿಗಾಗಿ ತನ್ನದೇ ಸ್ವಂತ ಸ್ಟುಡಿಯೋ & ವಿಡಿಯೋ ಶಾಪ್ ಇಟ್ಟುಕೊಂಡು ಕೆಲಸ ಮಾಡ್ತಿದ್ದ. ಸುಮಾರು 10 ವರ್ಷಗಳಿಂದ ತನ್ನ ಸ್ವಂತ ಗ್ರಾಮ ಶಿವಗಂಗಾದಲ್ಲೇ ವಾಸವಾಗಿದ್ದ, ಇತ್ತೀಚೆಗೆ ಕಳೆದ ಎರಡು ವರ್ಷಗಳ ಹಿಂದೆ ಮದುವೆ ಆಗಿದ್ದು ಯಾವುದೇ ಅನ್ಯ ಚಟುವಟಿಕೆಗಳಲ್ಲಿ ಭಾಗಿಯಾಗಿರಲಿಲ್ಲ. ಸ್ಟುಡಿಯೋ ಹಿಂದೆಯೇ ತನ್ನ ‌ಮನೆ ಇದಿದ್ದರಿಂದ ಎಂದಿನಂತೆ ಮನೆಗೆ ತೆರಳಿದ್ದಾನೆ. ಇತ್ತೀಚೆಗಷ್ಟೆ ತನ್ನ ಪತ್ನಿ ಮಗುವಿಗೆ ಜನ್ಮ ನೀಡಿರುವ ಪರಿಣಾಮ ಹೆರಿಗೆಗಾಗಿ ತನ್ನ ತವರು ಮನೆಗೆ ತೆರಳಿದ್ದಾಳೆ. ಕಾಯಕ ಬಿಟ್ಟು ಹೋಗದ ಬಸವರಾಜ್ ಮನೆಯಲ್ಲಿ ಒಬ್ಬನೇ ಇದ್ದದ್ದನ್ನು ಕಂಡಿರೋ ದುಷ್ಕರ್ಮಿಗಳು ತಡರಾತ್ರಿ ಮನೆಗೆ ನುಗ್ಗಿ ಮಚ್ವಿನಿಂದ ಮನಸೋ ಇಚ್ಚೆ ಕೊಲೆಗೈದು ಪರಾರಿ ಆಗಿದ್ದು ಇಡೀ ಶಿವಗಂಗಾ ಗ್ರಾಮವನ್ನೇ ಬೆಚ್ಚಿ ಬೀಳಿಸಿದೆ. ಇನ್ನೂ ಕೊಲೆಗೆ ಏನು ಕಾರಣ ಎಂಬುದು ತಿಳಿಯದೇ ಸಂಬಂಧಿಕರು ಕೂಡ ದಿಗ್ಭ್ರಮೆಗೊಂಡಿದ್ದು, ಕೊಲೆ ಮಾಡಿರೋ ಆರೋಪಿಗಳನ್ನು ಕೂಡಲೇ ಪತ್ತೆ ಹಚ್ಚಿ ಅವರಿಗೆ ಕಠಿಣ ಶಿಕ್ಷೆ ನೀಡಿ ಎಂದು ಮೃತನ ಸಹೋದರ ಸಿದ್ದೇಶ್ ಆಗ್ರಹಿಸಿದ್ದಾರೆ.

ಇನ್ನೂ ಭೀಕರ ಹತ್ಯೆ ಮಾಹಿತಿ‌‌ ತಿಳಿದ ಕೂಡಲೇ ಎಸ್ಪಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಗಂಗಾ ಗ್ರಾಮದ ಬಸವರಾಜ್ ರನ್ನು ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಕೊಚ್ಚಿ ಕೊಲೆಗೈದು ಪರಾರಿ ಆಗಿದ್ದಾರೆ.‌ ಕೊಲೆಗೆ ನಿಖರವಾದ ಕಾರಣ ಏನೆಂದು ತಿಳಿದು ಬಂದಿಲ್ಲ. ಆದ್ರೆ ಕೊಲೆಗೈದಿರೋ ಆಸಾಮಿಗಳು ಕೆಲ ಕುರುಹುಗಳನ್ನು ಬಿಟ್ಟು ಹೋಗಿರುವ ಮಾಹಿತಿ ಸಿಕ್ಕದೆ. ತನಿಖೆ ಹಂತದಲ್ಲಿದೆ ಶೀಘ್ರದಲ್ಲಿಯೇ ಅವರನ್ನು ಬಂಧಿಸಿ ಎಡೆಮುರಿಕಟ್ಟಲಾಗುವುದು ಅಂತ ಚಿತ್ರದುರ್ಗ ಎಸ್ಪಿ ಕೆ.ಪರಶುರಾಮ ತಿಳಿಸಿದ್ದಾರೆ. 

ಒಟ್ನಲ್ಲಿ ತನ್ನ ಪಾಡಿಗೆ ತಾನು ಸ್ಟುಡಿಯೋ ಇಟ್ಕೊಂಡ್ ಕೆಲಸ ಮಾಡ್ತಿದ್ದ ಬಸವರಾಜನ ಭೀಕರ ಕೊಲೆ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಆದಷ್ಟು ಬೇಗ ಖಾಕಿ ಪಡೆ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕೊಲೆಗೆ ಕಾರಣ ಏನು ಎಂಬುದು ಬಹಿರಂಗ ಪಡಿಸಿ ಅವರಿಗೆ ಕಠಿಣ ಶಿಕ್ಷೆ ವಿಧಿಸಲಿ ಎಂಬುದು ನಮ್ಮೆಲ್ಲರ ಆಗ್ರಹ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ