ಸರ್ಕಾರಿ ಗೂಡ್ಸ್ ಬಸ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರನ ಕಾಲಿಗೆ ಗಂಭೀರ ಗಾಯವಾದ ಘಟನೆ ಮೇ.26ರಂದು ಮಧ್ಯಾಹ್ನ ಕನಕಮಜಲಿನ ಆನೆಗುಂಡಿ ಎಂಬಲ್ಲಿ ಸಂಭವಿಸಿದೆ.
ಮಡಿಕೇರಿ ಡಿಪೋಗೆ ಸೇರಿದ ಕೆ.ಎಸ್ ಆರ್.ಟಿ.ಸಿ. ಗೂಡ್ಸ್ ಬಸ್ ಪುತ್ತೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಪುತ್ತೂರಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಪಂಜದ ಯುವನೋರ್ವ ಚಲಾಯಿಸುತ್ತಿದ್ದ ಬೈಕ್ ಆನೆಗುಂಡಿ ತಿರುವಿನಲ್ಲಿ ಬಸ್ ನ ಮುಂಭಾಗಕ್ಕೆ ಢಿಕ್ಕಿ ಹೊಡೆಯಿತೆನ್ನಲಾಗಿದೆ.
ಈ ವೇಳೆ ಬಸ್ ಚಾಲಕ ಬಸ್ಸನ್ನು ಸಂಪೂರ್ಣ ಎಡಭಾಗಕ್ಕೆ ಎಳೆದುಕೊಂಡದ್ದರಿಂದ ಬೈಕ್ ಸವಾರ ಬಲಬದಿಗೆ ಬಿದ್ದು, ಕೈ, ಹಾಗೂ ಎಡ ಕಾಲಿಗೆ ಗಂಭೀರವಾಗಿ ಗಾಯಗಳಾಗಿದೆ.
ಈ ವೇಳೆ ಪುತ್ತೂರಿನಿಂದ ಕನಕಮಜಲು ಕಡೆಗೆ ಬರುತ್ತಿದ್ದ ಅಟೋದಲ್ಲಿ ಗಾಯಾಳು ಯುವಕನನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ಹಾನಿಯಾಗಿದೆ. ಬಸ್ ಚಾಲಕ ನಿಧಾನವಾಗಿ ಬಸ್ ಚಲಾಯಿಸುತ್ತಿದ್ದ ಕಾರಣ ಚಾಲಕನ ಸಮಯಪ್ರಜ್ಞೆಯಿಂದ ಬಾರೀ ಅನಾಹುತ ತಪ್ಪಿದಂತಾಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?