ಕೀವ್: ಪಬ್ಲಿಕ್ ಬಂಕರ್ಗಳಲ್ಲಿ ಇರುವ ಭಾರತೀಯ ವಿದ್ಯಾರ್ಥಿಗಳನ್ನು ಒದ್ದು ವಾಪಸ್ ಅಪಾರ್ಟ್ಮೆಂಟ್ಗೆ ಕಳುಹಿಸುವ ಮೂಲಕ ಹಲ್ಲೆ ಎಸಗಲಾಗುತ್ತಿದೆ ಎಂದು ಉಕ್ರೇನ್ನಲ್ಲಿರುವ ಕರ್ನಾಟಕ ಮೂಲದ ವಿದ್ಯಾರ್ಥಿ ಬೇಸರ ವ್ಯಕ್ತಪಡಿಸಿದ್ದಾರೆ.ಇದರಿಂದಾಗಿ ಸಿಟ್ಟಾಗಿರುವ ಸ್ಥಳೀಯ ಉಕ್ರೇನ್ ಜನತೆ ಒದ್ದು ಅಪಾರ್ಟ್ಮೆಂಟ್ಗೆ ತೆರಳುವಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ನೋವನ್ನು ತೋಡಿಕೊಂಡಿದ್ದಾರೆ. ಇಲ್ಲಿರುವ ಹಾಸ್ಟೆಲ್ ಬಂಕರ್ಗಳಲ್ಲಿ ವಿದ್ಯಾರ್ಥಿಗಳು ಮಾತ್ರ ಸುರಕ್ಷಿತವಾಗಿದ್ದಾರೆ. ಉಳಿದವರೆಲ್ಲರೂ ಅಪಾರ್ಟ್ಮೆಂಟ್ನಲ್ಲಿದ್ದಾರೆ. ಮತ್ತೊಂದು ವಿಚಾರವೆಂದರೆ ಇಲ್ಲಿ ತಿನ್ನಲು ಊಟ ಸಿಗುತ್ತಿಲ್ಲ. ಕುಡಿಯಲು ನೀರು ಸಹ ಸಿಗದೇ ಟ್ಯಾಪ್ನಿಂದ ಬರುವ ನೀರನ್ನು ಬಿಸಿ ಮಾಡಿಕೊಂಡು ಕುಡಿಯುತ್ತಿದ್ದೇವೆ. ಹೊರಗಡೆ ಹೋಗಲು ಕೂಡಾ ಆಗುತ್ತಿಲ್ಲ. ಏಕೆಂದರೆ ಎಲ್ಲಿ ಸ್ಥಳೀಯ ಜನರು ನಮ್ಮ ಮೇಲೆ ಹಲ್ಲೆ ಮಾಡುತ್ತಾರೆ ಅನ್ನುವ ಭಯ ಕಾಡುತ್ತಿದೆ ಎಂದು ತಮ್ಮ ಅಳಲು ತೊಡಿಕೊಂಡರು. ಯುದ್ಧ ಪ್ರಾರಂಭವಾಗುವ ಮುನ್ನ ಭಾರತಕ್ಕೆ ಬರಬೇಕೆಂದರೆ ಆವಾಗಾಗಲೇ ಉಕ್ರೇನ್ನ ಎಲ್ಲ ನಾಗರಿಕ ವಿಮಾನಗಳು ಬುಕ್ ಆಗಿದ್ದವು. ಕೀವ್ನ ಬಾರ್ಡರ್ನಲ್ಲಿ ಸೇರಿರುವ ವಿದ್ಯಾರ್ಥಿಗಳನ್ನು ಹೊರಗಡೆ ಹೋಗಲಿಕ್ಕೆ ಬಿಡುತ್ತಿಲ್ಲ. ವಾಪಸ್ ಹೋಗಿ ಅಂತ ಹಲ್ಲೆ ಮಾಡುತ್ತಿದ್ದಾರೆ. ಈಗಾಗಲೇ ಬಹುತೇಕ ವಿದ್ಯಾರ್ಥಿಗಳು ಭಾರತಕ್ಕೆ ಹೋಗಿದ್ದಾರೆ. ಕೇವಲ ಪಾಕಿಸ್ತಾನ ಮತ್ತು ನೈಜಿರೀಯಾದ ಕೆಲ ವಿದ್ಯಾರ್ಥಿಗಳು ಮಾತ್ರ ಇಲ್ಲಿದ್ದಾರೆ.
ಕೀವ್ ಬಾರ್ಡರ್ ಬಿಟ್ಟು ಬೇರೆ ಬಾರ್ಡರ್ನಿಂದ ಈಗಾಗಲೇ ಕೆಲವೊಂದಿಷ್ಟು ವಿದ್ಯಾರ್ಥಿಗಳು ಪಾರಾಗಿದ್ದಾರೆ. ನಮಗೆ ಇಲ್ಲಿ ಪ್ರತೀ ಕ್ಷಣಕ್ಕೂ ಸತ್ತು ಬದುಕುತ್ತಿದ್ದೇವೆ. ಸ್ಥಳೀಯ ಜನರು ಯಾವಾಗ ನಮ್ಮ ಮೇಲೆ ದಾಳಿ ಮಾಡುತ್ತಾರೆ ಅನ್ನುವ ಭಯ ಕಾಡುತ್ತಿದೆ ಎಂದು ಭಯ ವ್ಯಕ್ತಪಡಿಸಿದರು. ?
ಉಕ್ರೇನ್ ಮೇಲೆ ರಷ್ಯಾ ದಾಳಿಯನ್ನು ಖಂಡಿಸಿ ಶನಿವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆ ನಡೆದಿತ್ತು. ಅಮೆರಿಕ ಮತ್ತು ಆಲ್ಬೇನಿಯಾ ಸಂಯುಕ್ತವಾಗಿ ಮಂಡಿಸಿದ ನಿರ್ಣಯದ ಮೇಲೆ ಮತದಾನ ನಡೆದಿತ್ತು.
ಭಾರತ, ಚೀನಾ, ಯುಎಇ ದೇಶಗಳು ಮತದಾನದಿಂದ ದೂರ ಉಳಿದಿದ್ದರೆ ಪೆÇೀಲೆಂಡ್, ಇಟಲಿ, ನ್ಯೂಜಿಲೆಂಡ್ ಸೇರಿ 11 ದೇಶಗಳು ನಿರ್ಣಯದ ಪರವಾಗಿ ಮತ ಹಾಕಿವೆ. ರಷ್ಯಾ ದೇಶ ಊಹಿಸಿದಂತೆಯೇ ವಿಟೋ ಅಧಿಕಾರ ಚಲಾಯಿಸಿ, ನಿರ್ಣಯ ಪಾಸ್ ಆಗದಂತೆ ತಡೆದಿದೆ.
ಈ ಬಿಕ್ಕಟ್ಟಿನ ಬಗ್ಗೆ ಮಾತನಾಡಿದ ಭಾರತದ ಶಾಶ್ವತ ರಾಯಭಾರಿ ತಿರುಮೂರ್ತಿ, ವಿವಾದ ಇತ್ಯರ್ಥಕ್ಕೆ ಚರ್ಚೆಯೊಂದೇ ಸಮಾಧಾನ. ಆದರೆ ಈ ಕ್ಷಣದಲ್ಲಿ ಅದು ಸಾಧ್ಯವಾಗಿಲ್ಲ. ಎರಡು ದೇಶಗಳು ರಾಜತಾಂತ್ರಿಕ ಮಾರ್ಗವನ್ನು ಕೈಬಿಟ್ಟಿದ್ದಕ್ಕೆ ವಿಷಾದವಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist