ಬೆಂಗಳೂರು: ವಿಧಾನ ಪರಿಷತ್ ಸ್ಥಾನಕ್ಕೆ ನಮ್ಮ ಪಕ್ಷದಲ್ಲಿ ಬಹಳಷ್ಟು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದರು. ಅವರಿಗೆ ಮುಂದಿನ ದಿನಗಳಲ್ಲಿ ನ್ಯಾಯ ಒದಗಿಸಿ ಕೊಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ನಾಮಪತ್ರ ಸಲ್ಲಿಕೆ ನಂತರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿಕ್ರಿಯೆ ನೀಡಿದ ಅವರು, ಪರಿಷತ್ ಚುನಾವಣೆ ಟಿಕೆಟ್ ಹಂಚಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಎಸ್.ಆರ್. ಪಾಟೀಲ್ ಅವರು ಪಕ್ಷದ ಹಿರಿಯ ನಾಯಕರಿದ್ದು, ಹೈಕಮಾಂಡ್ ಅವರ ವಿಚಾರವನ್ನು ಗಮನಿಸಿದೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಈ ಬಾರಿ ಕೇವಲ 2 ಸ್ಥಾನಗಳಿಗೆ ಮಾತ್ರ ಅವಕಾಶವಿದ್ದು, ಹಿಂದೆ ಹೆಚ್ಚು ಪ್ರಾತಿನಿಧ್ಯ ನೀಡದವರಿಗೆ ಆದ್ಯತೆ ನೀಡಲಾಗಿದೆ. ಮಹಿಳೆಯರಿಗೂ ಆದ್ಯತೆ ನೀಡಲು ಚಿಂತನೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಸರಿ ಮಾಡುತ್ತೇವೆ ಎಂದರು.
ಕೋವಿಡ್ ನಿಯಮಾವಳಿ ಉಲ್ಲಂಘನೆ ವಿಚಾರವಾಗಿ ನಮ್ಮೆಲ್ಲ ನಾಯಕರಿಗೆ ಸಮನ್ಸ್ ಬಂದಿದ್ದು, ಬಿಜೆಪಿ ಸರ್ಕಾರ ಸಂವಿಧಾನ ಬಾಹಿರವಾಗಿ ಕೇವಲ ಕಾಂಗ್ರೆಸ್ ಪಕ್ಷದವರ ವಿರುದ್ಧ ಮಾತ್ರ ಪ್ರಕರಣ ದಾಖಲಿಸಿದೆ. ಬಿಜೆಪಿ ನಾಯಕರು ಹಾಗೂ ಸಚಿವರು ಹಲವು ಬಾರಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದರೂ, ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲ. ಆ ಮೂಲಕ ಬಿಜೆಪಿ ಸರ್ಕಾರ ದ್ವೇಷ ಸಾಧಿಸುತ್ತಿದೆ. ನಾವು ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದರು.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?