ಬಂಟ್ವಾಳ: ಬಂಟ್ವಾಳ ತಾಲೂಕಿನ ಮಣಿಹಳ್ಳ , ಸರಪಾಡಿ, ಅಜಿಲಮೊಗರು, ರಸ್ತೆಯ ಇಕ್ಕೆಲಗಳಲ್ಲಿ ವಿವಿಧ ಧಾರ್ಮಿ ಸಂಸ್ಥೆ ಹಾಗೂ ವಿವಿಧ ಸಂಘಟನೆಗಳಿಗೆ ಸಂಬಂಧಿಸಿದ ಹಲವಾರು ಕಟ್ಟೆಗಳು ಹಾಗೂ ಕಾಣಿಕೆ ಡಬ್ಬಿಗಳು ಇವೆ, ಕಳೆದ ಕೆಲವಾರು ದಿನಗಳಿಂದ ವಿವಿಧ ಸಂಘಟನೆಯವರು ಏಸುವಿನ ವಿಗ್ರಹ ತೆರವುಗೊಳಿಸಲು ಮನವಿ ಸಲ್ಲಿಸಿ ದ್ದು , ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಪ್ರಮುಖ ವಿವಾದಿತ ಸ್ಥಳದ ಮುಂಭಾಗದಲ್ಲಿರುವ ಸರಕಾರಿ ಸ್ಥಳದಲ್ಲಿ ಸಂಘಟನೆ ಗೆ ಸೇರಿದ ಕಟ್ಟೆಯಿದೆ ಎಂದು ಬಂಟ್ವಾಳ ಕೆಥೋಲಿಕ್ ಸಭಾ ಬಂಟ್ವಾಳ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದೆ.
ಆದರೆ ಕೇವಲ ಒಂದು ಧರ್ಮಕ್ಕೆ ವಿರೋಧ ವಾಗಿ ಕ್ರಮಕೈಗೊಳ್ಳದೆ, ಎಲ್ಲರಿಗೂ ಸಮಾನ ನ್ಯಾಯ ಕೊಟ್ಟು ಶಾಂತಿ ವ್ಯವಸ್ಥೆ ಕಾಪಾಡಬೇಕೆಂದು ಕ್ಯಾಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ಇದರ ಅಲ್ಲಿಪಾದೆ ಘಟಕದ ಅಧ್ಯಕ್ಷ ಸ್ಟ್ಯಾನಿ ಮಿನೇಜಸ್ ಹಾಗೂ ಸದಸ್ಯ ರು ಬಂಟ್ವಾಳ ತಹಶಿಲ್ದಾರ್ ಸ್ಮಿತಾರಾಮು ಅವರಿಗೆ ಮನವಿ ಮಾಡಿದ್ದಾರೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?