ಬುಧವಾರ, ಏಪ್ರಿಲ್ 24, 2024
ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾಲ್ಯದಲ್ಲೇ ಅನಾಥಾಲಯದಲ್ಲಿ ಬೆಳೆದ ವಿದ್ಯಾರ್ಥಿ ಐಎಎಸ್‌ ಪಾಸ್‌!

Twitter
Facebook
LinkedIn
WhatsApp
Manoj 584x465 1

ಮುಳಬಾಗಿಲು: ತಂದೆಯ ಅಕಾಲಿಕ ನಿಧನದ ನಂತರ ಬಾಲ್ಯದಲ್ಲೇ ಅನಾಥಾಲಯದಲ್ಲಿ ಬೆಳೆದ ಹುಡುಗ ಮೊದಲ ಪ್ರಯತ್ನದಲ್ಲಿಯೇ ಯುಪಿಎಸ್‌ಸಿ ಪರೀಕ್ಷೆಯಲ್ಲಿ 478ನೇ ರ್‍ಯಾಂಕ್‌ ಗಳಿಸಿದ್ದಾನೆ.

ಮುಳಬಾಗಿಲು ನಗರದ ಶ್ರೀಲಕ್ಷ್ಮೀ ವೆಂಕಟೇಶ್ವರ ಆರ್ಫನ್‌ ಎಜುಕೇಷನಲ್‌ ಚಾರಿಟಬಲ್‌ ಟ್ರಸ್ಟ್‌ ಅನಾಥ ಆಶ್ರಮದ ಮನೋಜ್‌ ಕುಮಾರ್‌ ಮೊದಲ ಪ್ರಯತ್ನದಲ್ಲೇ ಈ ಸಾಧನೆ ಮಾಡಿದ್ದಾರೆ. ಮನೋಜ್‌ ಮೂಲತಃ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯವರು. ಬಾಲ್ಯದಲ್ಲೇ ಅನಾಥಾಶ್ರಮ ಸೇರಿ ಇತರ ಅನಾಥ ಮಕ್ಕಳ ಜತೆ ಆಡಿ ಬೆಳೆದರು.

ಸ್ಫೂರ್ತಿ ಆಗಿದ್ದಾರೆ: ಟ್ರಸ್ಟ್‌ನ ಎಲ್ಲರ ಹೆಮ್ಮೆಯ ಹುಡುಗನಾಗಿದ್ದ ಮನೋಜ್‌ ಕುಮಾರ್‌ಗೆ ಟ್ರಸ್ಟ್‌ ನ ಸಂಸ್ಥಾಪಕಿ ಚಿನ್ಮಯಿ ಆಸರೆ ಹಾಗೂ ಸ್ಫೂರ್ತಿಯಾಗಿದ್ದಾರೆ. 2010ರಲ್ಲಿ ಆರಂಭವಾದ ಟ್ರಸ್ಟ್‌ನಲ್ಲಿ ಈವರೆಗೆ ಸುಮಾರು 500 ಬಡವರಿಗೆ ಹಾಗೂ ಅನಾಥರಿಗೆ ಬಿ.ಕಾಂ, ಎಸ್ಸೆಸ್ಸೆಲ್ಸಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಶಿಕ್ಷಣ ಕೊಡಿಸಿದ್ದಾರೆ. ಈಗ ಸುಮಾರು 50 ಮಂದಿ ಅನಾಥಾಲಯದಲ್ಲಿ ಓದುತ್ತಿದ್ದಾರೆ.

ನಗರಸಭೆಯಲ್ಲಿ ಉದ್ಯೋಗ: ಮನೋಜ್‌ ಮುಳಬಾಗಿಲು ನಗರದಲ್ಲಿ ಎಸ್ಸೆಸ್ಸೆಲ್ಸಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿ, ಬಳಿಕ ಕೋಲಾರದಲ್ಲಿ ಪಿಯುಸಿ (ವಿಜ್ಞಾನ), ನಂತರ ಬೆಂಗಳೂರಿನಲ್ಲಿ ಬಿಸಿಎ ಪದವಿ ಶಿಕ್ಷಣ ಪೂರೈಸಿದರು.

ಹೈದರಾಬಾದ್‌ ನ ಲಾ ಎಕ್ಸಲೆನ್ಸ್‌ ಕೇಂದ್ರದಲ್ಲಿ ಯುಪಿಎಸ್‌ಸಿ ತರಬೇತಿ ಪಡೆದರು. ಈ ಮಧ್ಯೆ ಮುಳಬಾಗಿಲು ನಗರಸಭೆಯಲ್ಲಿ ತಾಂತ್ರಿಕ ಆಪರೇಟರ್‌ ಆಗಿ ಉದ್ಯೋಗ ಗಿಟ್ಟಿಸಿಕೊಂಡಿದ್ದರು. ಯುಪಿಎಸ್‌ಸಿ ಪರೀಕ್ಷೆಯಲ್ಲಿ ಕನ್ನಡ ಮತ್ತು ಪಬ್ಲಿಕ್‌ ಅಡ್ಮಿನಿಸ್ಟ್ರೇಶನ್‌ ವಿಷಯ ಆಯ್ಕೆ ಮಾಡಿಕೊಂಡಿದ್ದರು.

ಮತ್ತೊಮ್ಮೆ ಬರೆಯುವೆ: ಮುಳಬಾಗಿಲು ನಗರಸಭೆಯಲ್ಲಿ ಉದ್ಯೋಗದಲ್ಲಿದ್ದು ಕೋವಿಡ್‌ ಸಮಯದಲ್ಲಿ ಯುಪಿಎಸ್‌ಸಿ ಪರೀಕ್ಷೆ ಬರೆಯಲು ತೀರ್ಮಾನಿಸಿದೆ. ಪ್ರತಿನಿತ್ಯ 8 ಗಂಟೆ ಓದುತ್ತಾ ಬಳಿಕ ಕೋಚಿಂಗ್‌ ಕೇಂದ್ರಕ್ಕೆ ಸೇರಿದೆ. ತಮ್ಮ ಕನಸು ಐಎಎಸ್‌ ಅಧಿಕಾರಿ ಆಗಬೇಕು ಎಂಬುದು. ಈಗ ಬಂದಿರುವ ಬ್ಯಾಂಕ್‌ ಸಾಲದು, ಮತ್ತೊಮ್ಮೆ ಪರೀಕ್ಷೆ ಬರೆದು ರ್‍ಯಾಂಕ್‌ ಸುಧಾರಿಸಿಕೊಳ್ಳುವೆ ಎಂದು 23 ವರ್ಷ ವಯಸ್ಸಿನ ಮನೋಜ್‌ ಕುಮಾರ್‌ “ಉದಯವಾಣಿ’ಗೆ ತಿಳಿಸಿದರು.

ಶ್ರಮ ಹಾಕಿದರೆ ಕಷ್ಟವಲ್ಲ: ತಮ್ಮ ಈ ಸಾಧನೆಗೆ ಟ್ರಸ್ಟ್ ನ ಚಿನ್ಮಯಿ ಅವರೇ ಸ್ಫೂರ್ತಿ. ಅವರೇ ಓದಲು‌ ಸಹಕಾರ ನೀಡಿದರು. ಯುಪಿಎಸ್‌ಸಿ ಪರೀಕ್ಷೆ ಬರೆಯಲು ಪ್ರೇರಣೆ ತುಂಬಿದರು. ಹಾಗೆಯೇ ಯುಪಿಎಸ್‌ಸಿ ಪರೀಕ್ಷೆ ಸಾಕಷ್ಟು ಕಷ್ಟ ಎಂದು ಹೇಳುತ್ತಾರೆ, ಆದರೆ, ಶ್ರಮಹಾಕಿ ಓದಿದರೆ ಯಾವುದೂ ಕಷ್ಟವಲ್ಲ. ಆಸಕ್ತಿ ವಹಿಸಿ ಶೇ.100 ಶ್ರಮ ಹಾಕಿದರೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಬಹುದು ಎಂದು ಮನೋಜ್‌ ಹೇಳಿದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ