ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂಟ್ವಾಳ ತಾಲೂಕಿನ ವಾಮದಪದವಿನ ಸಮೀಪ ಪ್ರಾಚೀನ ಶಿವಲಿಂಗ ಪತ್ತೆ.

Twitter
Facebook
LinkedIn
WhatsApp

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಾಮದಪದವಿನ ಅಜಿಲ ಸೀಮೆಯ 7 ಮಾಗಣೆಯ ಅಜ್ಜಿಬೆಟ್ಟು ಗ್ರಾಮದ ಕಾಪು ಎಂಬಲ್ಲಿ ವನದ ಮಧ್ಯೆ ಹಚ್ಚ ಹಸಿರಿನಿಂದ ಕಂಗೊಳಿಸುವ ರಮಣೀಯ ಸುಂದರ ಪರಿಸರದಲ್ಲಿ ಕಂಗೊಳಿಸುತ್ತಿರುವ ಸುಮಾರು1418 ವರ್ಷಗಳ ಪುರಾತನ ಇತಿಹಾಸದಲ್ಲಿ ಊರಿನ ಸಂರಕ್ಷಣೆಯ ಶಕ್ತಿಯಾಗಿ ಋಷಿಮುನಿಗಳ ತಪಸ್ಸಿಗೆ ಮೆಚ್ಚಿ ಒಲಿದು ನೆಲೆಯಾಗಿ ನಿಂತ ಮಹತೋಭಾರ ಶ್ರೀ ಉಮಾಮಹೇಶ್ವರ ದೇವರ ಸಾನಿಧ್ಯವು ಪೂರ್ವಕಾಲದಲ್ಲಿ ಹುಲ್ಲಿನಿಂದ ನಿರ್ಮಾಣವಾಗಿತ್ತು. ಮಹತೋಭಾರ ಶ್ರೀ ಉಮಾಮಹೇಶ್ವರ ದೇವರ ಸಾನಿಧ್ಯಕ್ಕೆ ಹಾಗೂ ಅಜ್ಜಿಬೆಟ್ಟು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆಅಭಿನಾಭಾವ ಸಂಬಂಧವಿದ್ದು ಆ ಕಾಲದಿಂದಲೂ ಈ ಮಹತೋಭಾರ ಶ್ರೀ ಉಮಾಮಹೇಶ್ವರ ದೇವಸ್ಥಾನವು ಜೀರ್ಣೋದ್ದಾರ ಆಗದೆ ಹಾಗೆಯೇ ಉಳಿದಿದೆ ನಂತರ ರಾಜವಂಶಜರ ಕಾಲದಲ್ಲಿ ಕಲ್ಲುಬಂಡೆಗಳಿಂದ ಜೀರ್ಣೋದ್ಧಾರಗೊಂಡು ಸುಮಾರು 744 ವರ್ಷಗಳ ಕಾಲ ಪೂಜೆ ಉತ್ಸವಾದಿಗಳು ವೈಭವದಿಂದ ನಡೆಯುತ್ತಿತ್ತು ಸುಮಾರು 578 ವರ್ಷಗಳಿಂದ ಇತ್ತೀಚಿನವರೆಗೆ ಪ್ರಕೃತಿಯ ವಿಕೋಪದಿಂದ ಅನ್ಯ ಮತಸ್ಥರ ದಾಳಿಯಿಂದ ಪೂಜೆ ಉತ್ಸವಗಳ ಆಗದೆ ಶ್ರೀ ಕ್ಷೇತ್ರವು ಸಂಪೂರ್ಣ ನಾಶವಾಗಿದೆ. ಮಹತೋಭಾರ ಶ್ರೀ ಉಮಾಮಹೇಶ್ವರ ದೇವರ ಸಾನಿಧ್ಯಕ್ಕೆ ಹಾಗೂ ಅಜ್ಜಿಬೆಟ್ಟು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆಅಭಿನಾಭಾವ ಸಂಬಂಧ ವಿದ್ದ ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು ಗ್ರಾಮಸ್ಥರಿಂದ ಹಾಗೂ ಮಾಗಣೆಯ ಭಕ್ತಾದಿಗಳಿಂದ ಜೀರ್ಣೋದ್ಧಾರಗೊಂಡು ಪುನರ್ ಪ್ರತಿಷ್ಠೆಯಾಗಿದೆ ಎಂದು ಅಷ್ಟಮಂಗಲ ಪ್ರಶ್ನೆಯಲ್ಲಿ ತಿಳಿದು ಬಂದಿರುತ್ತದೆ .

ಅಜಿಲ ಸೀಮೆಗೆ ಸಂಬಂಧಪಟ್ಟ 4 ಶಿವ ಕ್ಷೇತ್ರಗಳ ಪೈಕಿ ಮಹತೋಭಾರ ಶ್ರೀ ಉಮಾಮಹೇಶ್ವರ ದೇವರ ಚೈತನ್ಯವಾದ ಸಾನ್ನಿಧ್ಯವು ವಾಮದಪದವಿನ ಅಜ್ಜಿಬೆಟ್ಟು ಗ್ರಾಮದ ಕಾಪು ಎಂಬ ಪ್ರದೇಶದ ವನದ ಮಧ್ಯೆ ಇರುವ ಸಾನಿಧ್ಯವು ಒಂದಾಗಿದೆ ಈ ಸಾನಿಧ್ಯವು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು , ಚೆನ್ನೈತೋಡಿ, ಪಿಲಿಮೋಗರು , ಕೊಡಂಬೆಟ್ಟು, ಮೂಡುಪಡುಕೊಡಿ, ಇರ್ವತ್ತೂರು, ಪಿಲಾತಬೆಟ್ಟು ಗ್ರಾಮಗಳ ಭಕ್ತರ ಆರಾಧನ ಕ್ಷೇತ್ರವಾಗಿದೆ. ಇತಿಹಾಸದಲ್ಲಿ ವೈಭವದಿಂದ ಮೆರೆದ ಶ್ರೀ ಕ್ಷೇತ್ರವು ನಾಶವಾಗಿರುವುದರಿಂದ ಮಾಗಣೆಗೆ ಸಂಬಂಧ ಪಟ್ಟ ಇತರ ಕ್ಷೇತ್ರಗಳು ಹಾಗೂ ದೈವಸ್ಥಾನಗಳಿಗೂ ಮಹತೋಭಾರ ಶ್ರೀ ಉಮಾಮಹೇಶ್ವರ ದೇವರ ಕೋಪವಿರುವುದರಿಂದ ಊರಜನತೆಗೆ ಅನಾರೋಗ್ಯ, ಅಲ್ಪಾಯುಶ್ಯ, ಮಾನಸಿಕ ಅಶಾಂತಿ ಸಹಿತ ಪ್ರಕೃತಿ ವಿಕೋಪಾದಿ ತೊಂದರೆಗಳು ಕಂಡು ಬರುತ್ತಿದೆ. ಅದ್ದರಿಂದ ಏಳು ಗ್ರಾಮದ ಭಕ್ತರು ಒಮ್ಮನಸ್ಸಿನಿಂದ ಜತೆಗೂಡಿ ಕ್ಷೇತ್ರದ ಜೀರ್ಣೋದ್ಧಾರ ಮಾಡಿ, ಉತ್ಸವಾದಿ ಪುಣ್ಯಕಾರ್ಯಗಳು ವಿಧಿವತ್ತಾಗಿ ಸಂಪನ್ನಗೊಂಡಲ್ಲಿ ನಾಡಿಗೆ ಸುಬೀಕ್ಷೆಯಾಗುವುದರೊಂದಿಗೆ ಮನುಕುಲದ ಇಷ್ಟಾರ್ಥಗಳು ಈಡೇರುತ್ತದೆ ಎಂದು ಅಷ್ಟಮಂಗಳ ಪ್ರಶ್ನೆಯಲ್ಲಿ ತಿಳಿದು ಬಂದಿದೆ. ಶ್ರೀ ಕ್ಷೇತ್ರವು ಗಜಪೃಷ್ಟಾಕಾರದಲ್ಲಿ ನಿರ್ಮಾಣಗೊಳ್ಳಬೇಕಾಗಿದ್ದು ಪ್ರಧಾನ ಶಕ್ತಿ ಮಹತೋಭಾರ ಶ್ರೀ ಉಮಾಮಹೇಶ್ವರ ಸಹಿತ ಶ್ರೀ ಗಣಪತಿ ದೇವರ ಗುಡಿ, ಶ್ರೀ ಸುಬ್ರಹ್ಮಣ್ಯ ದೇವರ ಗುಡಿ, ನಮಾಸ್ಕಾರ ಮಂಟಪ, ಗೋಪುರ, ಸುತ್ತು ಪೌಳಿ, ಅಯ್ಯಂಗಾಯಿ ಕಲ್ಲು, ನಂದಿ‌ ಪ್ರತಿಷ್ಠೆ, ಕೊಡಿಮರ( ಧ್ವಜಸ್ತಂಭ) ಪ್ರತಿಷ್ಠೆ, ಕ್ಷೇತ್ರಪಾಲ ಕಲ್ಲು, ಸಪ್ತಮಾತೃಗಳು, ಗುರುಪೀಠ, ತೀರ್ಥಭಾವಿ ಮೊದಲಾದ ಅಂಗಗಳಿರುವ ಕ್ಷೇತ್ರವನ್ನು ನಿರ್ಮಾಣ ಮಾಡಬೇಕೆಂದು ಅಷ್ಟಮಂಗಲ ಪ್ರಶ್ನೆಯಲ್ಲಿ ತಿಳಿದು ಬಂದಿದೆ.
ಕ್ಷೇತ್ರದ ಈಶಾನ್ಯ ಭಾಗದಲ್ಲಿ ಜಲಕದ ಕೆರೆಯಿದೆ, ಇದನ್ನು ಅಭಿವೃದ್ಧಿ ಪಡಿಸಬೇಕು. ನೈರುತ್ಯ ಭಾಗದಲ್ಲಿ ವನ ಶಾಶ್ತಾವಿ ಮತ್ತು ವನದುರ್ಗಾ ಸಾನಿಧ್ಯವಿದೆ. ಈ ಶಕ್ತಿಗಳಿಗೆ ಕಟ್ಟೆ ನಿರ್ಮಿಸಿ ಶಿಲಾ ಪ್ರತಿಷ್ಟೆ ಮಾಡಬೇಕೆಂದು ತಿಳಿದು ಬಂದಿದೆ.

ಬಂಟ್ವಾಳ ತಾಲೂಕಿನ ವಾಮದಪದವಿನ ಸಮೀಪ ಪ್ರಾಚೀನ ಶಿವಲಿಂಗ ಪತ್ತೆ.

ಕ್ಷೇತ್ರದ ಸನಿಹದಲ್ಲೇ ಇರುವ ದೇವರ ಗುಂಡಿಯಲ್ಲಿ ಶಿವಲಿಂಗವಿದ್ದು ವೈಧಿಕ ವಿಧಿವಿಧಾನದೊಂದಿಗೆ ಶಿವಲಿಂಗ ಸಹಿತ ಇತರ ಸಾನಿಧ್ಯ ಶಕ್ತಿಗಳನ್ನು ಬಾಲಾಲಯ ಪ್ರತಿಷ್ಢಾಪಿಸಿ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಡಿ ಇಡಬೇಕೆಂದು ಅಷ್ಟಮಂಗಲದಲ್ಲಿ ಕಂಡು ಬಂದಿದೆ. ಅಜೀರ್ಣ ಅವಸ್ಥೆಯಲ್ಲಿ ಇದ್ದ ಅಜ್ಜಿಬೆಟ್ಟು ಗ್ರಾಮದ ಕಾಪುವಿನ ಮಹತೋಭಾರ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ನಡೆದ ಅಷ್ಟಮಂಗಲ ಪ್ರಶ್ನೆಯ ನಂತರ ಅನುಜ್ಞಾ ಕಳಸ ಮಾಡಿ 21 ದಿವಸಗಳ ನಂತರ ಶ್ರೀದೇವರ ಜೀರ್ಣೋದ್ಧಾರಕ್ಕೆ ಲಿಂಗ ಶೋಧನೆ ಮಾಡಿ ಶ್ರೀ ಕ್ಷೇತ್ರದ ಜೀರ್ಣೋದ್ದಾರ ಆರಂಭಿಸಲು ಪುರಾತನ ಕಾಲದ ಮಹತೋಭಾರ ಶ್ರೀ ಉಮಾಮಹೇಶ್ವರ ದೇವರ ಮೂಲ ಸ್ಥಳದಲ್ಲಿ ಪ್ರಾರ್ಥನೆಯೊಂದಿಗೆ ಪುನರ್ ವರ್ತಿಸಿದಾಗ ಪುರಾತನ ಮೂಲ ಕ್ಷೇತ್ರದಲ್ಲಿ ಮೂಲ ಮಹಾಶಿವಲಿಂಗ ಹಾಗೂ ದೇವರಗುಂಡಿಯಲ್ಲಿ ಪುರಾತನ ಲಿಂಗವು ಗೋಚರಿಸಿದೆ. ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ದಿನಾಂಕ 10/01/2022 ಸೋಮವಾರದಂದು ಊರಿನ ಗ್ರಾಮಸ್ಥರು, ಮಾಗಣೆಯ ಭಕ್ತಾದಿಗಳು ಒಮ್ಮತದಿಂದ ಸೇರಿ ವಾಸ್ತು ಶಾಸ್ತ್ರಜ್ಞ ರಾದ ಸುಬ್ರಮಣ್ಯ ಅವಧಾನಿ, ತಂತ್ರಿಗಳಾದ ಶ್ರೀಪಾದ ಪಂಗಣ್ಣಾಯ ಇವರ ಉಪಸ್ಥಿತಿಯಲ್ಲಿ ಶ್ರೀ ಕ್ಷೇತ್ರದಲ್ಲಿ ದೇವರ ಜೀರ್ಣೋದ್ಧಾರಕ್ಕೆ ಲಿಂಗ ಸಂಶೋಧನೆ ಮಾಡಿದಾಗ ಶ್ರೀ ಕ್ಷೇತ್ರದ ಮೂಲ ಸ್ಥಳದಲ್ಲಿ ಮೂಲ ಮಹಾ ಶಿವಲಿಂಗವು ಹಾಗೂ ದೇವರ ಗುಂಡಿಯಲ್ಲಿ ಪುರಾತನ ಶಿವಲಿಂಗವು ಲಭಿಸಿತ್ತು. ತದನಂತರ ಗ್ರಾಮಸ್ಥರು ಭಕ್ತಾದಿಗಳು ಸೇರಿ ಇದೇ ಬರುವ ಜನವರಿ 27 ತಾರೀಖಿನಂದು ಬಾಲಯಾದ ಪ್ರತಿಷ್ಠೆ ನೆರವೇರಿಸುವುದು ಎಂದು ಸಂಕಲ್ಪಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು