ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಾಲಿವುಡ್‌ ನಟಿ ಜಾಕ್ವೆಲಿನ್ ಫೆರ್ನಾಂಡಿಸ್‌ಗೆ ಇಡಿ ಕಂಟಕ: ದಿಲ್ಲಿ ಕೋರ್ಟ್‌ ಸಮನ್ಸ್

Twitter
Facebook
LinkedIn
WhatsApp
ಬಾಲಿವುಡ್‌ ನಟಿ ಜಾಕ್ವೆಲಿನ್ ಫೆರ್ನಾಂಡಿಸ್‌ಗೆ ಇಡಿ ಕಂಟಕ: ದಿಲ್ಲಿ ಕೋರ್ಟ್‌ ಸಮನ್ಸ್

ಹೊಸ ದಿಲ್ಲಿ: 200 ಕೋಟಿ ರೂಪಾಯಿಗೂ ಅಧಿಕ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬಾಲಿವುಡ್ ಖ್ಯಾತ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ದೆಹಲಿಯ ಪಟಿಯಾಲ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಸೆಪ್ಟಂಬರ್ 26ರಂದು ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಸುಕೇಶ್ ಚಂದ್ರಶೇಖರ್‌ಗೆ ಸಂಬಂಧಿಸಿದ ಬಹುಕೋಟಿ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಆರೋಪಿ ಎಂದು ಹೆಸರಿಸಿ ಜಾರಿ ನಿರ್ದೇಶನಾಲಯ (ಇಡಿ) ಆರೋಪಟ್ಟಿ ಸಲ್ಲಿಸಿದೆ. .

ಬೆಂಗಳೂರು ಮೂಲದ ಸುಕೇಶ್‌ ಚಂದ್ರಶೇಖರ್‌ ನಡೆಸಿರುವ 200 ಕೋಟಿ ರೂಪಾಯಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್‌ 10 ಕೋಟಿ ಮೌಲ್ಯದ ಉಡುಗೊರೆ ನೀಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು.  ಸುಕೇಶ್ ಚಂದ್ರಶೇಖರ್, ರಾನ್‌ಬಾಕ್ಸಿಯ ಮಾಜಿ ಪ್ರವರ್ತಕ ಅದಿತಿ ಸಿಂಗ್ ಮತ್ತು ಶಿವಿಂದರ್ ಸಿಂಗ್ ಅವರಿಗೆ ವಂಚನೆ ಮಾಡಿದ ಆರೋಪದ ಮೇರೆಗೆ ದೆಹಲಿ ಪೊಲೀಸರು  ಸುಕೇಶನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಚಂದ್ರಶೇಖರ್ ಹೊರತುಪಡಿಸಿ ಇಡಿ ಈ ಪ್ರಕರಣದಲ್ಲಿ ಅವರ ಪತ್ನಿ ಲೀನಾ ಮರಿಯಾ ಪಾಲ್, ಪಿಂಕಿ ಇರಾನಿ ಸೇರಿದಂತೆ ಎಂಟು ಜನರನ್ನು ಬಂಧಿಸಿದ್ದು ದೆಹಲಿ ನ್ಯಾಯಾಲಯಕ್ಕೆ ಎರಡು ಚಾರ್ಜ್ ಶೀಟ್‌ಗಳನ್ನು ಸಲ್ಲಿಸಿದೆ

ಬಾಲಿವುಡ್‌ ನಟಿ ಜಾಕ್ವೆಲಿನ್ ಫೆರ್ನಾಂಡಿಸ್‌ಗೆ ಇಡಿ ಕಂಟಕ: ದಿಲ್ಲಿ ಕೋರ್ಟ್‌ ಸಮನ್ಸ್

ಈ ಪ್ರಕರಣದ ವಿಚಾರಣೆ ನಡೆಸಿದ ದಿಲ್ಲಿ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪ್ರವೀಣ್ ಸಿಂಗ್ ಅವರು ಬುಧವಾರ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ. ಇಡಿ ಸಲ್ಲಿಸಿದ್ದ ಹೆಚ್ಚುವರಿ ಚಾರ್ಜ್‌ ಶೀಟ್‌ ಅನ್ನು ಪರಿಗಣನೆಗೆ ತೆಗದುಕೊಂಡು ನ್ಯಾಯಾಲಯ ಈ ಕ್ರಮ ಕೈಗೊಂಡಿದೆ. ಹೊಸ ಆರೋಪಿ ಎಂದು ಸೇರ್ಪಡೆಯಾಗಿರುವ ಜಾಕ್ವೆಲಿನ್ ಫೆರ್ನಾಂಡಿಸ್‌ಗೆ ಸೆಪ್ಟೆಂಬರ್ 26 ರಂದು ಇಡಿ ಎದುರು ಖುದ್ದು ಹಾಜರಾಗುವಂತೆ ಕೋರ್ಟ್‌ ತಾಕೀತು ಮಾಡಿದೆ.

ಇನ್ನು ಈ ಪ್ರಕರಣದ ಚಾರ್ಜ್‌ ಶೀಟ್‌ ಪ್ರತಿಯನ್ನು ಪ್ರಕರಣದ ಎಲ್ಲಾ ಆರೋಪಿಗಳಿಗೆ ನೀಡುವಂತೆಯೂ ಇಡಿಗೆ ನ್ಯಾಯಾಲಯ ತಾಕೀತು ಮಾಡಿದೆ. ಇದೇ ವೇಳೆ ನ್ಯಾಯಾಲಯದ ಗಮನ ಸೆಳೆದ ದಿಲ್ಲಿ ಪೊಲೀಸ್ ಪರ ವಕೀಲರು, ಇದೇ ಪ್ರಕರಣ ಸಂಬಂಧ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಆಗಸ್ಟ್ 29ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು. ಆದರೆ, ಅವರು ವಿಚಾರಣೆಗೆ ಬರಲಿಲ್ಲ. ಹೀಗಾಗಿ, ಮತ್ತೆ ಸಮನ್ಸ್ ಜಾರಿ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

ಈ ವೇಳೆ ನ್ಯಾಯಾಲಯಕ್ಕೆ ಭರವಸೆ ನೀಡಿದ ಜಾಕ್ವೆಲಿನ್ ಫೆರ್ನಾಂಡಿಸ್ ಪರ ವಕೀಲರು, ತಮ್ಮ ಕಕ್ಷೀದಾರರು ನ್ಯಾಯಾಲಯದ ಆದೇಶದ ಅನ್ವಯ ವಿಚಾರಣೆಗೆ ಹಾಜರಾಗುತ್ತಾರೆ, ತನಿಖೆ ಎದುರಿಸುತ್ತಾರೆ ಹಾಗೂ ಇಡಿಗೆ ಸ್ಪಂದಿಸುತ್ತಾರೆ ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist