ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ : ನಿಯಂತ್ರಣ ತಪ್ಪಿದ ಕಾರು ; ಪುತ್ತೂರಿನ ವಿದ್ಯಾರ್ಥಿನಿ ಮೃತ್ಯು!

Twitter
Facebook
LinkedIn
WhatsApp
Untitled 9

ಬಂಟ್ವಾಳ:ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಧರೆಗೆ ಗುದ್ದಿ ಪಲ್ಟಿಯಾಗಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು  ರಾಷ್ಟ್ರೀಯ ಹೆದ್ದಾರಿ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.

ಪುತ್ತೂರು ಕೂರ್ನಡ್ಕ ನಿವಾಸಿ ಇಬ್ರಾಹಿಂ ರವರ ಪುತ್ರಿ ಖತೀಜಹನ (20 ವ.) ಮೃತಪಟ್ಟ ವಿದ್ಯಾರ್ಥಿನಿ. ಕಾರಿನಲ್ಲಿದ್ದ ಖತೀಜಹನರ ತಾಯಿ ಸಮೀಮ ಮತ್ತು ಚಾಲಕ ಶಾನ್ ಯಾವುದೇ ಅಪಾಯವಿಲ್ಲದೆ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಖತೀಜಹನ ಅವರು ತಾಯಿ ಸಮೀಮಾ ಅವರ ಜೊತೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಅಲರ್ಜಿ ರೋಗಕ್ಕೆ ಚಿಕಿತ್ಸೆ ಪಡೆಯುವ ಹಿನ್ನೆಲೆಯಲ್ಲಿ ವೈದ್ಯರನ್ನು ಬೇಟಿ ಮಾಡಲು ಕಾರಿನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.

ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭದಲ್ಲಿ ರಾಮಲ್ ಕಟ್ಟೆ ತಲುಪಿದಾಗ ಮಳೆ ಜೋರಾಗಿ ಸುರಿಯುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ದ ಕಾರು ರಸ್ತೆ ಬದಿಯ ಗುಡ್ಡಕ್ಕೆ ಗುದ್ದಿ ರಸ್ತೆಗೆ ಪಲ್ಟಿಯಾಗಿದೆ. ಅಪಘಾತದ ತೀವ್ರತೆ ಗೆ ಕಾರಿನ ಬಾಗಿಲು ಕಿತ್ತುಹೋಗಿ ಕಾರಿನ ಒಳಗಿದ್ದ ಖತೀಜಹನ ಹೊರೆಕ್ಕೆಸೆಯಲ್ಟಿಟ್ಟಿದ್ದಾರೆ. ಗಂಭೀರ ಗಾಯಗೊಂಡ ಖತೀಜಹನ ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಮತ್ತು ಸಿಬ್ಬಂದಿ ಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ