ಬುಧವಾರ, ಏಪ್ರಿಲ್ 24, 2024
EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫೋನಲ್ಲಿ ಮಾತನಾಡುತ್ತಿದ್ದ ವಿವಾಹಿತೆಯ ಮೇಲೆ ಅತ್ಯಾಚಾರ ಯತ್ನ – ಆರೋಪಿಗಳಿಗಾಗಿ ಪೊಲೀಸರ ಶೋಧ

Twitter
Facebook
LinkedIn
WhatsApp
file7kz3ooflvhwsmtlldoy1679439394 8

ಮಡಿಕೇರಿ: ವಿವಾಹಿತೆಯ ಮೇಲೆ ತಡರಾತ್ರಿ ಅತ್ಯಾಚಾರಕ್ಕೆ (Rape) ಯತ್ನಿಸಿರುವ ಘಟನೆ ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ (Somwarpet) ತಾಲೂಕಿನ ಬಿಳಿಗೆರೆ (Biligere)  ಗ್ರಾಮದಲ್ಲಿ ನಡೆದಿದೆ.

19 ವರ್ಷದ ವಿವಾಹಿತೆ ರಾತ್ರಿ 9:30ರ ವೇಳೆಗೆ ಮನೆ ಮುಂಭಾಗದಲ್ಲಿ ಪೋನ್‌ನಲ್ಲಿ (Phone) ಮಾತಾನಾಡುತ್ತಿದ್ದಳು. ಈ ಸಂದರ್ಭ ಆಟೋದಲ್ಲಿ (Auto Rickshaw) ಬಂದಿಳಿದ ಮೂವರು ಯುವಕರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. 

ನಂದಿಮೊಟ್ಟೆಯ ರಾಜ, ಹಟ್ಟಿಹೊಳೆಯ ನೌಶದ್, ಇಗ್ಗೋಡ್ಲಿನ ಫಾರೂಕ್ ಎಂಬವರು ಈ ಪ್ರಕರಣದ ಪ್ರಮುಖ ಆರೋಪಿಗಳು. ಬಲತ್ಕಾರವಾಗಿ ಯುವತಿಯನ್ನು ಕಾಫಿತೋಟದೊಳಗೆ ಎಳೆದೊಯ್ಯುತ್ತಿದ್ದ ಸಂದರ್ಭ ಯುವತಿ ಜೋರಾಗಿ ಕಿರುಚಲಾರಂಭಿಸಿದಳು. ಇದನ್ನು ಗಮನಿಸಿದ ಯುವತಿಯ ಸಂಬಂಧಿಕರು ಭಯಭೀತರಾಗಿ ಕೂಡಲೇ ಸ್ಥಳೀಯರಿಗೆ ಹಾಗೂ ಹಿಂದೂ ಜಾಗರಣ ವೇದಿಕೆಯ (Hindu Jagarana Vedike) ಪ್ರಮುಖರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದ ಕ್ಷಣಾರ್ಧದಲ್ಲಿ ಘಟನಾ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಓರ್ವ ಆರೋಪಿಯಾದ ರಾಜ ಹಾಗೂ ದುಷ್ಕೃತ್ಯಕ್ಕೆ ಬಳಸಿದ್ದ ಎರಡು ಆಟೋಗಳನ್ನು ವಶಕ್ಕೆ ಪಡೆದಿದ್ದಾರೆ. ಈ ದುಷ್ಕೃತ್ಯದಲ್ಲಿ ತೊಡಗಿದ್ದ ಇನ್ನಿಬ್ಬರು ಆರೋಪಿಗಳಾದ ನೌಶದ್ ಹಾಗೂ ಫಾರೂಕ್ ಪರಾರಿಯಾಗಿದ್ದಾರೆ.

file7kz3ooflvhwsmtlldoy1679439394 9

ಫಾರೂಕ್ ಮಾದಾಪುರದಲ್ಲಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದ. ದುಷ್ಕೃತ್ಯಕ್ಕೆ ಬಳಸಿರುವ 2 ಆಟೋರಿಕ್ಷಾಗಳು ನೌಶದ್ ಹಾಗೂ ರಶೀದ್ ಎಂಬವರಿಗೆ ಸೇರಿದ್ದಾಗಿದೆ. ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಓರ್ವ ಆರೋಪಿ ಹಾಗೂ ಎರಡು ಆಟೋರಿಕ್ಷಾಗಳನ್ನು ಸೋಮವಾರಪೇಟೆ ಪೋಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಗಳು ಹೊರದೇಶಗಳಿಗೆ ಪಲಾಯನವಾಗುವ ಸಾಧ್ಯತೆಯಿರುವುದರಿಂದ ದುಷ್ಕೃತ್ಯ ನಡೆಸಿದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ತಪ್ಪಿದಲ್ಲಿ ಅನ್ಯಾಯಕ್ಕೊಳಗಾದ ಯುವತಿ ಹಾಗೂ ಅವರ ಕುಟುಂಬ ವರ್ಗಕ್ಕೆ ನ್ಯಾಯ ದೊರಕಿಸಲು ಸಂಘಟನೆಯ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. 

ಘಟನೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಹುಡುಕಾಟ ಮುಂದುವರೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ