ನವದೆಹಲಿ: ಶಾಲೆಗೆ ಹೋಗುತ್ತಿದ್ದ 17 ವರ್ಷದ ಬಾಲಕಿಯ ಮೇಲೆ ಆ್ಯಸಿಡ್ ಎರಚಿದ (Acid Attack) ವ್ಯಕ್ತಿಯನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂದು ಬಿಜೆಪಿ ಸಂಸದ ಗೌತಮ್ ಗಂಭೀರ್ (Gautam Gambhir) ಒತ್ತಾಯಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಆ್ಯಸಿಡ್ ಎರಚುವಂತಹ ಪ್ರಕರಣಗಳಲ್ಲಿ ಪಾಲ್ಗೊಳ್ಳುವವರಲ್ಲಿ ಭಯವನ್ನು ಹುಟ್ಟು ಹಾಕುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಂಡು ಅವರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂದು ತಿಳಿಸಿದರು.
ಬುಧವಾರ ಪಶ್ಚಿಮ ದೆಹಲಿಯಲ್ಲಿ ಇಬ್ಬರು ಬೈಕ್ನಲ್ಲಿ ಬಂದ ಮುಸುಕುಧಾರಿಗಳಿಂದ ಬಾಲಕಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಅಲ್ಲಿಂದ ಪರಾರಿಯಾಗಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಘಟನೆ ನಡೆದು ಗಂಟೆಗಳೊಳಗೆ, ಆಕೆಯ ನೆರೆ ಮನೆಯಾತ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಾಲಕಿಗೆ ಮುಖದ ಮೇಲೆ ಸುಟ್ಟ ಗಾಯಗಳಾಗಿದ್ದು, ಆಕೆ ಸಫ್ದರ್ಜಂಗ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?