ಚಾಮರಾಜನಗರ: ಲಾರಿ (Lorry) ಡಿಕ್ಕಿ ಹೊಡೆದು ಹೆಣ್ಣಾನೆ (Elephant) ಸಾವನ್ನಪ್ಪಿದ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಬಂಡೀಪುರದಲ್ಲಿ (Bandipur) ನಡೆದಿದೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಮದ್ದೂರು ವಲಯದ ಬಳಿ ಈ ಘಟನೆ ನಡೆದಿದೆ. ಗುಂಡ್ಲುಪೇಟೆಯಿಂದ ಕೇರಳಕ್ಕೆ ತೆರಳುವ ರಸ್ತೆಯಲ್ಲಿ ನಡೆದಿರುವ ರಾತ್ರಿ ಸಂಚಾರ ನಿಷೇಧವಿದೆ. ಆದರೂ ಲಾರಿಯೊಂದು ರಭಸವಾಗಿ ಚಲಿಸುತ್ತಿತ್ತು. ಈ ವೇಳೆ ರಸ್ತೆಯ ಮಧ್ಯದಲ್ಲಿ ಇದ್ದ ಆನೆಗೆ ಲಾರಿ ಡಿಕ್ಕಿ ಹೊಡೆದಿದೆ.
ಲಾರಿ ಡಿಕ್ಕಿಯಿಂದ ರಸ್ತೆಯಲ್ಲೇ ಆನೆ ಮೃತಪಟ್ಟಿದೆ. ಘಟನೆಗೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಲಾರಿ ಹಾಗೂ ಚಾಲಕನನ್ನು ಅರಣ್ಯ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಲಾರಿಯು ಕೇರಳದಿಂದ ಗುಂಡ್ಲುಪೇಟೆ ಆಗಮಿಸುತ್ತಿತ್ತು ಎಂದು ತಿಳಿದುಬಂದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?