ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ: ಮನೆಯ ಬೀಗ ಮುರಿದು 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

Twitter
Facebook
LinkedIn
WhatsApp
theft istock 1180920 1673661121

ಬಂಟ್ವಾಳ : ಮನೆಯ ಬೀಗ ತೆಗೆದು ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ನಡೆದಿದೆ.

ಒಟ್ಟು 3,11,550 ರೂ. ಮೌಲ್ಯದ ಚಿನ್ನಾಭರಣ ಕಳವುವಾಗಿದ್ದು, ಸಣ್ಣ ಪ್ಲಾಸಿಕ್‌ ಬಾಕ್ಸ್‌ನಲ್ಲಿ ಇಟ್ಟಿದ್ದ ಕಿವಿಯ ಬೆಂಡೋಳೆ ಅಂದಾಜು 10 ಗ್ರಾಂ, 3 ಉಂಗುರಗಳು ಅಂದಾಜು ತೂಕ 8 ಗ್ರಾಂ, ಹವಳದ ಸರ ಅಂದಾಜು ತೂಕ 20 ಗ್ರಾಂ ಹಾಗೂ ಅದರ ಪಕ್ಕದಲ್ಲಿ ಇಟ್ಟಿದ್ದ ಕರಿಮಣಿ ಸರ, ಅಂದಾಜು ತೂಕ 35 ಗ್ರಾಂ, 2 ಕೈಬಳೆಗಳು ಅಂದಾಜು ತೂಕ 20ಗ್ರಾಂ, ಇವುಗಳು ಕಳವಾಗಿದೆ.

ಇವುಗಳ ಒಟ್ಟು ತೂಕ 93 ಗ್ರಾಂ ಆಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಹಗಲು ಹೊತ್ತಿನಲ್ಲಿ ಮನೆಯಿಂದ ಮಾಡಿದ್ದಾರೆ ಎಂದು ಗ್ರಾಮಾಂತರ ಪೋಲೀಸ್ ಠಾಣೆಗೆ ಮನೆಯ ಮಾಲಕಿ ರೋಹಿಣಿ ದೂರು ನೀಡಿದ್ದಾರೆ.

ರೋಹಿಣಿ ಹಾಗೂ ಅವರ ಗಂಡ ಇಬ್ಬರು ಮನೆಗೆ ಬೀಗ ಹಾಕಿ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಅದೇ ರೀತಿ ಮಾ.7.ರಂದು ಮನೆಯಿಂದ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದರು. ಕೆಲಸಕ್ಕೆ ಹೋಗುವ ವೇಳೆ ಮನೆಗೆ ಬೀಗ ಹಾಕಿ ಬೀಗದ ಕೀಯನ್ನು ಬಚ್ಚಲು ಕೋಣೆಯಲ್ಲಿ ಇರಿಸಿ ಹೋಗುತ್ತಿದ್ದರು. ನಿನ್ನೆಯೂ ಅದೇ ರೀತಿ ಬೀಗದ ಕೀಯನ್ನು ಬಚ್ಚಲು ಮನೆಯ ಕಿಟಕಿ ಯಲ್ಲಿಟ್ಟು ತೆರಳಿದ್ದರು.

ಸಂಜೆ ಗಂಡ ಹೆಂಡತಿ ಕೆಲಸ ಮುಗಿಸಿ ಮನೆಗೆ ಬಂದು ನೋಡುವಾಗ ಮನೆಗೆ ಬೀಗ ಹಾಕಿತ್ತು.ಬೀಗ ತೆಗೆದು ಮಬೆಯಯ ಒಳಗೆ ಹೋದಾಗ ಕೋಣೆಯಲ್ಲಿ ದ್ದ ಗೊದ್ರೆಜ್ ನಿಂದ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಕೆಳಗೆ ಬಿದ್ದಿತ್ತು.

ಗೊದ್ರೆಜ್ ಓಪನ್ ಮಾಡಿ ನೋಡಿದಾಗ ಅದರೊಳಗಿದ್ದ ಚಿನ್ನಾಭರಣಗಳು ಕಳವುವಾಗಿರುವುದು ಗಮನಕ್ಕೆ ಬಂದಿದೆ.
ಸ್ಥಳಕ್ಕೆ ಗ್ರಾಮಾಂತರ ಎಸ್.ಐ.ಉದಯ ರವಿ ಬೇಟಿ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ